ಪತ್ರಕರ್ತರ ರೈಲ್ವೆ ಪಾಸ್ ವಿಷಯಕ್ಕೆ ಸ್ಪಂದಿಸಿದ ಬೀದರ ಲೋಕಸಭೆ ಸದಸ್ಯರಿಗೆ ಅಭಿನಂದನೆ

ಬೀದರ.18.ಮಾರ್ಚ.25:- ಸುಮಾರು ವರ್ಷಗಳಿಂದ ನೆನೆಗುದಿಗೆ ಮಾನ್ಯತೆ ಪಡೆದಿರುವ ಪತ್ರಕರ್ತರ ರೈಲ್ವೆ ರಿಯಾಯಿತಿ ಪಾಸ್ ಮರು ಸ್ಥಾಪನೆಗೆ ಬೀದರ ಯುವ ಸಂಸದರಾದ ಸಾಗರ ಈಶ್ವರ ಖಂಡ್ರೆ ಅವರು ಲೋಕಸಭೆಯಲ್ಲಿ ಪ್ರಶ್ನೆ ಎತ್ತುವುದರ ಮೂಲಕ ಜಿಲ್ಲೆಯ ಪತ್ರಕರ್ತರ ಮನವಿಗೆ ಸ್ಪಂದನೆ ಮಾಡಿದ್ದಾರೆ.


ಈ ಹಿಂದೆ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ ಬೀದರ ಜಿಲ್ಲಾ ಘಟಕದ ವತಿಯಿಂದ ಯುವ ಸಂಸದರಾದ ಉತ್ಸಾಹಿ ಸಾಗರ ಈಶ್ವರ ಖಂಡ್ರೆ ಅವರಿಗೆ ಪತ್ರಕರ್ತರಿಗೆ ಜಾರಿಯಲ್ಲಿದ್ದ ರೈಲ್ವೆ ರಿಯಾಯಿತಿ ಪಾಸ್ ಕೋವಿಡ್ ಸಮಯದಲ್ಲಿ ನಿಲ್ಲಿಸಲಾಗಿತ್ತು.

ಈ ಬಗ್ಗೆ ಲೋಕಸಭೆಯಲ್ಲಿ ನಮ್ಮ ಪರವಾಗಿ ಧ್ವನಿ ಎತ್ತುವಂತೆ ನಾವು ಮಾಡಿರುವ ಮನವಿಗೆ ಸ್ಪಂದಿಸಿ ನಿನ್ನೆ ರಾತ್ರಿ ಮಾರ್ಚ.೧೭ ರಂದು ಲೋಕಸಭೆಯಲ್ಲಿ ಸುಧೀರ್ಘಕಾಲ ರೈಲ್ವೆ ವಿಷಯದ ಮೇಲೆ ನಡೆದಿರುವ ಚರ್ಚೆ ಸಮಯದಲ್ಲಿ ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿರುವ ಪತ್ರಕರ್ತರ ರೈಲ್ವೆ ರಿಯಾಯಿತಿ ಪಾಸ್ ಮರು ಚಾಲನೆ ಮಾಡುವಂತೆ ಅವರು ಕೇಂದ್ರ ರೈಲ್ವೆ ಸಚಿವರಿಗೆ ಪ್ರಶ್ನೆ ಎತ್ತುವ ಮೂಲಕ ಗಮನ ಸೆಳೆದಿದಿದ್ದಾರೆ.

ಇದಕ್ಕಾಗಿ ಬೀದರ ಜಿಲ್ಲಾ ಸಂಘದ ವತಿಯಿಂದ ಸಂಸದರಿಗೆ ಹಾರ್ಧಿಕ ಅಭಿನಂದನೆ ಹಾಗೂ ಕೃತಜ್ಞತೆ ಸಲ್ಲಿಸುತ್ತೇವೆ.


ಇದಲ್ಲದೇ ಬೀದರ ಜಿಲ್ಲೆಯ ರೈಲ್ವೆ ಸಂಬoಧಿಸಿದ ಇತರೆ ವಿಷಯಗಳಾದ: ಎನ್.ಚಿ.ಆರ್.ಬಿ. ವರದಿ ಪ್ರಕಾರ ಕಳೆದ ದಶಕದಲ್ಲಿ ೨.೬ ಲಕ್ಷಕ್ಕೂ ಹೆಚ್ಚು ಜನರು ರೈಲ್ವೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಮಸ್ಯೆಗೆ ತ್ವರಿತ ಪರಿಹಾರವಾಗಿ ಏಂಗಿoಅಊ ತಂತ್ರಜ್ಞಾನವನ್ನು ಎಲ್ಲೆಡೆ ಶೀಘ್ರ ಜಾರಿಗೆ ತರಬೇಕು. ಅಮೃತ ಭಾರತ ನಿಲ್ದಾಣ ಯೋಜನೆ ನಿಧಾನಗತಿಯಲ್ಲಿ ನಡೆಯುತ್ತಿದ್ದು ಇದನ್ನು ಶೀಘ್ರಗತಿಯಲ್ಲಿ ಮುನ್ನಡೆಸುವಂತೆ ಆಗ್ರಹಿಸಿದರು. ನನ್ನ ಕ್ಷೇತ್ರದ ಭಾಲ್ಕಿ ಮತ್ತು ಕಮಲನಗರ ರೈಲ್ವೆ ನಿಲ್ದಾಣಗಳನ್ನು ಅಮೃತ ಭಾರತ ಯೋಜನೆಯಡಿ ಸೇರ್ಪಡಿಸಿ ಅಭಿವೃದ್ಧಿ ಪಡಿಸಬೇಕು.

ಬೀದರ-ಬೆಂಗಳೂರು ರೈಲುಗಳಲ್ಲಿ ಜನಸಂದಣಿ ಹೆಚ್ಚಾಗುತ್ತಿದ್ದು, ಇನ್ನು ಹೆಚ್ಚುವರಿ ೨ ಬೋಗಿಗಳನ್ನು ಸೇರಿಸಲು ಅವಕಾಶವಿದ್ದು, ಬೋಗಿಗಳನ್ನು ಸೇರಿಸಬೇಕು. ಬೀದರ ಕ್ಷೇತ್ರದವರನ್ನು ದೆಹಲಿಗೆ ಸಂಪರ್ಕ ಕಲ್ಪಿಸಲು ದಕ್ಷಿಣ ಎಕ್ಸಪ್ರೆಸ್ ರೈಲನ್ನು ಹೈದರಾಬಾದ್‌ನಿಂದ ಬೀದರಕ್ಕೆ ವಿಸ್ತರಿಸಬೇಕು.

ಬೀದರ-ಬೆಂಗಳೂರು ವಂದೇ ಭಾರತ ರೈಲು ಆರಂಭಿಸಬೇಕು. ತಾಂಡೂರು-ಜಹೀರಾಬಾದ ಹೊಸ ರೈಲು ಮಾರ್ಗವನ್ನು ಕ್ಷೇತ್ರದ ಚಿಂಚೋಳಿ ಮೂಲಕ ಸಾಗುವಂತೆ ಮಾಡಬೇಕು.

ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾದ ಮಾಧ್ಯಮ ಕ್ಷೇತ್ರಕ್ಕೆ ನೀಡಲಾಗುತ್ತಿದ್ದ ೫೦% ರಿಯಾಯಿತಿಯನ್ನು ಮರುಪ್ರಾರಂಭಿಸಬೇಕು. ರೈಲ್ವೆ ಸುರಕ್ಷತೆ, ಮೂಲಸೌಕರ್ಯ ಹಾಗೂ ಪ್ರಯಾಣಿಕರ ಅನುಕೂಲತೆಗಳ ಸುಧಾರಣೆಗೆ ಕೇಂದ್ರ ಸರ್ಕಾರವು ತ್ವರಿತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಬೇಕೆಂದರು.


ಬೀದರ ಜಿಲ್ಲೆ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪ ಮಾಡಿರುವ ಸಂಸದ ಸಾಗರ ಈಶ್ವರ ಖಂಡ್ರೆ ಅವರಿಗೆ ಮತ್ತೊಮ್ಮೆ ಬೀದರ ಜನತೆ ಹಾಗೂ ಸಮಸ್ತ ಪತ್ರಕರ್ತರ ಪರವಾಗಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷರಾದ ವಿಜಯಕುಮಾರ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿ ಶಶಿಕುಮಾರ ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.

prajaprabhat

Recent Posts

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

1 hour ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

3 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

4 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

4 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

4 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

4 hours ago