ನನ್ನನ್ನು ಪಾಸ್ ಮಾಡಿ..ನನ್ನ ಲವ್ ಸ್ಟೋರಿ ಕಾಪಾಡಿ – ಉತ್ತರ ಪತ್ರಿಕೆ ಜೊತೆ 500/- ಹಣ ಇಟ್ಟ ವಿದ್ಯಾರ್ಥಿ

ಚಿಕ್ಕೋಡಿ.19.ಏಪ್ರಿಲ್.25:- ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ ಮೌಲ್ಯ ಮಾಪನದ ವೇಳೆ ವಿದ್ಯಾರ್ಥಿಯೊಬ್ಬ ಪ್ರಶ್ನೆಗಳಿಗೆ ಉತ್ತರದ ಬದಲು ಸಿನಿಮಾ ಹಾಡು,ಕಥೆ,‌ಕವನ ಬರೆದು ಸಿಕ್ಕಿಬಿದ್ದ ಘಟನೆಗಳನ್ನು ನೋಡಿರ್ತೀರಾ.ಆದರೆ ಇಲ್ಲೊಬ್ಬ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೌಲ್ಯ ಮಾಪನ ಮಾಡುವ ಶಿಕ್ಷಕರಿಗೆ 500 ರೂ.

ನೋಟು ಇಟ್ಟು ತನ್ನನ್ನು ಪಾಸ್ ಮೂಡುವ ಮೂಲಕ ತನ್ನ ಲವ್ ಸ್ಟೋರಿಯನ್ನು ಉಳಿಸುವಂತೆ ಕೇಳಿಕೊಂಡಿದ್ದಾನೆ.

ಚಿಕ್ಕೋಡಿಯ ಸ್ಟೂಡೆಂಟ್ ಒಬ್ಬ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತನ್ನನ್ನು ಪಾಸ್ ಮಾಡುವಂತೆ ಉತ್ತರ ಪತ್ರಿಕೆಯಲ್ಲಿ ಬರೆದು ಶಿಕ್ಷಕರಿಗೆ ವಿಚಿತ್ರ ಬೇಡಿಕೆಯಿಟ್ಟ ಸಂಗತಿ ಬೆಳಕಿಗೆ ಬಂದಿದೆ. ಹೌದು, ನೀವು ನನ್ನನ್ನು ಎಕ್ಸಾಂ ನಲ್ಲಿ ಪಾಸ್ ಮಾಡಿದರೆ ಮಾತ್ರ ನನ್ನ ಪ್ರೇಯಸಿ ನನ್ನನ್ನು ಲವ್ ಮಾಡುವುದಾಗಿ ಹೇಳಿದ್ದಾಳೆ. ಹೀಗಾಗಿ ದಯಮಾಡಿ ನನ್ನನ್ನು ಓಎಸ್ ಮಾಡಿ ಎಂದು ಬೇಡಿಕೊಂಡಿದ್ದಾನೆ.

ಶಿಕ್ಷಕರೇ..ಪ್ಲೀಸ್ ನನ್ನ ಲವ್ ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದು ಉತ್ತರ ಪತ್ರಿಕೆಯ ಜೊತೆಗೆ 500 ರುಪಾಯಿ ಹಣ ಇಟ್ಟು,ಈ ದುಡ್ಡಲ್ಲಿ ನೀವು ಚಹಾ ಕುಡಿಯಿರಿ ಎಂದು ಬೇಡಿಕೊಂಡ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ.ಆದ್ರೆ ಈ ವಿದ್ಯಾರ್ಥಿ, ಸರ್ ನನ್ನನ್ನು ದಯವಿಟ್ಟು ಪಾಸ್ ಮಾಡಿ.

ನಿಮಗೆ ದೇವರು ಒಳ್ಳೆಯದು ಮಾಡಲಿ, ನಿಮ್ಮ ಹೆಸರು ಹೇಳಿ ಬದುಕುತ್ತೀನಿ ಎಂದು ವಿನಮ್ರವಾಗಿ ಬೇಡಿಕೊಂಡ ಉದಾಹರಣೆಯೂ ಇದೆ. ಆದರೆ ಹೀಗೆ ಲವ್ ಮಾಡುತ್ತೇನೆ ಎಂದು ಬರೆದು ಹಣ ಇಟ್ಟುಕಳಿಸಿದ್ದನ್ನು ನೋಡಿ ಮೇಲ್ವಿಚಾರಕರು ನೋಡಿ ಬೇಸರ ವ್ಯಕ್ತಪಡಿಸಿದ್ದಾರೆ.

prajaprabhat

Recent Posts

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

2 minutes ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

6 minutes ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

10 minutes ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

29 minutes ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

3 hours ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

3 hours ago