ಭೋಪಾಲ್.12.ಮಾರ್ಚ.25:- ಸಂಸಾರವೆಂದ ಮೇಲೆ ಪತಿ-ಪತ್ನಿಯರ ನಡುವೆ ಜಗಳ ಮನಸ್ತಾಪಗಳು ನಡೆಯುವುದು ಸಹಜ. ಈ ಜಗಳ, ವೈಮನಸ್ಸನ್ನು ಪರಿಹರಿಸಿಕೊಂಡರೆ ವೈವಾಹಿಕ ಜೀವನ ಸುಖಕರವಾಗಿರುತ್ತದೆ. ಆದರೆ ಈ ಜಗಳವನ್ನು ದೊಡ್ಡದು ಮಾಡಿದರೆ ಅದರಿಂದ ಅನಾಹುತಗಳೇ ಸಂಭವಿಸುತ್ತದೆ. ಇದಕ್ಕೆ ಪ್ರಮುಖ ಉದಾಹರಣೆ ಎಂದರೆ ಮಹಾರಾಜ್ ಗಂಜ್ನಲ್ಲಿ ನಡೆದ ಈ ಘಟನೆಯೇ ಬೀದರ್ ಜಿಲ್ಲೆಯ ಔರಾದ್ ತಾಲೂಕಿನಲ್ಲಿ ಪತ್ನಿಯೇ ಪತಿಯ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಶ್ರೀಧರ ಕೊಲೆಯಾದ ವ್ಯಕ್ತಿ. ಪತ್ನಿ ಸವಿತಾ ಜೋಜನೆ ಕೊಲೆ ಆರೋಪಿ. ಈತ ಐದು ವರ್ಷದ ಹಿಂದೆ ಲಾಧಾ ಗ್ರಾಮದ ಸವಿತಾ ಜತೆಗೆ
ಇಲ್ಲಿನ ಚಹಾ ಮಾರಾಟಗಾರನೊಬ್ಬ ಪತ್ನಿಯೊಂದಿಗೆ ಜಗಳವಾಡಿ ಮನನೊಂದು ಕಲೆಕ್ಟರೇಟ್ ಚೌಕಿ ಬಳಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಈ ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ತಕ್ಷಣ ಅಲ್ಲಿದ್ದ ಜನರು ಬೆಂಕಿ ನಂದಿಸಿ ಅವನನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿದ್ದಾರೆ. ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ವೈರಲ್ ವಿಡಿಯೊದಲ್ಲಿ ನಡುರಸ್ತೆಯಲ್ಲಿ ವ್ಯಕ್ತಿಯ ಮೈಮೇಲೆ ಬೆಂಕಿ ಧಗಧಗನೇ ಉರಿಯುತ್ತಿದ್ದು ಕಂಡ ಸ್ಥಳೀಯರು ಗಾಬರಿಯಿಂದ ಕಂಬಳಿ ತೆಗೆದುಕೊಂಡು ಬಂದು ಬೆಂಕಿಯನ್ನು ನಂದಿಸಲು ಹೆಣಗಾಡಿದ್ದಾರೆ. ಕೊನೆಗೆ ಹರಸಾಹಸ ಮಾಡಿ ಬೆಂಕಿಯನ್ನು ನಂದಿಸಿದ್ದಾರೆ.
ಬೆಂಕಿ ಹಚ್ಚಿಕೊಂಡು ಒದ್ದಾಡುತ್ತಿರುವ ವಿಡಿಯೊ ಇಲ್ಲಿದೆ ನೋಡಿ.
ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಹಾರಾಜ್ಗಂಜ್ ಪೊಲೀಸರು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
ಈ ಘಟನೆಯು ಕುಟುಂಬ ವಿವಾದಕ್ಕೆ ಸಂಬಂಧಿಸಿದೆ. ಪೊಲೀಸರು ಮತ್ತು ಸ್ಥಳೀಯರ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಸ್ಥಳದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನಲ್ಲಿ ಪತ್ನಿಯೇ ಪತಿಯ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಶ್ರೀಧರ ಕೊಲೆಯಾದ ವ್ಯಕ್ತಿ. ಪತ್ನಿ ಸವಿತಾ ಜೋಜನೆ ಕೊಲೆ ಆರೋಪಿ. ಈತ ಐದು ವರ್ಷದ ಹಿಂದೆ ಲಾಧಾ ಗ್ರಾಮದ ಸವಿತಾ ಜತೆಗೆ ಪ್ರೀತಿಸಿ ಮದುವೆಯಾಗಿದ್ದ.
ಈ ನಡುವೆ ಅನೇಕ ಬಾರಿ ಸವಿತಾ ಮತ್ತು ಶ್ರೀಧರ ಮಧ್ಯೆ ಜಗಳವಾಗಿವೆ. ಕೊಲೆ ಮಾಡುವ ಉದ್ದೇಶದಿಂದ ಕೈ ಕಾಲು ಕಟ್ಟಿಹಾಕಿ ತಲೆಗೆ ಹೊಡೆದಿದ್ದರಿಂದ ಪತಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…