ದಲಿತರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಡಳಿತ ಮತ್ತುಪೊಲೀಸ್ ಇಲಾಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ


ಬೀದರ.02.ಮೇ.25:- ಬೀದರ್ ಜಿಲ್ಲೆಯ ಕೆಲವು ಕಡೆ ದಲಿತರ ಮೇಲೆ ಹಲ್ಲೆ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ತ್ವರಿತ ಕ್ರಮಕ್ಕೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.


ದೂರಿನಲ್ಲಿ ನೊಂದವರು ತಕ್ಷಣವೇ ರಕ್ಷಣೆ ಪಡೆಯಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಚಿವರು ಹೇಳಿದ್ದಾರೆ. ಬಸವಣ್ಣರು ನಿರ್ಮಿಸಿದ ಸಮತೆಯ ಸಮಾಜದ ತತ್ವಗಳಿಗೆ ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬೋಧಿಸಿದ ಸಂವಿಧಾನಾತ್ಮಕ ಮೌಲ್ಯಗಳಿಗೆ ಅಪಮಾನವಾಗುವಂತಹ ಇಂತಹ ಘಟನೆಗಳು ನಡೆದಿರುವುದರ ಬಗ್ಗೆ ಸಚಿವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.


ಸಾರ್ವಜನಿಕ ಕಾರ್ಯಕ್ರಮಗಳು, ಜಯಂತಿ ಉತ್ಸವಗಳ ಸಂದರ್ಭದಲ್ಲಿ ಯಾವುದೇ ರೀತಿಯ ಜನಾಂಗೀಯ ಉದ್ವಿಗ್ನತೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಮುಗ್ಧ ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.


ಖುದಾವಂದಪೂರ ಘಟನೆಯ ಕುರಿತು ಸಚಿವರು ತೀವ್ರ ಖಂಡನೆ ವ್ಯಕ್ತಪಡಿಸಿ, “ಬೀದರ್ ಶಾಂತಿಯ ತೋಟ. ಇಲ್ಲಿನ ಸೌಹಾರ್ದತೆಯ ವಾತಾವರಣಕ್ಕೆ ಧಕ್ಕೆಯಾಗದಂತೆ ಪ್ರತಿಯೊಬ್ಬರೂ ಜವಾಬ್ದಾರಿ ಹೊತ್ತು ನಡೆದುಕೊಳ್ಳಬೇಕು. ವೈಯಕ್ತಿಕ ವಿಚಾರಗಳನ್ನು ಸಾರ್ವತ್ರೀಕರಣ ಮಾಡುವ ಪ್ರಯತ್ನದಿಂದ ಶಾಂತಿ ಕದಡುವಂತಾಗಬಾರದು. ಒಂದು ಕಿಡಿಯನ್ನು ನಿರ್ಲಕ್ಷಿಸಿದರೆ ಅದು ಬೆಂಕಿಯ ಜ್ವಾಲೆಯಾಗುತ್ತದೆ,” ಎಂದು ತಿಳಿಸಿದ್ದಾರೆ.


ಮುಂದೆ ಇಂತಹ ಘಟನೆಗಳು ಮರುಕಳಿಸಿದರೆ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯನ್ನೇ ನೇರವಾಗಿ ಹೊಣೆ ಮಾಡಲಾಗುವುದು ಎಂಬ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.

prajaprabhat

Recent Posts

20 ಶಿಕ್ಷಕರ ಹುದ್ದೆಗಳು ಖಾಲಿ ಇಂದೆ  ಅರ್ಜಿ ಸಲ್ಲಿಸಿ.

2025-26ನೇ ಶೈಕ್ಷಣಿಕ ಸಾಲಿಗೆ ತಾಲೂಕುಗಳಲ್ಲಿ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗ ತಲಾ 02 ರಂತೆ ವಿಶೇಷ ಸಂಪನ್ಮೂಲ…

12 minutes ago

ಉನ್ನತ ಶಿಕ್ಷಣ ಪರಿವರ್ತನಾ ಯೋಜನಾ ಸಭೆ

ಬೆಂಗಳೂರು.10.ಜೂನ್.25:- ಉನ್ನತ ಶಿಕ್ಷಣ ಇಲಾಖೆಯ ರಾಜ್ಯದ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಹಾಗೂ ಹಲವು ಅಂಶಗಳ…

36 minutes ago

ಅತಿಥಿ ಶಿಕ್ಷಕರು, ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ಜಿಲ್ಲೆಯ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳು 1) ಪ.ಜಾತಿ, ಪ.ವರ್ಗ, 2) ಹಿಂದುಳಿದ ವರ್ಗಗಳ 22 ವಸತಿ…

1 hour ago

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

9 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

10 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

10 hours ago