ದೇಶದ 75% ವಿಶ್ವವಿದ್ಯಾಲಯಗಳಲ್ಲಿ ಬೋಧಕ ಹುದ್ದೆಗಳು  ಖಾಲಿ ವಿಶ್ರಾಂತ ಕುಲಪತಿ ಎಸ್. ಚಂದ್ರಶೇಖರ ಆಗ್ರಹ

ಬೆಂಗಳೂರು.10.ಏಪ್ರಿಲ್.25:- ನಮ್ ದೇಶದಲ್ಲಿರುವ 1,215 ವಿಶ್ವ ವಿದ್ಯಾಲಯಗಳಲ್ಲಿ  70 %  ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇವೆ. ಸರ್ಕಾರ ಖಾಲಿ ಇರುವ ಹುದೇ ಗಳು ಶೀಘ್ರದಲ್ಲೇ ಭರ್ತಿ ಮಾಡಬೇಕು ಎಂದು ರಾಜೀವಗಾಂಧಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎಸ್. ಚಂದ್ರಶೇಖರ ಶೆಟ್ಟಿ ಅವರು ಸರ್ಕಾರವನ್ನು ಹೇಳಿದ್ರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ(ಬಿಸಿಯು) ನಿರ್ಗಮಿತ ಕುಲಪತಿ ಪ್ರೊ. ಲಿಂಗರಾಜ ಗಾಂಧಿಯವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಸರ್ಕಾರ, ಉನ್ನತ ಶಿಕ್ಷಣದ ಮುನ್ನಡೆಗೆ ಆಯವ್ಯಯದಲ್ಲಿ ಹೆಚ್ಚಿನ ಹಣಕಾಸಿನ ಬೆಂಬಲ ಒದಗಿಸಬೇಕಾದ ಅಗತ್ಯವಿದೆ’ ಎಂದು ಅವರು ಪ್ರತಿಪಾದಿಸಿದರು.

‘ಲಿಂಗರಾಜ ಗಾಂಧಿಯವರು, ಬಿಸಿಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸುವ ಮೂಲಕ, ವಿಶ್ವವಿದ್ಯಾಲಯದ ಪ್ರಗತಿಗೆ ಶ್ರಮಿಸಿದ್ದಾರೆ’ ಎಂದು ಶ್ಲಾಘಿಸಿದರು.

ಅಭಿನಂದನಾ ಭಾಷಣ ಮಾಡಿದ ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಕೆ. ಚಿದಾನಂದ ಗೌಡ ‘ಗ್ರಾಮೀಣ ಪ್ರದೇಶದಿಂದ ಬಂದ ಲಿಂಗರಾಜ ಗಾಂಧಿಯವರು, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಗಮನ ಹರಿಸಿದ್ದರು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ ಕೃಷ್ಣ ಮಾತನಾಡಿ, ‘ಸರ್ಕಾರಿ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಿಗೆ ಶೀಘ್ರ ಕಾಯಂ ಬೋಧಕರನ್ನು ನೇಮಕ ಮಾಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

‘ನಾಲ್ಕು ದಶಕಗಳಿಂದ ಉನ್ನತ ಶಿಕ್ಷಣ ಕ್ಷೇತ್ರದ ವಿವಿಧ ಹುದ್ದೆಗಳಲ್ಲಿ ಪ್ರೊ. ಲಿಂಗರಾಜ ಗಾಂಧಿಯವರು ಉತ್ತಮ ಕೆಲಸ ಮಾಡಿದ್ದಾರೆ’ ಎಂದು ಶ್ಲಾಘಿಸಿದರು.

ಸಮಾರಂಭದಲ್ಲಿ ಪ್ರೊ.ಲಿಂಗರಾಜ ಗಾಂಧಿ ಮತ್ತು ಸೌಮ್ಯ ಗಾಂಧಿ ದಂಪತಿಯನ್ನು ಅಭಿನಂದಿಸಲಾಯಿತು. ‌

ಮಾಜಿ ಶಿಕ್ಷಣ ಸಚಿವರಾದ ಪ್ರೊ. ಬಿ.ಕೆ. ಚಂದ್ರಶೇಖರ್, ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು, ಬಿಸಿಯು ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು, ಬಿಸಿಯು ಕುಲಸಚಿವ (ಮೌಲ್ಯಮಾಪನ) ಪ್ರೊ. ಬಿ.ರಮೇಶ್, ಕುಲಸಚಿವ ಟಿ. ಜವರೇಗೌಡರು, ವಿತ್ತಾಧಿಕಾರಿ ಎಂ.ವಿ. ವಿಜಯಲಕ್ಷ್ಮಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

4 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

4 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

4 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

4 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

4 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

5 hours ago