Home » ಲೈವ್ ನ್ಯೂಸ್ » ಪತಿಯ ಅಕ್ರಮ ಸಂಬಂಧ `ಆತ್ಮಹತ್ಯೆಗೆ ಪ್ರಚೋದನೆ’ ಎಂದು ಪರಿಗಣಿಸಲಾಗದು: ಹೈಕೋರ್ಟ್ ತೀರ್ಪು

ಪತಿಯ ಅಕ್ರಮ ಸಂಬಂಧ `ಆತ್ಮಹತ್ಯೆಗೆ ಪ್ರಚೋದನೆ’ ಎಂದು ಪರಿಗಣಿಸಲಾಗದು: ಹೈಕೋರ್ಟ್ ತೀರ್ಪು

Facebook
X
WhatsApp
Telegram

ಬೆಂಗಳೂರು.07.ಜನವರಿ.26: ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶ: ಈ  ಆಧುನಿಕ ಜಗತ್ತಿನಲ್ಲಿ ಅನೇಕ ವಿಚಿತ್ರ ಘಟನೆಯನ್ನು ಕಾಣುಬರುತ್ತಿದೆ. ಪತ್ನಿ ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿರುವುದಕ್ಕೆ ಅಸಮಾಧಾನಗೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಲ್ಲಿ ಪತ್ನಿ ವಿರುದ್ಧ ಕೇಸ್‌ ಹಾಕಿ ಶಿಕ್ಷೆ ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಆದೇಶ.

ಬೆಂಗಳೂರು: ಪತ್ನಿ ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿರುವುದಕ್ಕೆ ಅಸಮಾಧಾನಗೊಂಡು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಲ್ಲಿ ಪತ್ನಿಯನ್ನು ಶಿಕ್ಷಿಸಲು ಸಾಧ್ಯವಿಲ್ಲಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಅಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ರದ್ದು ಕೋರಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಪ್ರೇಮಾ ಮತ್ತು ಆಕೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಬಸವಲಿಂಗೇಗೌಡ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಶಿವಶಂಕರ್‌ ಅಮರಣ್ಣನವರ್‌ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.

ಪ್ರಚೋದನೆ ಎಂದರೆ, ನಿರ್ದಿಷ್ಟ ಕೆಲಸವನ್ನು ಮಾಡುವಂತೆ ಪ್ರಚೋದಿಸುವುದಾಗಿದೆ. ಆಗ ಮಾತ್ರ ಅದು ಪ್ರಚೋದನೆಯ ಅಪರಾಧವಾಗುತ್ತದೆ. ಮೇಲ್ಮನವಿ ಸಲ್ಲಿಸಿರುವ ಆರೋಪಿಗಳು ಅಕ್ರಮ ಸಂಬಂಧ ಹೊಂದಿರುವುದು, ಪ್ರೇಮಾ ಅವರ ಪತಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗುವುದಿಲ್ಲ.

ಪ್ರಚೋದನೆ ನೀಡುವುದನ್ನು ಸಾಬೀತುಪಡಿಸಲು ನಿಖರ ಸಾಕ್ಷ್ಯಗಳು ಬೇಕಾಗುತ್ತವೆ. ಇಲ್ಲವಾದರೆ ಅಪರಾಧವನ್ನು ಸಾಬೀತುಪಡಿಸಲು ಸಾಧ್ಯವಿಲ್ಲ. ಅದರಂತೆ ಪ್ರಕರಣದಲ್ಲಿಆರೋಪಿಗಳನ್ನು ಶಿಕ್ಷಿಸಲಾಗದು” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಡಿ ಪ್ರೇಮಾ ಮತ್ತು ಬಸವಲಿಂಗೇಗೌಡ ಅವರನ್ನು ಅಪರಾಧಿಗಳೆಂದು ತೀರ್ಮಾನಿಸಿ ಇಬ್ಬರಿಗೆ ಕ್ರಮವಾಗಿ ಮೂರು ಮತ್ತು ನಾಲ್ಕು ವರ್ಷ ಕಠಿಣ ಶಿಕ್ಷೆ ವಿಧಿಸಿದ್ದ ಅಧೀನ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ.

ಜೊತೆಗೆ, ಪ್ರೇಮಾ ಅವರ ಪತಿ ಸದಾಶಿವ ಮೂರ್ತಿ ಆತ್ಮಹತ್ಯೆ ಮಾಡಿಕೊಳುವ ಉದ್ದೇಶ ಹೊಂದಿರಲಿಲ್ಲ. ‘ನೀನು ಹೋಗಿ ಸಾಯಿ. ನೀನು ಸತ್ತರೆ ನಾವು ಸಂತೋಷದಿಂದ ಜೀವನ ನಡೆಸುತ್ತೇವೆ,” ಎಂಬುದಾಗಿ ಆರೋಪಿಗಳು ಸದಾಶಿವ ಮೂರ್ತಿಗೆ ನಿಂದಿಸಿದ ಮಾತ್ರಕ್ಕೆ ಅದು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧವಾಗುವುದಿಲ್ಲಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣದ ಹಿನ್ನೆಲೆ ಏನು ?
ಪ್ರೇಮಾ ಹಾಗೂ ಬಸವಲಿಂಗೇಗೌಡ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊನ್ನಲಗೆರೆ ಗ್ರಾಮದವರು. ಸದಾಶಿವಮೂರ್ತಿ ಎಂಬುವರನ್ನು ಮದುವೆಯಾಗಿದ್ದ ಪ್ರೇಮಾ, ಬಸವಲಿಂಗೇಗೌಡ ಎಂಬುವರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು.

ಇದೇ ವಿಚಾರವಾಗಿ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಸದಾಶಿವಮೂರ್ತಿ 2010ರ ಜು.15ರಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. 2010ರ ಜುಲೈ 10 ರಂದು ಸದಾಶಿವಮೂರ್ತಿ ಮನೆ ಮುಂದೆ ಹೋಗಿದ್ದ ಬಸವಲಿಂಗೇಗೌಡ, ‘ನೀನು ಸಾಯಿ.

ಆಗ ನಾನು ಮತ್ತು ಪ್ರೇಮಾ ಸಂತೋಷದಿಂದ ಜೀವನ ನಡೆಸುತ್ತೇವೆ’ ಎಂದು ಹೇಳಿ ಅವಮಾನಿಸಿದ್ದರು. ಇದರಿಂದ ಅಸಮಾಧಾನಗೊಂಡು ಸದಾಶಿವಮೂರ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆರೋಪಿಸಲಾಗಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಕೆ.ಎಂ.ದೊಡ್ಡಿ ಠಾಣೆ ಪೊಲೀಸರು ತನಿಖೆ ನಡೆಸಿ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರೇಮಾ ಮತ್ತು ಬಸವಲಿಂಗೇಗೌಡ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ್ದ ಮಂಡ್ಯ ಹೆಚ್ಚುವರಿ ಜಿಲ್ಲಾಮತ್ತು ಸೆಷನ್ಸ್‌ ನ್ಯಾಯಾಲಯ, ಪ್ರೇಮಾಗೆ ಮೂರು ವರ್ಷ ಮತ್ತು ಬಸವಲಿಂಗೇಗೌಡಗೆ ನಾಲ್ಕು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ಐದು ಸಾವಿರ ರೂ. ದಂಡ ವಿಧಿಸಿ 2013ರ ಜನವರಿ 1 ರಂದು ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology