ಬೆಂಗಳೂರು.04.ಏಪ್ರಿಲ್.25:- ಕರ್ನಾಟಕ ರಾಜ್ಯ ಸರ್ಕಾರ ಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಗೆ ವೃತ್ತಿಪರ ತರಬೇತಿ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಪ್ರಾರಂಭಿಸಿದೆ.
ಈ ಯೋಜನೆಯಡಿಯಲ್ಲಿ, ಭಾರತೀಯ ವಿಜ್ಞಾನ ಸಂಸ್ಥೆ (IISc), ಭಾರತೀಯ ತಾಂತ್ರಿಕ ಸಂಸ್ಥೆ (IIT) ಮತ್ತು ರಾಷ್ಟ್ರೀಯ ತಾಂತ್ರಿಕ ಸಂಸ್ಥೆ (NIT)ಗಳ ಮೂಲಕ Artificial Intelligence (AI) ಮತ್ತು Machine Learning (ML) ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳನ್ನು ನೀಡಲಾಗುತ್ತದೆ.
ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ 2024-25ನೇ ಸಾಲಿನ ಆಯವ್ಯಯ ಭಾಷಣ (ಕಂಡಿಕೆ-174) ಪ್ರಕಾರ, ಈ ತರಬೇತಿ ಕಾರ್ಯಕ್ರಮದ ಅವಧಿ ಗರಿಷ್ಠ ಎರಡು ವಾರಗಳಾಗಿದ್ದು, ಶಿಷ್ಯವೇತನ ಸಹಿತ ಉನ್ನತ ಮಟ್ಟದ ತರಬೇತಿ ಲಭ್ಯವಿರಲಿದೆ.
ತರಬೇತಿ ವಿಷಯ ಎಐ AI ಸಂಬಂಧಿತ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ಕೋರ್ಸ್.
ಸೌಲಭ್ಯ ನೀಡುವ ಇಲಾಖೆ ಸಮಾಜ ಕಲ್ಯಾಣ ಇಲಾಖೆ
ಮಾಸಿಕ ಶಿಷ್ಯವೇತನ Rs.15,000.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಏಪ್ರಿಲ್ 13, 2025
ದೂರವಾಣಿ ಸಂಖ್ಯೆ : 080- 26711096 ಇಲ್ಲಿ ಸಂಪರ್ಕಿಸಬಹುದು.
ಅರ್ಹತೆ: BE/B.Tech ಪದವಿ, ಕನಿಷ್ಠ 55% ಮಾರ್ಕ್ಸ್ ಬೇಕು.
ತರಬೇತಿ ಅವಧಿ: ಗರಿಷ್ಠ 2 ವಾರಗಳು (IISc, IIT, NIT ಮುಂತಾದ ಸಂಸ್ಥೆಗಳಲ್ಲಿ).
ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ 2024-25ನೇ ಸಾಲಿನ ಆಯವ್ಯಯ ಭಾಷಣ (ಕಂಡಿಕೆ-174) ಪ್ರಕಾರ, ಈ ತರಬೇತಿ ಕಾರ್ಯಕ್ರಮದ ಅವಧಿ ಗರಿಷ್ಠ ಎರಡು ವಾರಗಳ ಆಗಿದ್ದು, ಪ್ರತಿಯೊಬ್ಬರಿಗೆ 15,000 ರೂ. ಶಿಷ್ಯವೇತನ ನೀಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಬನಶಂಕರಿ, ಬೆಂಗಳೂರು ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸಲು ದಾಖಲಾತಿಗಳು:
ಅರ್ಜಿದಾರರ ಆಧಾರ್ ಕಾರ್ಡ ಪ್ರತಿ/Aadhar card.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste Certificate.
ಪೋಟೋ/Photo.
ಅಭ್ಯರ್ಥಿಯ ಅಂಕಪಟ್ಟಿ/Marks Card.
ಬ್ಯಾಂಕ್ ಪಾಸ್ ಬುಕ್/Bank Pass Book
ಈ ಮೂಲಕ ಇಂಜಿನಿಯರಿಂಗ್ ಪದವೀಧರರು ತಂತ್ರಜ್ಞಾನ ಕ್ಷೇತ್ರದಲ್ಲಿ ತಮ್ಮ ನೈಪుణ್ಯವನ್ನು ಹೆಚ್ಚಿಸಿಕೊಳ್ಳಲು ಹಾಗೂ ಉದ್ಯೋಗಾವಕಾಶಗಳನ್ನು ವಿಸ್ತರಿಸಲು ಸಹಾಯವಾಗಲಿದೆ.ನಿಗದಿತ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಏಪ್ರಿಲ್ 13 ರೊಳಗೆ ಅರ್ಜಿ ಸಲ್ಲಿಸಬಹುದು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…