10/06/2025 12:47 PM

Translate Language

Home » ಲೈವ್ ನ್ಯೂಸ್ » ನಕಲಿ ಅಂಕಪಟ್ಟಿ: ಎಫ್‌ಐಆರ್‌ ದಾಖಲು.!

ನಕಲಿ ಅಂಕಪಟ್ಟಿ: ಎಫ್‌ಐಆರ್‌ ದಾಖಲು.!

Facebook
X
WhatsApp
Telegram

ಮಂಡ್.14.ಫೆ.25:-: ರಾಜ್ಯದಲ್ಲಿ ಪ್ರತಿದಿನ ಬೆಳಕಿಗೆ ಬರುತ್ತಿರುವ ನಕಲಿ ಅಂಕಪಟ್ಟಿ ಪ್ರಕರಣಗಳು ಇಲ್ಲಿ ಮತ್ತೊಂದ ನಕಲಿ ಅಂಕಪಟ್ಟಿ ಜಾಲ ಪತ್ತೆ.

ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ನಕಲಿ ಅಂಕಪಟ್ಟಿಗಳನ್ನು ಕೊಟ್ಟಿದ್ದಾರೆ’ ಎಂಬ ಆರೋಪದ ಮೇರೆಗೆ ವಿ.ವಿನೋದ್‌ ಎಂಬುವವರ ವಿರುದ್ಧ ಮಂಡ್ಯ ಪಶ್ಚಿಮ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಅರಸಿನಕುಂಟೆಯ ಆದರ್ಶ ನಗರದ ನಿವಾಸಿ.

2022ರಲ್ಲಿ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಸ್ನಾತಕೋತ್ತರ ಪದವಿಯನ್ನು (ಎಂ.ಟೆಕ್‌ ಇನ್‌ ಸಿವಿಲ್‌ ಎಂಜಿನಿಯರಿಂಗ್‌) ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ (ಕೆಎಸ್‌ಒಯು) ಪ್ರಥಮ ದರ್ಜೆಯೊಂದಿಗೆ ಪಡೆದಿರುವುದಾಗಿ ಹೇಳಿ, 2016ನೇ ಸಾಲಿನ ನಕಲಿ ಅಂಕಪಟ್ಟಿ ಸಲ್ಲಿಸಿದ್ದಾರೆ’ ಎಂದು ಸಾಮಾಜಿಕ ಹೋರಾಟಗಾರ ಕೆ.ಆರ್‌.ರವೀಂದ್ರ ದೂರು ಸಲ್ಲಿಸಿದ್ದರು.

‘ವಿನೋದ್‌ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿರ್ಮಿತಿ ಕೇಂದ್ರದಲ್ಲಿ 2014ರಿಂದ 2019ರವರೆಗೆ ಸಹಾಯಕ ಯೋಜನಾ ವ್ಯವಸ್ಥಾಪಕರಾಗಿ ಹಾಗೂ ಕೆಆರ್‌ಐಡಿಎಲ್‌ನಲ್ಲೂ ಕರ್ತವ್ಯ ನಿರ್ವಹಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ನಕಲಿ ಅಂಕಪಟ್ಟಿ ಸಲ್ಲಿಸಿ ಸರ್ಕಾರಕ್ಕೆ ವಂಚನೆ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ದೂರು ಪತ್ರದಲ್ಲಿ ಒತ್ತಾಯಿಸಿದ್ದರು.

ಆಯ್ಕೆ ರದ್ದು:

ಜಿಲ್ಲಾಧಿಕಾರಿ ಅಧ್ಯಕ್ಷತೆಯ ಆಯ್ಕೆ ಸಮಿತಿಯು 2023ರಲ್ಲಿ ವಿನೋದ್‌ ಅವರನ್ನು ವ್ಯವಸ್ಥಾಪಕರ ಹುದ್ದೆಗೆ ಆಯ್ಕೆ ಮಾಡಿದ್ದರ ಬಗ್ಗೆ ‌ಆಕ್ಷೇಪಿಸಿದ್ದ ಗುತ್ತಿಗೆದಾರ ರವಿಕುಮಾರ್‌ ಎಂಬುವವರು ದೂರು ಅರ್ಜಿ ಸಲ್ಲಿಸಿದ್ದರು. ಆಗ, ಅಂಕಪಟ್ಟಿಯ ನೈಜತೆ ಪರಿಶೀಲಿಸಲು ಮುಕ್ತ ವಿವಿ ಕುಲಸಚಿವರಿಗೆ ಜಿಲ್ಲಾಧಿಕಾರಿ ಪತ್ರ ಬರೆದಿದ್ದರು. ವಿನೋದ್‌ ಸ್ನಾತಕೋತ್ತರ ಪದವಿ ಪಡೆದಿಲ್ಲ ಎಂದು ಮುಕ್ತ ವಿವಿ ಮಾಹಿತಿ ನೀಡಿತ್ತು. ಹೀಗಾಗಿ ವಿನೋದ್‌ ಅವರ ಆಯ್ಕೆಯನ್ನು ರದ್ದುಗೊಳಿಸಲಾಗಿತ್ತು.

ಈ ನಕಲಿ ಅಂಕಪಟ್ಟಿಗಳ ಪ್ರಕರಣ ದಾಖಲಾಗಿದೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ (ಕೆಎಸ್‌ಒಯು) ಪ್ರಥಮ ದರ್ಜೆಯೊಂದಿಗೆ ಪಡೆದಿರುವುದಾಗಿ ಹೇಳಿ, 2016ನೇ ಸಾಲಿನ ನಕಲಿ ಅಂಕಪಟ್ಟಿ ಸಲ್ಲಿಸಿದ್ದಾರೆ’ ಎಂದು ಸಾಮಾಜಿಕ ಹೋರಾಟಗಾರ ಕೆ.ಆರ್‌.ರವೀಂದ್ರ ದೂರು ಸಲ್ಲಿಸಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!