ಬೀದರ.12.ಜೂನ್.25:- ನ್ಯಾಯಮೂರ್ತಿಗಳಾದ ಗೌರವಾನ್ವಿತ ನಾಗಮೋಹನ್ದಾಸ್, ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷೆ ದಿನಾಂಕ: 02-06-2025 ರಿಂದ 08-06-2025 ರವರೆಗೆ ಕೇವಲ ವಿಶೇಷ ಶಿಬಿರಗಳು ಮತ್ತು ಆನ್ಲೈನ್ ಲಿಂಕ್ನಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳುವುದರ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ದಿನಾಂಕ: 06-06-2025 ರವರೆಗೆ ರಾಜ್ಯಾದ್ಯಂತ ಸಮೀಕ್ಷೆಯಲ್ಲಿ ಶೇ. 90 ರಷ್ಟು ಪ್ರಗತಿಯಾಗಿದ್ದು, ಸಮೀಕ್ಷಾ ಕಾರ್ಯದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕಾಗಿರುವುದರಿಂದ ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಜಿಲ್ಲೆಯ ಪರಿಶಿಷ್ಟ ಜಾತಿ ಕುಟುಂಬದವರಿಗೆ 22-06-2025 ರವರೆಗೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರಣ ನಾಗರೀಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಬೆಂಗಲೂರು ಒನ್, ಗ್ರಾಮ್ ಒನ್ ಕೇಂದ್ರಗಳು, ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸಮೀಕ್ಷೆಗೆ ಅವಕಾಶವನ್ನು ಕಲ್ಪಿಸಲಾಗುವುದು. ಬಿ.ಬಿ.ಎಂ.ಪಿ. ವ್ಯಾಪ್ತಿಯ 198 ಬಿ.ಬಿ.ಎಂ.ಪಿ.ವಾರ್ಡ ಕಚೇರಿಗಳಲ್ಲಿ ವ್ಯವಸ್ಥೆ ಮಾಡಿಕೊಂಡಿರುವ ಪ್ರತ್ಯೇಕವಾದ ಶಿಬಿರಗಳು.
ಇದಲ್ಲದೇ ಆನ್ಲೈನ್ https://schedulecastesurvey.karnataka.gov.in/selfdeclaration ಲಿಂಕ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳುವ ವಿಧಾನವನ್ನು ದಿನಾಂಕ: 22-06-2025 ರವರೆಗೆ ವಿಸ್ತರಿಸಲಾಗಿದೆಂದು ಅವರು ತಿಳಿಸಿದ್ದಾರೆ.
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…