Categories: ರಾಜ್ಯ

ನಮ್ಮ ಸಂಸ್ಕ್ರತಿ ನಮ್ಮ ಹೆಮ್ಮೆ…

ಔರಾದ.05.ಮಾರ್ಚ.25:- ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಬೋಂತಿ ತಾಂಡಾದಲ್ಲಿ ಸನಾತನ ಧರ್ಮದ ಪರಂಪರೆಯಲ್ಲಿ ವಿಶೇಷವಾಗಿ ನಮ್ಮ ಬಂಜಾರ ಸಮುದಾಯದವರ ಸಂಭ್ರಮದಿಂದ ಆಚರಿಸುವ ಹಬ್ಬಗಳಲ್ಲಿ ಹೋಳಿ ಹಬ್ಬ ಅತ್ಯಂತ ಪ್ರಮುಖವಾದ ಹಬ್ಬ ಈ ಪ್ರಯುಕ್ತ ಹಬ್ಬದ ಸಂಭ್ರಮಕ್ಕೆ ಹಿರಿಯರ ಜೊತೆಗೂಡಿ ಕೋಲಾಟಗೈಯುವುದರ ಮೂಲಕ ಚಾಲನೆ ನೀಡಿದರು.


ಬಂಜಾರ ಸಮಾಜದ ಪರಂಪರೆಯಲ್ಲಿ ಈ ಹಬ್ಬವು ತನ್ನದೇ ಆದ ವಿಶಿಷ್ಟತೆ ಮತ್ತು ಪ್ರಾಮುಖ್ಯತೆ ಹೊಂದಿದೆ. ಸಮಾಜದ ಮಹಿಳೆಯರು ಬಣ್ಣದ ಹಬ್ಬ ಹೋಳಿಯ ಆಚರಣೆ ಮುನ್ನ ತಮ್ಮ – ತಮ್ಮ ಸುತ್ತಮುತ್ತಲಿನ ಗ್ರಾಮಗಳಿಗೆ ತೆರಳಿ ಕೋಲಾಟದೊಂದಿಗೆ ಪದ್ಯಗಳನ್ನು ಹಾಡುತ್ತಾ ಹೆಜ್ಜೆ ಹಾಕುತ್ತಾರೆ,ಹೋಳಿ ಹಬ್ಬದಾಚರಣೆಗೆ ಹತ್ತು ದಿನಗಳ ಮುನ್ನ ನಗರಕ್ಕೆ ನಾನಾ ತಾಂಡಾಗಳಿಂದ ಆಗಮಿಸುವ ಮಹಿಳೆಯರು ಲಂಬಾಣಿ ಭಾಷೆಯಲ್ಲಿ ಪದ್ಯಗಳನ್ನು ಹಾಡುತ್ತಾ, ನೃತ್ಯ ಮಾಡುತ್ತಾ ಹೋಳಿ ಹಬ್ಬದ ಆಚರಣೆಯ ವಿಶಿಷ್ಟತೆಯನ್ನು ಮೆರೆಯುತ್ತಿದ್ದಾರೆ.

ಬಂಜಾರ ಸಮುದಾಯದಲ್ಲಿ ವಿಶಿಷ್ಟವಾಗಿ ಆಚರಿಸುವ ಈ ಹಬ್ಬದ ಸೊಬಗನ್ನು ಸಾಂಪ್ರದಾಯಿಕ ಲಂಬಾಣಿ ಪದ್ಯಗಳನ್ನು ಹಾಡುತ್ತಾ ಅದರ ಮಹತ್ವವನ್ನು ಸಾದರ ಪಡಿಸುತ್ತಿದ್ದಾರೆ.

ಜಾಗತೀಕರಣದ ಪ್ರಭಾವದಿಂದ ಹಬ್ಬಗಳು ಮರೆಯಾಗುತ್ತಿದ್ದರೂ ತಾಂಡಾದ ಮಹಿಳೆಯರು ಇದನ್ನು ಗಣನೆಗೆ ತೆಗೆದುಕೊಳ್ಳದೇ ಪ್ರತಿ ವರ್ಷ ಹಳ್ಳಿ -ಹಳ್ಳಿ ಆಗಮಿಸಿ ಹೋಳಿ ಆಚರಣೆ ಕುರಿತ ಪದ್ಯಗಳನ್ನು ಹಾಡುತ್ತಾ ಹೋಳಿಯ ಹಬ್ಬದ ವಿಶಿಷ್ಟತೆಯನ್ನು ಸಾರುತ್ತಿದ್ದು ಹೆಮ್ಮೆಯ ಪ್ರತೀಕವಾಗಿದೆ ಎಂದು ಹೇಳಲು ಹೆಮ್ಮೆ ಎನಿಸುತ್ತದೆ ಯುವಕರು ಕೂಡ ಇದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಾಗಿದೆ ಎಂದು ಹೇಳಿದರು.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

5 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

7 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

7 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

7 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago