ಶ್ರೀರಂಗಪಟ್ಟಣ.10.ಮಾರ್ಚ.25:- ರಾಜ್ಯದಲ್ಲಿ ಮಡಿವಾಳ ಸಮುದಾಯವನ್ನು ಅನ್ನಪೂರ್ಣಮ್ಮ ವರದಿಯ ಶಿಫಾರಸ್ಸಿನಂತೆ ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಚಿತ್ರದುರ್ಗದ ಜಗದ್ಗುರು ಮಾಚಿದೇವ ಮಹಾ ಸಂಸ್ಥಾನ ಮಡಿವಾಳ ಗುರುಪೀಠದ ಪೀಠಾಧ್ಯಕ್ಷ ಬಸವ ಮಾಚಿದೇವ ಸ್ವಾಮೀಜಿ ಇಂದು ಒತ್ತಾಯಿಸಿದರು.
ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ‘ಮನೆ ಮನಕ್ಕೆ ಮಾಚಿದೇವ’ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಮಡಿವಾಳ ಜನಾಂಗದ ಪೈಕಿ ಶೇ 98ರಷ್ಟು ಜನರು ಬಟ್ಟೆ ತೊಳೆದು ಜೀವನ ನಡೆಸುತ್ತಿದ್ದಾರೆ. ನಮ್ಮ ಸಮಾಜದ ಮಕ್ಕಳಿಗೆ ಶಿಕ್ಷಣ, ಉದ್ಯೋಗ ಗಗನ ಕುಸುಮವಾಗಿದ್ದು, ರಾಜಕೀಯ ಶಕ್ತಿಯೂ ಇಲ್ಲ. ಸಮಾಜದಲ್ಲಿ ನಿಕೃಷ್ಠವಾಗಿ ಬದುಕುತ್ತಿರುವ ಮಡಿವಾಳ ಜನರನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಮೂಲಕ ಸರ್ಕಾರದ ಸವಲತ್ತುಗಳನ್ನು ಕಲ್ಪಿಸಿ ಘನತೆಯಿಂದ ಬದುಕಲು ಅನುವು ಮಾಡಿಕೊಡಬೇಕು’ ಎಂದು ಅವರು ಒತ್ತಾಯಿಸಿದರು.
‘ಅನ್ನಪೂರ್ಣಮ್ಮ ವರದಿಯ ಜಾರಿಗಾಗಿ ಹಲವು ದಶಕಗಳಿಂದ ನಿರಂತರವಾಗಿ ಹೋರಾಟ ನಡೆಯುತ್ತಿದೆ. ಆದರೆ ಸರ್ಕಾರಗಳು ಈ ವರದಿಯನ್ನು ಅನುಷ್ಠಾನ ಮಾಡದೆ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿವೆ. ಮಡಿವಾಳರು ಸಂಘಟಿತ ಹೋರಾಟ ನಡೆಸಬೇಕಾಗದ ಅಗತ್ಯವಿದೆ. ಹಾಗಾಗಿ ಹಳ್ಳಿ ಹಳ್ಳಿಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಮಾಚಿದೇವರ ಸಂದೇಶಗಳನ್ನು ಮನೆ ಮತ್ತು ಮನಕ್ಕೆ ಮುಟ್ಟಿಸುವ ಕಾರ್ಯವೂ ನಡೆಯುತ್ತಿದ್ದು, ಉತ್ತಮ ಸ್ಪಂದನೆ ಸಿಗುತ್ತಿದೆ’ ಎಂದು ಹೇಳಿದರು.
ತಾಲ್ಲೂಕಿನ ಆಲಗೂಡು, ಗಂಜಾಂ, ಮರಳಾಗಾಲ, ಅಲ್ಲಾಪಟ್ಟಣ, ಬಾಬುರಾಯನಕೊಪ್ಪಲು, ಪಾಲಹಳ್ಳಿ, ಬೆಳಗೊಳ, ಮಜ್ಜಿಗೆಪುರ, ಕೆಆರ್ಎಸ್, ನೆಲಮನೆ ಇತರ ಗ್ರಾಮಗಳಲ್ಲಿ ಶನಿವಾರ ಮತ್ತು ಭಾನುವಾರ ಬಸವ ಮಾಚಿದೇವ ಸ್ವಾಮೀಜಿ ಸಂಚರಿಸಿ ಜಾಗೃತಿ ಮೂಡಿಸಿದರು.
ಮಂಡ್ಯ ಜಿಲ್ಲಾ ವೀರ ಮಡಿವಾಳ ಮಾಚಿದೇವರ ಸಹಕಾರ ಸಂಘದ ಅಧ್ಯಕ್ಷ ಬಿ.ಟಿ. ಗುರುರಾಜ್, ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮರಳಾಗಾಲ ಮಂಜುನಾಥ್, ಮುಖಂಡರಾದ ಎಂ.ಎನ್. ಶ್ರೀನಿವಾಸ್, ಕೃಷ್ಣಪ್ಪ, ಆಲಗೂಡು ವೆಂಕಟಪ್ಪ, ಗಂಜಾಂ ಪ್ರಸನ್ನ, ಪಾಲಹಳ್ಳಿ ನಾರಾಯಣ್ ಇತರರು ಇದ್ದರು.
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…