08/06/2025 8:04 PM

Translate Language

Home » ಲೈವ್ ನ್ಯೂಸ್ » ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಇಟ್ಟ ಹಣ ರಾಜ್ಯ ಸರ್ಕಾರದಿಂದ ದುರ್ಬಳಿಕೆ ಖಂಡಿಸಿ ಇಂದು ಬಿಜೆಪಿಯಿಂದ ಪ್ರತಿಭಟನೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಇಟ್ಟ ಹಣ ರಾಜ್ಯ ಸರ್ಕಾರದಿಂದ ದುರ್ಬಳಿಕೆ ಖಂಡಿಸಿ ಇಂದು ಬಿಜೆಪಿಯಿಂದ ಪ್ರತಿಭಟನೆ

Facebook
X
WhatsApp
Telegram

ಬೀದರ.03.ಮಾರ್ಚ.25:- ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದಿಂದ  ಅಧಿಕಾರದ ಚುಕ್ಕಾಣಿ ಹಿಡಿದ ನಂತರ  ರಾಜ್ಯದ  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ಅವ್ಯವಯದಲ್ಲಿ  ಮೀಸಲಿಟ್ಟ ಹಣವನ್ನು ದುರ್ಬಳಿಕೆ ಮಾಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರಿಗೆ ಅನ್ಯಾಯ ಮಾಡಲಾಗಿದೆ ಇದರ ವಿರುದ್ಧ ಜಿಲ್ಲಾ ಭಾರತೀಯ ಜನತಾ ಪಾರ್ಟಿಯಿಂದ ಇಂದು ಬೆಳಿಗ್ಗೆ ೧೦ ಗಂಟೆಗೆ  ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.


        ಈ ಪ್ರತಿಭಟನೆಯಲ್ಲಿ ಸಾಂಸದ ಹಾಗೂ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ್ ಕಾರಜೋಳ, ರಾಜ್ಯ ಕಾರ್ಯದರ್ಶಿ ಹಾಗೂ ಬೀದರ ದಕ್ಷೀಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ , ಶಾಸಕರಾದ ಸಿಮೆಂಟ್ ಮಂಜು, ಕೃಷ್ಣ ನಾಯಕ ಹಡಗಲಿ,  ರಾಜ್ಯ ಮುಖ್ಯ ವಕ್ತರರಾದ ಅಶ್ವತ್ ನಾರಾಯಣ,  ಮಾಜಿ ಶಾಸಕರುಗಳಾದ  ಎಸ್.ಡಿ. ರಾಮಚಂದ್ರ, ಸೋಮಲಿಂಗಪ್ಪ್, ರಾಷ್ಟ್ರೀಯ ಎಸ್ಸಿ ಮೋರ್ಚಾದ ಕಾರ್ಯದರ್ಶಿಗಳಾದ ಜೈಕುಮಾರ ಕಾಂಗೆ, ಪ್ರಮುಖರಾದ ಫರ್ನಾಂಡಿಸ್ ಹಿಪ್ಪಳಗಾಂವ, ಕು.ಲಲಿತಾ ಅನಾಪುರ ಹಾಗೂ ಅಂಬರಾಯ  ಅಷ್ಟಗಿ ಸೇರಿದಂತೆ  ಜಿಲ್ಲೆಯ ಎಲ್ಲಾ ಬಿಜೆಪಿಯ ಶಾಸಕರು, ವಿಧಾನ ಪರಿಷತ್ ಸದಸ್ಯರು , ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಗಳು ಪಾಲ್ಗೊಳ್ಳಲಿದ್ದಾರೆ
ಈ  ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷ ರಾದ ಸೋಮನಾಥ ಪಾಟೀಲ ಅವರು  ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಪಕ್ಷದ  ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಳ್ಳಬೇಕೆದು ಪತ್ರಿಕಾ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!