ಬೆಂಗಳೂರು.23.ಮಾರ್ಚ್.25:- ಇಂದು ಬೆಂಗಳೂರು ಸ್ವತಂತ್ರ ಉದ್ಯಾನದಲ್ಲಿ ನಡೆಯುತ್ತಿರುವ ಹೋರಾಟ.ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕೊಡಲು ರಚಿಸಿದ ಸದಾಶಿವ ಆಯೋಗ ವರದಿ ಅವೈಜ್ಞಾನಿಕ ವಾಗಿದ್ದು ಅದನ್ನು ಸರಿಪಡಿಸಲು, ಪ್ರಸ್ತುತ ಗೌರವಾನ್ವಿತ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ ರವರ ನೇತೃತ್ವದಲ್ಲಿ.
ಏಕಸದಸ್ಯ ವಿಚಾರಣಾ ಆಯೋಗದಲ್ಲಿ ಪರಿಶಿಷ್ಟ ಜಾತಿಯ ಹೋಲಿಯ ಸಮಾಜದವರಿಗೆ ಕನಿಷ್ಠ ಶೇ.6.5 ನೀಡಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯ, ವ್ಯವಹಾರಿಕವಾಗಿ ಅಭಿವೃದ್ಧಿ ಹೊಂದಲು ಅವಕಾಶ ಮಾಡಿಕೊಳ್ಳಬೇಕು ಎಂದು ಮನವರಿಕೆ ಮಾಡಿಕೊಳ್ಳಲು ಬೆಂಗಳೂರ ವಸಂತನಗರದ ಡಾ. ಬಾಬಾ ಸಾಹೇಬ ಅಂಬೇಡ್ಕರ ಭವನದಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿತು ಈ ಸಭೆಗೆ ಆಗಮಿಸಿದ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನದಾಸ ರವರಿಗೆ ಔರಾದ ತಾಲೂಕಾ ಪ.ಜಾ ಬಲಗೈ ಹೋಲಿಯಾ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷರು ಶಿವಕುಮಾರ ಕಾಂಬಳೆ, ಕಾರ್ಯಧ್ಯಕ್ಷರು ಪ್ರಕಾಶ ಭಂಗಾರೆ ಮನವಿ ಪತ್ರ ಸಲ್ಲಿಸಿದರು.
