ಬೆಂಗಳೂರು.15.ಫೆ.25:- ರಾಜ್ಯ ಸರ್ಕಾರ ವಾಸೋದ್ಯಮ ಇಲಾಖೆಯ ವತಿಯಿಂದ 2024-25 ನೇ ಸಾಲಿನಲ್ಲಿ ಎಸ್ಸಿಎಸ್ಪಿ/ ಟಿಎಸ್ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಸಹಾಯಧನ ನೀದೂತಿದೆ.
ಎಸ್ಸಿಎಸ್ಪಿ/ ಟಿಎಸ್ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಸಹಾಯಧನ ಎಂಟರ್ಪ್ರನರ್ಶಿಪ್ ಪ್ರೋಗ್ರಾಮ್ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣದಲ್ಲಿ ಮೊಬೈಲ್ ಕ್ಯಾಂಟೀನ್ ವಾಹನವನ್ನು ಖರೀದಿಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದೆ.
ಈ ತರಬೇತಿ ಹಾಗೂ ಸಹಾಯಧನಕ್ಕೆ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರಸ್ತುತ ಸಾಲಿನಲ್ಲಿ ನಿಗಧಿಪಡಿಸಿದೆ.
ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮ ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ.
ತರಬೇತಿ ಕಾರ್ಯಕ್ರಮಗಳ ವಿವರ/ ಅಭ್ಯರ್ಥಿಗಳ ವಿದ್ಯಾರ್ಹತೆಯ ವಿವರ ಇಂತಿದೆ. ಎಂಟರ್ಪ್ರೆನರ್ಶಿಪ್ ಪ್ರೋಗ್ರಾಮ್(ಇಪಿ)(ಎಸ್ಸಿ/ಎಸ್ಟಿ ಅಭ್ಯರ್ಥಿ) 10ನೇ ತರಗತಿ ಪಾಸಾಗಿರಬೇಕು.
1 ತಿಂಗಳ ತರಬೇತಿ, 20 ರಿಂದ 45 ವರ್ಷದೊಳಗಿರಬೇಕು.
2 ಪರಿಶಿಷ್ಟ ಜಾತಿ ಅಭ್ಯರ್ಥಿಗಳು, 01 ಪರಿಶಿಷ್ಟ ಪಂಗಡದ ಅಭ್ಯರ್ಥಿಯಾಗಿರಬೇಕು.
ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು
ಕೋಣೆಯ ದಿನಾಂಕ:
ಫೆಬ್ರವರಿ, 25 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಯಲ್ಲಿ ಅರ್ಜಿ ಪಡೆಯಬಹುದು.
ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಗಳಲ್ಲಿ
ದಿನಾಂಕ: 25-02-2025 ರ ಸಂಜೆ : 05:00 ಗಂಟೆಯೊಳಗೆ ಉಪ ನಿರ್ದೇಶಕರು ಕಛೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಛೇರಿಗೆ ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು ಕಚೇರಿ,
ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201
ದೂರವಾಣಿ ಸಂಖ್ಯೆ: 08272-200519,
ಅಥವಾ ಈ-ಮೇಲ್ ,
ddkodagutourism@gmail.com,
ಗೆ ಸಂಪರ್ಕಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ ಅವರು ತಿಳಿಸಿದ್ದಾರೆ.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…