ನಮ್ಮ ಭಾಷೆಯ ಸೊಗಡ ಅಮೂಲ್ಯವಾಗಿದೆ ಸಾಹಿತಿ ಕೋಡಿ ಉಗನೆ ಮಂಜು.

ಯಳಂದೂರು.13.ಜೂನ್.25:- ಪಟ್ಟಣದ  ಅಂಬೇಡ್ಕರ್ ಭವನದ ಮುಂಭಾಗ ಬುದ್ಧ ಪ್ರಿಯ ಅಶೋಕ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿವೃತ್ತಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಸಾಹಿತಿ ಕೋಡಿ ಉಗನೆ ಮಂಜುನಾಥ್ ಪ್ರಸನ್ನ ರವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಡಾ ಬಿ ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ ಬಳಿಕ ಮಾತನಾಡಿದರು.

ಚಾಮರಾಜನಗರ ಜಿಲ್ಲೆಯು ಜನಪದಕ್ಕೆ ಹೆಸರುವಾಸಿಯಾಗಿದೆ ಪ್ರಪಂಚದ ಜನಪದ ಸಾಹಿತ್ಯದಲ್ಲಿ ಮಹದೇಶ್ವರರು ಮಂಟೇಸ್ವಾಮಿ, ಬಿಳಿಗಿರಿರಂಗರಂಗಪ್ಪನವರ ಜನಪದ ಕಾವ್ಯ ಮಹತ್ವವನ್ನು ಪಡೆದುಕೊಂಡಿದೆ ಇಂದಿಗೂ ಈ ಭಾಗದಲ್ಲಿ  ಜನಪದ  ಸಾಹಿತ್ಯ ಉಳಿದಿದೆ ಅಂದರೆ ಅದಕ್ಕೆ ಕಾರಣ  ನೀಲಗಾರರು, ದಾಸಪ್ಪನವರು, ದೇವರಗುಡ್ಡರು ಇವರು ಮನೆ ಮನೆಗೆ ತೆರಳಿ ಗಾಯನದ ಮೂಲಕ ಅಥವಾ ಕಥೆಯ ಮೂಲಕ ಮಂಟೇಸ್ವಾಮಿ, ಮಹದೇಶ್ವರರು ಹಾಗೂ ಬಿಳಿಗಿರಿರಂಗಪ್ಪನವರ ತತ್ವಗಳನ್ನು ತಿಳಿಸಿ ಬೆಳಿಸಿದ್ದಾರೆ.

ನಮ್ಮ ಚಾಮರಾಜನಗರ ಭಾಷೆಯ ಸೊಗಡಿಗೆ ರಾಜ್ಯದ ಇತರೆ ಜಿಲ್ಲೆಯ ಜನರು ಮನಸೋತಿದ್ದಾರೆ. ಇಂದಿನ ಯುವಕರು ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಬೇಕಾಗಿದೆ. ಯುವಕರು ವೈಜ್ಞಾನಿಕ ಚಿಂತನೆಗಳನ್ನು ಅಳವಡಿಸಿಕೊಂಡು ಉತ್ತಮ ಬರಹಗಾರರಾಗಬೇಕು.

ನಾವು ರಚಿಸಿರುವಂತಹ ಬೆಟ್ಟದಬೇಗೆ ಕವನ ಸಂಕಲನ ಆಡುಮಾತಿನ ಶೈಲಿಯಲ್ಲಿ ರಚನೆಯಾಗಿದೆ ಹಳ್ಳಿಯ ನೈಜ ಚಿತ್ರಣ ಅಡಕವಾಗಿದೆ ಪ್ರತಿಯೊಬ್ಬರೂ ಓದಬೇಕಾಗಿದೆ. ಇನ್ನೂ ಅನೇಕ ಪುಸ್ತಕಗಳನ್ನು ಹೊರತರಲಾಗುತ್ತದೆ.

ನಮ್ಮ ಚಾಮರಾಜನಗರ ಜಿಲ್ಲೆಯ ವೈಭವ ಕುರಿತು ಬರೆಯಲಾಗುತ್ತದೆ  ಎಂದರು
ಎಂದರು ಈ ಸಂದರ್ಭದಲ್ಲಿ ಯರಿಯೂರು ರಾಜಣ್ಣ, ಉಪನ್ಯಾಸಕ ಉಮಾಶಂಕರ್, ಕೃಷ್ಣರಾಜ್, ದೊಡ್ಡರಾಜ್, ವಸಂತಕುಮಾರ್, ನಂಜುಂಡಸ್ವಾಮಿ, ನಾಗೇಂದ್ರ,  ಮಹದೇವಸ್ವಾಮಿ,ಕುಮಾರ್  ಹಾಜರಿದ್ದರು.
ವರದಿ.ಪ್ರಸನ್ನಕುಮಾರ್ ಕೆಸ್ತೂರು

prajaprabhat

Recent Posts

‘ಗೃಹ ಆರೋಗ್ಯ ಯೋಜನೆ’ ರಾಜ್ಯಾದ್ಯಂತ ವಿಸ್ತರಿಸಿ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು.14.ಜೂನ್.25:- ಗೃಹ ಆರೋಗ್ಯ ಯೋಜನೆ' ರಾಜ್ಯಾದ್ಯಂತ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.2025-26ನೇ ಸಾಲಿನ ಆಯವ್ಯಯ ಖಂಡಿಕೆ 143 ರಲ್ಲಿ ಘೋಷಿಸಿರುವಂತೆ…

2 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 3000 ಕ್ಕೂ ಹೆಚ್ಚು ಬೋಧಕರ ಹುದ್ದೆಗಳು ಖಾಲಿ.!

* ರಾಜ್ಯದಲ್ಲಿ ಸರಿಸುಮಾರು 3000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು, ಬೆಂಗಳೂರು.14.ಜೂನ್.25:-ವಿಶ್ವ ವಿದ್ಯಾಲಯಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ…

4 hours ago

ರಾಜ್ಯದ ವಿಕಲಚೇತನ ವ್ಯಕ್ತಿಗಳ  ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು.14.ಜೂನ್.25:- ಪ್ರಸ್ತಕ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ…

5 hours ago

ಕೇಂದ್ರ ಶಿಕ್ಷಣ ಯೋಜನೆ – ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (P M VIDYALXMI SCHEMES) ಯೋಜನೆ

ಹೊಸ ದೆಹಲಿ.14.ಜೂನ್.25:- (PM VIDYALAXMI SCHEMES) ಕೇಂದ್ರ ಶಿಕ್ಷಣ ಯೋಜನೆ - ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (ಪಿಎಂ-ವಿದ್ಯಾಲಕ್ಷ್ಮಿ) ಯೋಜನೆ "ಪಿಎಂ…

5 hours ago

ಗುತ್ತಿಗೆ ಮೀಸಲು ಜಾರಿಗೆ ವಿಧೇಯಕ ವಿಂಗಡಣೆ

ಬೆಂಗಳೂರು.14.ಜೂನ್.25:- ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ತಿದ್ದುಪಡಿ ವಿಧೇಯಕವನ್ನೇ ವಿಂಗಡಿಸುವ ಗಂಭೀರ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ.…

5 hours ago

ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ  ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಅಹ್ವಾನ

ಶಿವಮೊಗ್ಗ.14.ಜೂನ್.25:-  ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ…

6 hours ago