ನಾನ್ ಯುಜಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ.!

ಬೆಂಗಳೂರು : 25.ಜನೆವರಿ.25. ಉನ್ನತ ಶಿಕ್ಷಣ ಇಲಾಖೆ ಸರಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಯಾವುದೇ ಕಾರಣಕ್ಕೂ ಸೇವೆಯಿಂದ ವಜಾ ಮಾಡಬಾರದು ಎಂದು ಆಲ್ ಇಂಡಿಯಾ ಕಾಲೇಜ್ ಅಂಡ್ ಯುನಿವರ್ಸಿಟಿ ಟೀಚರ್ಸ್ ಸಂಘದ(ಎಐಸಿಯುಟಿಎ) ಮುಖ್ಯಸ್ಥ ವಿ.ಎನ್ ರಾಜಶೇಖರ್ ತಿಳಿಸಿದ್ದಾರೆ.

ಶುಕ್ರವಾರ ಇಲ್ಲಿನ ಫ್ರೀಡಂ ಪಾರ್ಕ್‍ನಲ್ಲಿ ಎಐಸಿಯುಟಿಎ ನೇತೃತ್ವದಲ್ಲಿ ನಡೆದ ಅತಿಥಿ ಉಪನ್ಯಾಸಕರ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ‘ಅತಿಥಿ’ ಉಪನ್ಯಾಸಕರನ್ನು ರಾಜ್ಯ ಸರಕಾರಿ ಉಪನ್ಯಾಸಕರೆಂದು ಪರಿಗಣಿಸಿ, 60 ವರ್ಷದವರೆಗೆ ಉದ್ಯೋಗ ಭದ್ರತೆ ಖಾತ್ರಿಪಡಿಸಬೇಕು. ಯಾವುದೇ ಹೊಸ ನಿಯಮಾವಳಿಯನ್ನು ಪೂರ್ವನ್ವಯ ಮಾಡಬಾರದು ಎಂದರು.

ಹತ್ತು ಹಲವರು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿರುವ ಅತಿಥಿ ಉಪನ್ಯಾಸಕರನ್ನು ಹೊಸ ನಿಯಮಾವಳಿ ಅನ್ವಯ ಕೆಲಸದಿಂದ ವಜಾಗೊಳಿಸುವುದು ನ್ಯಾಯಸಮ್ಮತವಲ್ಲ. ಹೈಕೋರ್ಟ್ ತೀರ್ಪಿನ ಪ್ರಕಾರ ಓರ್ವ ಗುತ್ತಿಗೆ ನೌಕರರ ಜಾಗಕ್ಕೆ ಇನ್ನೋರ್ವ ಗುತ್ತಿಗೆ ನೌಕರರನ್ನು ಕೆಲಸಕ್ಕೆ ತೆಗೆದುಕೊಳ್ಳುವುದು ತಪ್ಪು ಎಂದು ಅವರು ಖಂಡಿಸಿದರು.

ಅತಿಥಿ ಉಪನ್ಯಾಸಕಿ ಸುನಿತಾ ಮಾತನಾಡಿ, ಅತಿಥಿ ಉಪನ್ಯಾಸಕರನ್ನು ಯಾವ ಅರ್ಹತೆಯ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದರೋ ಅದೇ ಆಧಾರದ ಮೇಲೆ ಸೇವೆಯಲ್ಲಿ ಮುಂದುವರಿಸಬೇಕೆ ಹೊರತು UGC ಹೊಸ ನಿಯಮಾವಳಿಯನ್ನು ಹೇರಿ ಕೆಲಸದಿಂದ ವಜಾ ಗೊಳಿಸಬಾರದು ಎಂದರು.

ಪ್ರತಿಭಟನೆಯಲ್ಲಿ ಸಂಘಟನಾಕಾರರಾದ ಭರತ್ ಕುಮಾರ್ ಬಿಜಾಪುರ, ಐಶ್ವರ್ಯ, ಆರಿಫ್ ಕರ್ಲೆ ಹಾಸನ, ಜಿ ವಿ ರಮೇಶ್ ಮಂಡ್ಯ, ಸಿದ್ದೇಶ್ವರ್, ನವೀನ್ ಸೇರಿ ಸಾವಿರಾರು ಸಂಖ್ಯೆಯಲ್ಲಿ ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು.

ಬೇಡಿಕೆಗಳು:

1. ಕರ್ನಾಟಕ ರಾಜ್ಯ ‘ಅಥಿತಿ’ ಉಪನ್ಯಾಸಕರನ್ನು ರಾಜ್ಯ ಸರಕಾರಿ ಉಪನ್ಯಾಸಕರೆಂದು ಪರಿಗಣಿಸಿ, ಉದ್ಯೋಗ ಭದ್ರತೆ ಖಾತ್ರಿಪಡಿಸಬೇಕು.

2. ಓರ್ವ ಗುತ್ತಿಗೆ ನೌಕರರ ಜಾಗಕ್ಕೆ ಇನ್ನೋರ್ವ ಗುತ್ತಿಗೆ ನೌಕರರನ್ನು ತೆಗೆದುಕೊಳ್ಳಬಾರದು ಎಂಬ ಕೋರ್ಟ್ ಆದೇಶವನ್ನು ಪಾಲಿಸಬೇಕು.

3. ಎಮ್.ಫಿಲ್ ಪದವಿಯನ್ನು ನೋಂದಾಯಿಸಿರುವ ಹಾಗೂ ಪೂರ್ಣಗೊಳಿಸಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರಿಸಬೇಕು.

4. ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸುವ ಉದ್ದೇಶಿತ ಕೌನ್ಸಲಿಂಗ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು.

ಅತಿಥಿ ಉಪನ್ಯಾಸಕರ ಸಂಘದ ಬೇಡಿಕೆಗಳನು ರಾಜ್ಯಸರ್ಕಾರ ಚಿಂತನೆ ನಡೆಸಿ 5000 ಅತಿಥಿ ಉಪನ್ಯಾಸಕರಿಗೆ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. 5000 ಅತಿಥಿ ಉಪನ್ಯಾಸಕರ ಕ್ವಾಲಿಫಿಕೇಷನ ಗೋಸ್ಕರಾ ಅವರಿಗೆ ಸಮಯಾವಕಾಶ ನೀಡಬೇಕು.

prajaprabhat

Recent Posts

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

2 hours ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

2 hours ago

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

3 hours ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

3 hours ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

9 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

11 hours ago