ಬೀದರ.23.ಜನವರಿ.25:- ಪಡಿತರ ಚೀಟಿಯಲ್ಲಿರುವ ಎಲ್ಲಾ ಕುಟುಂಬದ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯಗೊಳಿದೆ. ಸರ್ಕಾರ ನೀಡಿರುವ ಈ ಅಂತಿಮ ಅವಕಾಶವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಬೀದರ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇ-ಕೆವೈಸಿ ಸಂಗ್ರಹಣೆಯ ಕಾರ್ಯ ಪ್ರತಿ ದಿನ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಮಾಡಿಸಿಕೊಳ್ಳಲು ಕಾಲಾವಕಾಶ ನೀಡಲಾಗಿದೆ. ಇ-ಕೆವೈಸಿ ಮಾಹಿತಿ ಸಂಗ್ರಹಣೆ ಕಾರ್ಯವನ್ನು ಮಾಡುವುದಕ್ಕಾಗಿ ಸರ್ಕಾರವೇ ನ್ಯಾಯಬೆಲೆ ಅಂಗಡಿಯವರಿಗೆ ಹಣ ಪಾವತಿ ಮಾಡುತ್ತಿದೆ.
ಆದ್ದರಿಂದ ಪಡಿತರ ಚೀಟಿದಾರರು ಈ ಪ್ರಕ್ರಿಯೆಗೆ ಯಾವುದೇ ಹಣ ಸಂದಾಯ ಮಾಡುವ ಅವಶ್ಯಕತೆ ಇರುವುದಿಲ್ಲ.
ಇದೂ ಸಂಪೂರ್ಣ ಉಚಿತವಾಗಿರುತ್ತದೆ. ಆಧಾರ್ ಮತ್ತು ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರ ಹೆಸರು ವ್ಯತ್ಯಾಸವಿದ್ದಲ್ಲಿ ಅಂತಹವರು ತಮ್ಮ ನ್ಯಾಯಬೆಲೆ ಅಂಗಡಿಗೆ ಹೋಗಿ (ಇ-ಕೆವೈಸಿ) ಮಾಡಿಸಿಕೊಂಡಲ್ಲಿ ಸರಿಯಾಗುವುದೆಂದು ತಿಳಿಸಿದೆ.
ಬೆರಳಚ್ಚು ಹೊಂದಾಣಿಕೆ ಆಗದ ಪಡಿತರ ಚೀಟಿ ಸದಸ್ಯರು ಗ್ರಾಮ ಓನ್/ಕರ್ನಾಟಕ ಓನ್ ಕೇಂದ್ರಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಸಿ ಓ.ಟಿ.ಪಿ ಮೂಲಕ ಅಪಡೇಟ್ ಮಾಡಿಕೊಳ್ಳುವುದು.
ಕಾರಣ ಪಡಿತರ ಚೀಟಿದಾರರು ನಿಮ್ಮ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರ ಇ-ಕೆವೈಸಿ ಬೆರಳಚ್ಚು (ಬಯೋಮೆಟ್ರಿಕ್) ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗಿ ಪರಿಶೀಲಿಸಿಕೊಳ್ಳಬೇಕು.
ಇಲ್ಲಿಯವರೆಗೆ ಜಿಲ್ಲೆಯ ಹಲವಾರು ಪಡಿತರ ಚೀಟಿದಾರ ಇ-ಕೆವೈಸಿ ಆಗದೇ ಇರುವವರ ಮಾಹಿತಿಯನ್ನು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರದರ್ಶಿಸಲಾಗಿದ್ದು, ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗಿ (ಇ-ಕೆವೈಸಿ) ಮಾಡಿಕೊಳ್ಳಲು ಅವರು ತಿಳಿಸಿದ್ದಾರೆ.