Categories: ಜೀಲ್ಲೆ

ನ.25 ರಂದು ಮಕ್ಕಳು ಅಧಿಕಾರಿಗಳಾಗಿಕಾರ್ಯನಿರ್ವಹಿಸುವ ಪರಿಚಾಯಾತ್ಮಕ ಕಾರ್ಯಕ್ರಮ

ಬೀದರ, ನವೆಂಬರ್.21:- ಪ್ರತಿವರ್ಷ ನವೆಂಬರ್.14 ರಂದು ಮಕ್ಕಳ ದಿನಾಚರಣೆಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ.

      ಆ ಪ್ರಯುಕ್ತ ಈ ಬಾರಿ ಜಿಲ್ಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ನವೆಂಬರ್.25 ರಂದು ವಿನೂತನವಾಗಿ ಆಚರಿಸಲು ಜಿಲ್ಲಾಡಳಿತದ ವತಿಯಿಂದ ನಿರ್ಧರಿಸಲಾಗಿದೆ. ಸದರಿ ದಿನದಂದು ಶಾಲಾ ಮಕ್ಕಳಿಗೆ ಆಡಳಿತವನ್ನು ಪರಿಚಯಿಸುವುದು ಹಾಗೂ ಆತ್ಮವಿಶ್ವಾಸವನ್ನು ತುಂಬುವ ಸಲುವಾಗಿ ಅಂದು ಮಕ್ಕಳು ಅಧಿಕಾರಿಗಳಾಗಿ ಕಾರ್ಯನಿರ್ವಹಿಸುವ ಪರಿಚಯಾತ್ಮಕ ಕಾರ್ಯಕ್ರಮವನ್ನು ರೂಪಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

              ಜಿಲ್ಲೆಯ, ತಾಲ್ಲೂಕಿನ ಎಲ್ಲಾ ಇಲಾಖೆಗಳ ಕಾರ್ಯವೈಖರಿಯನ್ನು ಪರಿಚಯಿಸಲು ಒಂದೊAದು ಶಾಲೆಯಿಂದ 08 ರಿಂದ 10ನೇ ತರಗತಿಯ 10 ಮಕ್ಕಳನ್ನು ಗುರುತಿಸಿ ಒಂದೊAದು ಕಛೇರಿಗೆ ಕಳುಹಿಸಲು ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೀದರ ಅವರು ಕ್ರಮವಹಿಸಬೇಕು.

         ಇಲಾಖಾ ಮುಖ್ಯಸ್ಥರು ಅಂದು ಮಕ್ಕಳನ್ನು ಆತ್ಮಿಯವಾಗಿ ಸ್ವಾಗತಿಸಿ ತಮ್ಮ ಸ್ಥಾನದಲ್ಲಿ ಕೂರಿಸಿ ತಮ್ಮ ಕಾರ್ಯಭಾರ ಹಾಗೂ ಇಲಾಖಾ ಕಾರ್ಯಕ್ರಮಗಳ ಪರಿಚಯ ಮಾಡಿಕೊಡುವುದು ಅಲ್ಲದೇ ಕಛೇರಿಯ ಪ್ರತಿ ಶಾಖೆಗೆ ಕರೆದುಕೊಂಡು ಹೋಗಿ ಕಾರ್ಯವೈಖರಿಯನ್ನು ಪರಿಚಯಿಸುವುದು. ತಮ್ಮ ಕಛೇರಿಯ ದೈನಂದಿನ ಕಾರ್ಯಗಳಾದ ಸಭೆಗಳಿಗೆ ಹಾಜರಾಗುವುದು, ಕಛೇರಿ ಕಾರ್ಯನಿರ್ವಹಣೆ ಹಾಗೂ ಕ್ಷೇತ್ರ ಭೇಟಿಯನ್ನು ಅಧಿಕಾರಿಗಳು ಮಕ್ಕಳೊಂದಿಗೆ ಮಾಡುವುದು.

      ಅಂದು ಮಧ್ಯಾಹ್ನ 3 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಜರುಗುವ ಮಕ್ಕಳ ಸಂವಾದ ಕಾರ್ಯಕ್ರಮದಲ್ಲಿ ಬೀದರನ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕಛೇರಿಗೆ ಆಗಮಿಸಿದ ಮಕ್ಕಳೊಂದಿಗೆ ಹಾಜರಾಗುವುದು. ಅದರಲ್ಲಿ ಕನಿಷ್ಠ 2 ರಿಂದ 3 ಮಕ್ಕಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅವಕಾಶವಿರುತ್ತದೆ. ಜಿಲ್ಲೆಯ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಲು ಈ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಯಶಸ್ವಿಗೊಳಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Share
Published by
prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

49 minutes ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

2 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

2 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

2 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

2 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

2 hours ago