ನವದೆಹಲಿ: ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದೆ. ಜಸ್ಟ್ 25 ನಿಮಿಷದಲ್ಲಿ ಪಾಕ್ ಉಗ್ರರ 9 ನೆಲೆಗಳನ್ನ ಭಾರತೀಯ ಸೇನೆ ಧ್ವಂಸ ಮಾಡಿದೆ. ಇಷ್ಟಾದ ಮೇಲೂ ಪಾಕಿಸ್ತಾನದ ಉಗ್ರ ಪ್ರೇಮದ ಸೊಕ್ಕು ಅಡಗಿಲ್ಲ. ಭಾರತದ ದಾಳಿಗೆ ಪ್ರತಿಯಾಗಿ ಕಳೆದ ರಾತ್ರಿ ಭಾರತದ 15 ನಗರಗಳ ಮೇಲೆ ಪಾಕಿಸ್ತಾನ ಮಿಸೈಲ್ ದಾಳಿ ಮಾಡಲು ಪ್ರಯತ್ನಿಸಿದೆ.
ನಿನ್ನೆ ರಾತ್ರಿ ಭಾರತದ 15 ನಗರಗಳ ಮೇಲೆ ಪಾಕ್ ಮಿಸೈಲ್ ದಾಳಿ; ರಕ್ಷಿಸಿದ್ದು S-400 ಏರ್ ಡಿಫೆನ್ಸ್ ಸಿಸ್ಟಮ್!
400 ಕಿಮೀ ದೂರದಿಂದಲೇ ಬರುವ ವೈರಿ ರಾಷ್ಟ್ರಗಳ ಮಿಸೈಲ್ ಪತ್ತೆ ಹಚ್ಚುತ್ತೆ
ನಿನ್ನೆ ರಾತ್ರಿ ಪಾಕ್ ದಾಳಿಯನ್ನ S-400 ಏರ್ ಡಿಫೆನ್ಸ್ ಸಿಸ್ಟಮ್ ವಿಫಲಗೊಳಿಸಿದೆ
ನಿನ್ನೆ ರಾತ್ರಿ ಭಾರತದ 15 ನಗರಗಳ ಮೇಲೆ ಪಾಕಿಸ್ತಾನ ಮಿಸೈಲ್ ದಾಳಿ ನಡೆಸಿದ್ದು, ಅದನ್ನ S-400 ಏರ್ ಡಿಫೆನ್ಸ್ ಸಿಸ್ಟಮ್ ಸಂಪೂರ್ಣವಾಗಿ ವಿಫಲಗೊಳಿಸಿದೆ. ಭಾರತದ ರಕ್ಷಣಾ ಬತ್ತಳಿಕೆಯಲ್ಲಿರುವ ಪ್ರಮುಖ ಅಸ್ತ್ರ S-400 ಏರ್ ಡಿಫೆನ್ಸ್ ಸಿಸ್ಟಮ್ ಭಾರತವನ್ನ ರಕ್ಷಿಸಿದೆ.
S-400 ಏರ್ ಡಿಫೆನ್ಸ್ ಸಿಸ್ಟಮ್, ಇಸ್ರೇಲ್ನ ಐರನ್ ಡೋಮ್ ರೀತಿ ಕೆಲಸ ಮಾಡುತ್ತೆ. ಭಾರತಕ್ಕೆ ವೈರಿ ರಾಷ್ಟ್ರಗಳ ವಾಯು ದಾಳಿ, ಮಿಸೈಲ್ ದಾಳಿಯಿಂದ ಇದು ಸಂಪೂರ್ಣ ರಕ್ಷಣೆ ನೀಡುತ್ತೆ. S-400 ಅನ್ನು ಸುದರ್ಶನ ಚಕ್ರ ಅಂತ ಕರೆಯಲಾಗುತ್ತೆ.
ಈ S-400 ಏರ್ ಡಿಫೆನ್ಸ್ ಸಿಸ್ಟಮ್ ಅನ್ನು ಭಾರತವು ರಷ್ಯಾದಿಂದ 40 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಖರೀದಿಸಿದೆ. ಇದು 400 ಕಿಮೀ ದೂರದಿಂದಲೇ ಬರುವ ವೈರಿ ರಾಷ್ಟ್ರಗಳ ಮಿಸೈಲ್ ಅನ್ನು ಪತ್ತೆ ಹಚ್ಚಿ ಹೊಡೆದುರುಳಿಸುತ್ತದೆ. S-400 ಏಕಕಾಲಕ್ಕೆ 72 ವೈರಿ ಮಿಸೈಲ್ ದಾಳಿಯನ್ನು ಪತ್ತೆ ಹಚ್ಚಿ ನಾಶಪಡಿಸುವ ಸಾಮರ್ಥ್ಯ ಹೊಂದಿದೆ.
ಭಾರತಕ್ಕೆ ಅಮೆರಿಕಾದ ವಿರೋಧ!
2019ರ ಪುಲ್ವಾಮಾ ದಾಳಿಯ ಬಳಿಕ ಭಾರತ ರಷ್ಯಾದಿಂದ ಈ S-400 ಏರ್ ಡಿಫೆನ್ಸ್ ಸಿಸ್ಟಮ್ ಅನ್ನು ಖರೀದಿ ಮಾಡಿದೆ. ಆಗ ರಷ್ಯಾದಿಂದ ಎಸ್-400 ಖರೀದಿಸಿದರೆ ಭಾರತದ ಮೇಲೆ ಕೆಲ ನಿರ್ಬಂಧ ವಿಧಿಸುವುದಾಗಿ ಅಮೆರಿಕಾ ಬೆದರಿಕೆ ಹಾಕಿತ್ತು. ಆದರೆ ಅಮೆರಿಕಾದ ಬೆದರಿಕೆಗೂ ಜಗ್ಗದ ಭಾರತ, ತನ್ನ ರಕ್ಷಣೆಗಾಗಿ ಏರ್ ಡಿಫೆನ್ಸ್ ಸಿಸ್ಟಮ್ ಬೇಕೆಂದು ಖರೀದಿಸಿತ್ತು.
ರಷ್ಯಾದ ಏರ್ ಡಿಫೆನ್ಸ್ ಸಿಸ್ಚಮ್ನಿಂದ ತನ್ನ ವಿಮಾನಗಳ ರಹಸ್ಯವನ್ನು ಭೇದಿಸಬಹುದು ಎಂಬ ಭಯ ಅಮೆರಿಕಾಕ್ಕೂ ಇತ್ತು. ಹೀಗಾಗಿ ರಷ್ಯಾದ ಏರ್ ಡಿಫೆನ್ಸ್ ಸಿಸ್ಟಮ್ ಅನ್ನು ಭಾರತ ಖರೀದಿಸುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಮೆರಿಕಾದ ವಿರೋಧಕ್ಕೆ ಮಣಿಯದ ಭಾರತ S-400 ಏರ್ ಡಿಫೆನ್ಸ್ ಸಿಸ್ಟಮ್ ಖರೀದಿ ಮಾಡಿದ್ದ ಈಗ ಭಾರತದ ರಕ್ಷಣೆಗೆ ಬಳಕೆಯಾಗಿದೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…