ತೆಲಂಗಾಣದಲ್ಲಿ, ಪಹಲ್ಗಾಮ್ನಲ್ಲಿ ನಾಗರಿಕರ ಮೇಲಿನ ಭಯೋತ್ಪಾದಕ ದಾಳಿಯನ್ನು ಪ್ರತಿಭಟಿಸಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಇಂದು ಮೇಣದಬತ್ತಿ ರ್ಯಾಲಿ ನಡೆಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಭಯೋತ್ಪಾದನೆಯನ್ನು ನಿಗ್ರಹಿಸಲು ಯಾವುದೇ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಾಂಗ್ರೆಸ್ ಮತ್ತು ತೆಲಂಗಾಣ ಸರ್ಕಾರ ಕೇಂದ್ರ ಸರ್ಕಾರಕ್ಕೆ ಎಲ್ಲಾ ಬೆಂಬಲವನ್ನು ನೀಡುತ್ತದೆ ಎಂದು ಹೇಳಿದರು. ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವ ಸಮಯ ಬಂದಿದೆ ಎಂದು ಅವರು ಹೇಳಿದರು.
ಎಐಸಿಸಿ ನೀಡಿದ ಕರೆಯ ಮೇರೆಗೆ, ರ್ಯಾಲಿ ನಡೆಸಲಾಯಿತು.
ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್-ಮುಸ್ಲಿಮೀನ್ ಅಧ್ಯಕ್ಷ ಮತ್ತು ಲೋಕಸಭಾ ಸದಸ್ಯ ಅಸಾದುದ್ದೀನ್ ಓವೈಸಿ ಮತ್ತು ಹಲವಾರು ವಿದೇಶಿ ಪ್ರತಿನಿಧಿಗಳು ಸಹ ಒಗ್ಗಟ್ಟಿನಿಂದ ರ್ಯಾಲಿಯಲ್ಲಿ ಸೇರಿಕೊಂಡರು.