ದೇಶದಲ್ಲೇ ಅತಿ ಎತ್ತರದ ಅಂಬೇಡ್ಕರ್‌ ಪ್ರತಿಮೆ ಬೆಂಗಳೂರಿನಲ್ಲಿ, ಸಿಎಂ ಸಿದ್ದರಾಮಯ್ಯ

ಬೆಂಗಳೂರು.15.ಏಪ್ರಿಲ್.25:- ಇಂದು ಬೆಂಗಳೂರಿನಲ್ಲಿ ಸಂವಿಧಾನ್ ಶಿಲ್ಪಿ ಭಾರತ್ ರತ್ನ ಬಾಬಾ ಸಾಹೇಬ್ ಡಾ. ಭೀಮರಾವ ಅಂಬೇಡ್ಕರ್ ಮ್ಯೂಸಿಯಮ್ ಸ್ಥಾಪಿಸಲಾಗುವುದು ಮತ್ತು ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ  ಘೋಷಿಸಿದ್ದಾರೆ.

ಅಂಬೇಡ್ಕರ್ ಜಯಂತಿಯಾದ ಇಂದು ಮಹತ್ವದ ನಿರ್ಧಾರ ಕೈಗೊಂಡಿದ್ದೇವೆ.

ಬಾಬಾ ಸಾಹೇಬರ ಜೀವನ ಸಾಧನೆಗಳನ್ನು ಮತ್ತಷ್ಟು ಪ್ರಚುರಪಡಿಸಲು ಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಮ್ ಮತ್ತು ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಯ ಘೋಷಣೆ ಮಾಡಿದ್ದೇನೆ.

ನಮ್ಮ ಅಂಬೇಡ್ಕರ್ ನಮಗೆ ಮಾದರಿ

– ಮುಖ್ಯಮಂತ್ರಿ ಸಿದ್ದರಾಮಯ್ಯ

ಇಂದು ಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಮ್ ಸ್ಥಾಪಿಸಲಾಗುವುದು ಮತ್ತು ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಅವರು ಅಂಬೇಡ್ಕರ್‌ ಜಯಂತಿಯಂದು ಅವರು ಭರವಸೆ ನೀಡಿದರು.

ಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ 134ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ರಾಜ್ಯದಲ್ಲಿ ಜಾರಿಗೆ ತಂದಿರುವ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲು ನಿಮ್ಮಿಂದ ಸಾಧ್ಯವೇ ನರೇಂದ್ರ ಮೋದಿ ಅವರೇ? ರಾಷ್ಟ್ರಮಟ್ಟದಲ್ಲಿ ಈ ಕಾಯ್ದೆಯನ್ನು ಜಾರಿಗೆ ತಂದು ತೋರಿಸಿ ಎಂದು ಸವಾಲೆಸೆದರು.

ಆರ್.ಎಸ್.ಎಸ್ ಮತ್ತು ಬಿಜೆಪಿ ಪರಿವಾರ ಹೇಳುವ ಸುಳ್ಳುಗಳನ್ನು ಮೆಟ್ಟಿನಿಂತು, ಸತ್ಯ ಹೇಳುವ ಎದೆಗಾರಿಕೆಯನ್ನು ನಮ್ಮ ಪಕ್ಷದ ಕಾರ್ಯಕರ್ತರು ಬೆಳೆಸಿಕೊಳ್ಳಬೇಕು. ಕಾಂಗ್ರೆಸ್ ಕಾರ್ಯಕರ್ತರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು. ಕಾರಣ ಸೈದ್ಧಾಂತಿಕ ಹೋರಾಟವನ್ನು ನಾವು ನೀವೆಲ್ಲಾ ಈ ದೇಶದ ಭವಿಷ್ಯಕ್ಕಾಗಿ ಮುನ್ನಡೆಸಬೇಕಾಗಿದೆ. ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸಿದ್ದು, ಅಂಬೇಡ್ಕರ್ ಅವರು ಮನುಸ್ಮೃತಿಗೆ ಬೆಂಕಿ ಹಾಕಿ ಸುಟ್ಟಿದ್ದು ಏಕೆ? ಎನ್ನುವುದನ್ನು ನಮ್ಮ ಕಾರ್ಯಕರ್ತರು ಸ್ಪಷ್ಟವಾಗಿ ಅರಿತುಕೊಳ್ಳಬೇಕು. ಜನರಿಗೆ, ಇವತ್ತಿನ ಯುವ ಸಮುದಾಯಕ್ಕೆ ಸತ್ಯವನ್ನು ಅರ್ಥ ಮಾಡಿಸಬೇಕು ಎಂದರು.

ಮನುಸ್ಮೃತಿ ಮತ್ತು ಜಾತಿ ವ್ಯವಸ್ಥೆ ಕಾರಣದಿಂದ ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾಗಿದ್ದ ಎಲ್ಲಾ ಜಾತಿ, ಸಮುದಾಯಗಳನ್ನು ದೌರ್ಜನ್ಯಮುಕ್ತಗೊಳಿಸಲು ಅಂಬೇಡ್ಕರ್ ಅವರ ಬದುಕು ಮುಡಿಪಾಗಿತ್ತು. ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗಾಗಿ, ಅಸ್ಪೃಶ್ಯತೆ ಹೋಗಲಾಡಿಸುವುದಕ್ಕಾಗಿ ತಾನು ಶಿಕ್ಷಣ ಪಡೆದದ್ದಾಗಿ ಅಂಬೇಡ್ಕರ್ ಹೇಳಿದ ಮಾತು ಅವರ ಆಶಯ ಎಂಥದ್ದು ಎನ್ನುವುದನ್ನು ತೋರಿಸುತ್ತದೆ. 1952 ರ ಜನವರಿ 18 ರಂದು ಅಂಬೇಡ್ಕರ್ ಅವರು ತಮ್ಮ ಕೈಯಾರೆ ತಮ್ಮದೇ ಹಸ್ತಾಕ್ಷರದಲ್ಲಿ ಒಂದು ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ತಮ್ಮನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಸ್ಪಷ್ಟವಾಗಿ ಬರೆದಿದ್ದಾರೆ. ಆದರೂ ಬಿಜೆಪಿಯವರು ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್ ಎಂದು ಸುಳ್ಳು ಹೇಳುತ್ತಾ ತಿರುಗುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಜನರಿಗೆ ಈ ಸತ್ಯ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು ಎಂದರು.

ಎಲ್ಲಾ ಜಾತಿ, ಎಲ್ಲಾ ಧರ್ಮದವರನ್ನೂ ಸಮಾನವಾಗಿ ಕಾಣುವ ಎಲ್ಲರ ಪ್ರಗತಿಗೆ ಕಾರ್ಯಕ್ರಮಗಳನ್ನು ರೂಪಿಸಿ, ಜಾರಿ ಮಾಡಿರುವ ಚರಿತ್ರೆ ಮತ್ತು ವರ್ತಮಾನ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ಬಿಜೆಪಿಯವರಿಗೆ ಸಾರ್ವಕರ್ ಮತ್ತು ಗಾಂಧಿಯನ್ನು ಕೊಲೆ ಮಾಡಿದ ಗೋಡ್ಸೆ ಬಿಟ್ಟು ಉಳಿದ ಯಾರೂ ಬೇಕಾಗಿಲ್ಲ. ಆದರೆ ನಮಗೆ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎನ್ನುವ ಮೂರು ಮಂತ್ರಗಳನ್ನು ನೀಡಿದ ಅಂಬೇಡ್ಕರ್ ಬೇಕು, ಇವರು ನಮಗೆ ಬೇಕು ಎಂದರು.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

4 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

4 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

4 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

4 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

4 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

5 hours ago