ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ರಾಜ್ಯ ಸರಕಾರ ಖಾಲಿಯಿರುವ ನ್ಯಾಯಬೆಲೆ ಅಂಗಡಿಗಳು ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ನಗರದ ಬೇತೂರು ರಸ್ತೆ, ಅಜಾದ್ ನಗರ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳು, ಸಂಸ್ಥೆಗಳು, ಗ್ರಾಮ ಪಂಚಾಯತಿಗಳು ಮತ್ತು ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ವಿ.ಎಸ್.ಎಸ್.ಎಂ.ಎಸ್, ತೋಟಗಾರಿಕೆ ಉತ್ಪಾನ್ನಗಳ ಸಹಕಾರ ಸಂಘದ ಮಾರಾಟ ಮಂಡಳಿ ನಿಯಮಿತ, ನೊಂದಾಯಿತ ಸಹಕಾರ ಸಂಘಗಳು, ನೊಂದಾಯಿತ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘಗಳು, ದೊಡ್ಡ ಪ್ರಮಾಣದ ಆದಿವಾಸಿಗಳ ವಿವಿದೋದ್ದೇಶ ಸಹಕಾರ ಸಂಘ, ನೊಂದಾಯಿತ ನೇಕಾರರ ಮತ್ತು ಮಹಿಳಾ ವಿವಿದೋದ್ದೇಶ ಸಹಕಾರ ಸಂಘಗಳು, ನೊಂದಾಯಿತ ವಿವಿದೋದ್ದೇಶ ಸಹಕಾರ ಸಂಘಗಳು, ಅಂಗವಿಕಲರ ಕಲ್ಯಾಣ ಸಹಕಾರ ಸಂಘಗಳು, ಬ್ಯಾಂಕಿನಿಂದ ನಡೆಸಲ್ಪಡುವ ಸಹಕಾರ ಸಂಘಗಳು ಅಥವಾ ಸಹಕಾರ ಬ್ಯಾಂಕ್( ಸಹಕಾರ ಸಂಘಗಳು ಕನಿಷ್ಠ 3 ವರ್ಷದ ಹಿಂದೆ ನೋಂದಣಿಯಾಗಿರಬೇಕು.

ಕನಿಷ್ಠ ಎರಡು ಲಕ್ಷ ರೂಪಾಯಿ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು) ಹಾಗೂ ವಿಕಲಚೇತನರು, ತೃತೀಯ ಲಿಂಗಿಗಳು ಅರ್ಜಿ ಸಲ್ಲಿಸಬಹುದು.

ಅಜಾದ್ ನಗರ ಕೇಂದ್ರ ಸ್ಥಾನ, ಸೇರ್ಪಡೆಗೊಳ್ಳಲಿರುವ ಪ್ರದೇಶ ಹಳೇಬೇತೂರು ರಸ್ತೆ, ಅಜಾದ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶ, ಅಂತ್ಯೋದಯ-85, ಬಿ.ಪಿ.ಎಲ್ 722, ಎಪಿಎಲ್-165 ಅವಶ್ಯವಿರುವ ಬ್ಯಾಂಕ್ ಠೇವಣಿ ಮೊತ್ತ 50,000/- ಇರುತ್ತದೆ.

ಅರ್ಜಿ ನಮೂನೆ ‘ಎ’, ನಲ್ಲಿ ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗಾಗಿ ಉಪ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕೊಠಡಿ ಸಂಖ್ಯೆ 4, ಜಿಲ್ಲಾಡಳಿತ ಭವನ ದಾವಣಗೆರೆ.

ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

9 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

12 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

12 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

12 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

12 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

12 hours ago