ಬೀದರ.28.ಏಪ್ರಿಲ್.25:- ಜಿಲ್ಲೆಯಲ್ಲಿ ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಏಪ್ರಿಲ್, ಮೇ ಮತ್ತು ಜೂನ್ ತಿಂಗಳು ಕೂಲಿಕಾರರು ಕೆಲಸ ನಿರೀಕ್ಷಿಸುವ ತಿಂಗಳುಗಳಾಗಿದ್ದು, ಮೇ ತಿಂಗಳಿನಲ್ಲಿ ಜಿಲ್ಲೆಯ ಎಂಟು ತಾಲೂಕುಗಳಲ್ಲಿ ಒಂದು ಲಕ್ಷ ಜನ ಕೂಲಿಕಾರರಿಗೆ ಕೆಲಸ ನೀಡಲಾಗುವುದು ಎಂದು ಬೀದರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ ಅವರು ಸೂಚಿಸಿದರು.ಅವರು ಶುಕ್ರವಾರದಂದು ಜಿಲ್ಲೆಯ ಎಲ್ಲಾ ತಾಲೂಕಾ ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರುಗಳು, ಟಿಸಿಗಳು, ಟಿಐಎಂಎಸ್, ಟಿಐಇಸಿಗಳ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ಜರುಗಿಸಿ ಮಾತನಾಡಿದರು.
ಅವರು ಶುಕ್ರವಾರದಂದು ಜಿಲ್ಲೆಯ ಎಲ್ಲಾ ತಾಲೂಕಾ ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರುಗಳು, ಟಿಸಿಗಳು, ಟಿಐಎಂಎಸ್, ಟಿಐಇಸಿಗಳ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ಜರುಗಿಸಿ ಮಾತನಾಡಿದರು.
ರೈತಾಪಿ ವರ್ಗದ ಅತಿಸಣ್ಣ ರೈತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು ಮತ್ತು ಮಹಿಳೆಯರಿಗೆ ಬೇಸಿಗೆ ಕಾಲದಲ್ಲಿ ಬೇರೆಕಡೆ ಕೆಲಸ ಸಿಗುವುದಿಲ್ಲವಾದ್ದರಿಂದ ಅವರು ಮನೆಗಳಲ್ಲಿ ಖಾಲಿ ಕುಳಿತುಕೊಳ್ಳುವಂತೆ ಆಗಬಾರದು. ತಾಲೂಕಾ ಐಇಸಿ ತಂಡದವರು ಮತ್ತು ಗ್ರಾಪಂಗಳ ಸಿಬ್ಬಂದಿಯವರು ಮನೆಮನೆಗೆ ಭೇಟಿ ನೀಡಿ ಕೂಲಿಕಾರರನ್ನು ಕೆಲಸಕ್ಕೆ ಆಹ್ವಾನಿಸಬೇಕು. ಪ್ರತಿ ಗುರುವಾರ ಗ್ರಾಮ ಪಂಚಾಯತಿಗಳಲ್ಲಿ ‘ರೋಜಗಾರ ದಿನಾಚರಣೆ’ ಆಚರಣೆ ಮಾಡಿ ಕೂಲಿಕಾರರಿಗೆ ಅವರವರ ಗ್ರಾಮಗಳಲ್ಲಿಯೇ ಕೆಲಸ ನೀಡುವ ಮಾಹಿತಿ ನೀಡಬೇಕು. ಹೊಸ ಉದ್ಯೋಗ ಚೀಟಿಗಳನ್ನು ನೀಡಬೇಕು.
ಕೂಲಿ ಕೆಲಸಕ್ಕೆ ಅರ್ಹರಿರುವ ಎಲ್ಲಾ ಗ್ರಾಮೀಣ ಕೂಲಿಕಾರರಿಗೆ ಕೆಲಸ ನೀಡಬೇಕು. ಮೇ ತಿಂಗಳಲ್ಲಿ ಪ್ರತಿ ಗ್ರಾಪಂಯಲ್ಲಿ 1000 ಕೂಲಿಕಾರರಿಗೆ ಕೆಲಸ ನೀಡಬೇಕು’ ಎಂದರು.
ಏಪ್ರಿಲ್ ತಿಂಗಳಲ್ಲಿ ಜಿಲ್ಲೆಯಲ್ಲಿ 50,000 ಜನರಿಗೆ ಕೂಲಿಕೊಡಲು ಈ ಹಿಂದಿನ ವಿ.ಸಿಯಲ್ಲಿ ಸೂಚಿಸಿದ್ದರು. ಏಪ್ರಿಲ್ 25 ರಂದು ಇದ್ದಂತೆ ಜಿಲ್ಲೆಯಲ್ಲಿ 37000 ಜನ ಕೂಲಿಕಾರರಿಗೆ ಕೆಲಸ ನೀಡಿದ್ದು ಈ ತಿಂಗಳ ಮುಗಿಯುವುದರೊಳಗಾಗಿ ನೀಡಿದ ಗುರಿಯಂತೆ 50,000 ಜನ ಕೂಲಿಕಾರರಿಗೆ ಕೆಲಸ ನೀಡಬೇಕು ಎಂದು ಡಾ.ಗಿರೀಶ ಬದೋಲೆಯವರು ಎಲ್ಲಾ ತಾಲೂಕಾ ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಸಹಾಯಕ ಕಾರ್ಯದರ್ಶಿ ಬೀರೇಂದ್ರಸಿoಗ್, ಸಹಾಯಕ ನಿರ್ದೇಶಕ ಜಯಪ್ರಕಾಶ ಚೌಹಾಣ, ಗ್ರಾಮೀಣ ಕುಡಿಯುವ ನೀರು ಮತ್ತು ಪಂಚಾಯತ್ ರಾಜ್ ಇಂಜನಿಯರಿoಗ್ ವಿಭಾಗದ ಕಾರ್ಯಪಾಲಕ ಅಭಿಯಂತರರುಗಳಾದ ರಾಮಲಿಂಗ ಬಿರಾದರ, ಶಿವಾಜಿ ಡೋಣಿ, ಎಡಿಪಿಸಿ ದೀಪಕ್, ಹಣುಮಂತ ಚಿದ್ರಿ, ಡಿಐಎಂಎಸ್ ಕೋಮಲಾ, ಡಿಐಇಸಿ ರಜನಿಕಾಂತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…