ಹೊಸ ದೆಹಲಿ.17.ಜೂನ್.25:- ದೇಶದ ವಿವಿಧ ಭಾಗಗಳಲ್ಲಿ ಎರಡು ಸಾವಿರ ಚಾಲನಾ ತರಬೇತಿ ಶಾಲೆಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ದೇಶದ ಹಿಂದುಳಿದ ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಈ ತರಬೇತಿ ಶಾಲೆಗಳನ್ನು ತೆರೆಯಲಾಗುವುದು, ಇದು ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದರು.
ದೇಶದಲ್ಲಿ ಸುಮಾರು 22 ಲಕ್ಷ ಚಾಲಕರ ಕೊರತೆಯಿದೆ ಮತ್ತು ಈ ತರಬೇತಿ ಶಾಲೆಗಳು ಕೌಶಲ್ಯಪೂರ್ಣ ಚಾಲಕರ ಕೊರತೆಯನ್ನು ಪೂರೈಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.
ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ತಮ್ಮ ಸಚಿವಾಲಯ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಸಂಚಾರ ನಿಯಮಗಳನ್ನು ಪಾಲಿಸುವಂತೆ ಜನರಿಗೆ ಕರೆ ನೀಡಿದೆ ಎಂದು ಶ್ರೀ ಗಡ್ಕರಿ ಹೇಳಿದರು.
ಬೀದರ.17.ಜೂನ್.25:- ಕಮಲನಗರ ತಾಲೂಕಿನ ಹೊಲಸಮುದ್ರ ಗ್ರಾಮದ ಬೀಜ ವಿತರಣೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೋಮವಾರ ಭೇಟಿ ನೀಡಿ…
ಬೀದರ.17.ಜೂನ್.25:- ಇದೇ ಜೂನ್.21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು "ಒಂದು ಭೂಮಿ, ಒಂದು ಆರೋಗ್ಯ" ಎಂಬ ಧ್ಯೇಯ ವಾಕ್ಯದೊಂದಿಗೆ ಆಚಾರಿಸಲಾಗುತ್ತಿದ್ದು…
ಬೀದರ.17.ಜೂನ್.25:- ಬೀದರ ವಿಶ್ವವಿದ್ಯಾಲಯ ಬೀದರ ಹಾಗೂ ಕವಿರತ್ನ ಕಾಳಿದಾಸ ಪ್ರಥಮ ದರ್ಜೆ ಕಾಲೇಜು, ಬೀದರ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಸೇವಾ…
ಈ ವರ್ಷದಿಂದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಅಧ್ಯಾಪಕರ ನೇಮಕಾತಿಗಳು GFMS ಮೂಲಕ ಕೇಂದ್ರೀಕೃತಗೊಳ್ಳಲಿವೆಇಂದೋರ್: ಮುಂಬರುವ ಶೈಕ್ಷಣಿಕ ವರ್ಷದಿಂದ, ಉನ್ನತ ಶಿಕ್ಷಣ…
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಬೈಕಂಪಾಡಿ, ಮಂಗಳೂರು ಇಲ್ಲಿ 2025-26 ನೇ ಸಾಲಿನ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ.…
ಬೆಂಗಳೂರು.17.ಜೂನ್.25:- ರಾಜ್ಯ ಸರ್ಕಾರದಿಂದ ಪಿಎಸ್ಐ ನೇಮಕಾತಿ ಹಗರಣದಲ್ಲಿ ಕರ್ತವ್ಯಲೋಪವೆಸಗಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಅಮಾನತನ್ನು ಸರ್ಕಾರ ತೆರವುಗೊಳಿಸಿ ಆದೇಶಿಸಿದೆ.…