ಪಾಕಿಸ್ತಾನ ವಿರುದ್ಧ ಯುದ್ಧ ಮಾಡುವ ಅಗತ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ.

ಮೈಸೂರು.26.ಏಪ್ರಿಲ್.25- ಪೆಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅವಶ್ಯಕತೆ ಇಲ್ಲ. ನಾವು ಬಿಗಿಯಾದ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭದ್ರತಾ ವೈಫಲ್ಯತೆ ಇದೆ ಎಂದು ನಾನು ಆರಂಭದಲ್ಲೇ ಹೇಳಿದ್ದೆ. ಈಗ ಕೇಂದ್ರ ಸರ್ಕಾರ ಅದನ್ನು ಒಪ್ಪಿಕೊಂಡಿದೆ. ಅಲ್ಲಿಗೆ ನಾನು ಹೇಳಿದ್ದು ನಿಜವಾಗಿದೆ ಎಂದರು.

ಭದ್ರತಾ ವ್ಯವಸ್ಥೆಯನ್ನು ಬಿಗಿ ಮಾಡಬೇಕು. ನಾವು ಯುದ್ಧದ ಪರ ಇಲ್ಲ, ಶಾಂತಿ ವ್ಯವಸ್ಥೆ ಇರಬೇಕು. ಜನರಿಗೆ ಭದ್ರತೆ ಇರಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಜಮ್ಮು-ಕಾಶ್ಮೀರ ಪ್ರವಾಸಿ ಸ್ಥಳ. ಅಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕಿತ್ತು. ಪುಲ್ವಾಮಾ ದಾಳಿಯ ಬಳಿಕ ಎಚ್ಚರಿಕೆಯಿಂದ ಇರಬೇಕಿತ್ತು. ಗುಪ್ತಚರ ಹಾಗೂ ಭದ್ರತೆಯ ವೈಫಲ್ಯ ಎದ್ದುಕಾಣುತ್ತಿದೆ
ಜಮ್ಮು-ಕಾಶ್ಮೀರದಲ್ಲಿ ಸುರಕ್ಷಿತ ವಾತಾವರಣ ಇದೆ ಎಂದು ಜನ ನಂಬಿ ಪ್ರವಾಸ ಹೋಗುತ್ತಿದ್ದರು. ಕೇಂದ್ರದವರಿಗೆ ರಕ್ಷಣೆ ನೀಡಲು ಸಾಧ್ಯವಾಗಿಲ್ಲ, 26 ಮಂದಿಯ ಜೀವ ಹೋಗಿದೆ.

ಈಗ ಏನೆಲ್ಲಾ ಕ್ರಮ ಕೈಗೊಂಡರೂ ಅಷ್ಟು ಜೀವಗಳು ವಾಪಸ್ ಬರುತ್ತವೆಯೇ? ಎಂದರು.ದಾಳಿಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಗಳು ಇರಲಿಲ್ಲ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ರಾಜ್ಯಸರ್ಕಾರದ ಪರವಾಗಿ ಸಂತೋಷ್ ಲಾಡ್ ಅವರನ್ನು ಕಳುಹಿಸಲಾಗಿದ್ದು, ಅವರು ವಾಪಸ್ ಬಂದಿದ್ದಾರೆ. ತಾವಿನ್ನೂ ಅವರೊಂದಿಗೆ ಚರ್ಚೆ ಮಾಡಿಲ್ಲ. ಅವರಿಂದ ಮಾಹಿತಿ ಪಡೆದ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದರು.

ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ ಕಳುಹಿಸುವ ಸಂಬಂಧ ಕೇಂದ್ರಸರ್ಕಾರಕ್ಕೆ ಅಗತ್ಯ ಸಹಕಾರ ನೀಡುತ್ತೇವೆ. ಕೇಂದ್ರಕ್ಕೆ ಎಲ್ಲಾ ರೀತಿಯ ಮಾಹಿತಿಗಳನ್ನು ಒದಗಿಸುತ್ತೇವೆ. ಎಷ್ಟು ಜನ ಇಲ್ಲಿ ನೆಲೆಸಿದ್ದಾರೆ ಎಂಬ ಮಾಹಿತಿ ಸದ್ಯಕ್ಕಿಲ್ಲ, ಬಹುತೇಕ ಬೆಂಗಳೂರಿನಲ್ಲೇ ಹೆಚ್ಚು ಜನ ವಾಸಿಸುತ್ತಿರಬಹುದು ಎಂದರು.

ಪಹಲ್ಯಾಮ್ ದಾಳಿಯ ಬಳಿಕ ಕರೆಯಲಾದ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಬೇಕಿತ್ತು. ಅದನ್ನು ಬಿಟ್ಟು ಬಿಹಾರದಲ್ಲಿ ಚುನಾವಣೆ ಎದುರಾಗಲಿದೆ ಎಂಬ ಕಾರಣಕ್ಕೆ ಅಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಅವರಿಗೆ ಯಾವುದು ಮುಖ್ಯ ಎಂಬುದು ಇದರಿಂದ ಗೊತ್ತಾಗುತ್ತದೆ. ಕೇಂದ್ರ ಸರ್ಕಾರ ಜನರನ್ನು ನಂಬಿಸಿ ಟೋಪಿ ಹಾಕುತ್ತಿದೆ ಎಂದು ಆರೋಪಿಸಿದರು.

26 ಜನರ ಸಾವನ್ನು ಕೇಂದ್ರಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂಬುದು ಇದರಿಂದ ಅರ್ಥವಾಗುತ್ತದೆ ಎಂದರು. ತಮ್ಮ ಆರೋಗ್ಯ ಈಗ ಶೇ.90ರಷ್ಟು ಸುಧಾರಿಸಿದೆ. ಇನ್ನೂ ಶೇ.10 ರಷ್ಟು ಸಮಸ್ಯೆಯಿದೆ. ಆದರೆ ತಿರುಗಾಡುವಷ್ಟು ಆರಾಮಾಗಿದ್ದೇನೆ ಎಂದರು. ಮೊದಲನೇ ಬಾರಿ ಮುಖ್ಯಮಂತ್ರಿಯಾಗಿದ್ದಾಗಲೇ ಚಾಮರಾಜನಗರಕ್ಕೆ ಭೇಟಿ ನೀಡಿ ಕಳಂಕವನ್ನು ತೊಳೆದಿದ್ದೇನೆ. ಅಲ್ಲಿಗೆ ಹೋದರೆ ಅಧಿಕಾರ ಹೋಗುತ್ತದೆ ಎಂಬುದು ಆಗಲೇ ಸುಳ್ಳಾಯಿತು. ಮೊನ್ನೆ ಹೋಗಿರುವುದು ಪುನರಾವರ್ತನೆಯ ಭೇಟಿ ಎಂದು ಹೇಳಿದರು.

prajaprabhat

Recent Posts

ದಕ್ಷಿಣ ಭಾರತದಲ್ಲಿ ಭಾರೀ ಮಳೆ, ಪೂರ್ವ-ಮಧ್ಯ ಭಾರತದಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ: ಐಎಂಡಿ ಮುನ್ಸೂಚನೆ

ಹೊಸ ದೆಹಲಿ.10.ಜೂನ್.25:- ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡು, ಕೇರಳ, ಮಾಹೆ, ಒಡಿಶಾ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್…

7 minutes ago

ಹಣಕಾಸು ಸಚಿವ ಸೀತಾರಾಮನ್ ಅಧ್ಯಕ್ಷತೆಯಲ್ಲಿ 6ನೇ NIIF ಜಿಸಿ ಸಭೆ.

ಹೊಸ ದೆಹಲಿ.10.ಜೂನ್.25:- ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ…

14 minutes ago

ಭಾರತೀಯ ಯುವಕರು ಉದ್ಯೋಗಾಕಾಂಕ್ಷಿಗಳಿಂದ ಉದ್ಯೋಗ ಸೃಷ್ಟಿಕರ್ತರಾಗಿ ಪರಿವರ್ತನೆಗೊಳ್ಳುತ್ತಿದ್ದಾರೆ, ಐಐಟಿಗಳು ನಿರ್ಣಾಯಕ ಪಾತ್ರ ವಹಿಸುತ್ತಿವೆ: ಲೋಕಸಭಾ ಸ್ಪೀಕರ್

ಹೊಸ ದೆಹಲಿ.10.ಜೂನ್.25:- ಭಾರತವು ತನ್ನ ಯುವ ಪ್ರತಿಭೆ ಮತ್ತು ತಾಂತ್ರಿಕ ನಾವೀನ್ಯತೆಗಳ ಬಲದ ಮೂಲಕ ಸಮಕಾಲೀನ ಸವಾಲುಗಳನ್ನು ಎದುರಿಸುವಲ್ಲಿ ಜಾಗತಿಕ…

18 minutes ago

ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದ ಶೆಲ್ ದಾಳಿಯಿಂದ ಹಾನಿಗೊಳಗಾದ 2060 ಮನೆಗಳಿಗೆ ಸರ್ಕಾರ 25 ಕೋಟಿ ನೆರವು ನೀಡಲಿದೆ.

ಹೊಸ ದೆಹಲಿ.10.ಜೂನ್.25:- ಗಡಿ ಪ್ರದೇಶಗಳಲ್ಲಿ ಹಾನಿಗೊಳಗಾದ 2,060 ಮನೆಗಳಿಗೆ ಸರ್ಕಾರ ಹೆಚ್ಚುವರಿ 25 ಕೋಟಿ ರೂಪಾಯಿಗಳನ್ನು ಒದಗಿಸಲಿದೆ. ಆಪರೇಷನ್ ಸಿಂಧೂರ್…

29 minutes ago

ಸಿಂಗಾಪುರದ ಹಡಗು MV ವಾನ್ ಹೈ 503 ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಭಾರತೀಯ ನೌಕಾಪಡೆ 18 ಸಿಬ್ಬಂದಿಯನ್ನು ರಕ್ಷಿಸಿದೆ.

ಹೊಸ ದೆಹಲಿ.10.ಜೂನೆ.25:- ಭಾರತೀಯ ನೌಕಾಪಡೆಯು, ಕರಾವಳಿ ರಕ್ಷಣಾ ಪಡೆಗಳೊಂದಿಗೆ ನಿಕಟವಾಗಿ ನಡೆಸಿದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ, ಸಿಂಗಾಪುರದ ಧ್ವಜಾರೋಹಣ…

33 minutes ago

20 ಶಿಕ್ಷಕರ ಹುದ್ದೆಗಳು ಖಾಲಿ ಇಂದೆ  ಅರ್ಜಿ ಸಲ್ಲಿಸಿ.

2025-26ನೇ ಶೈಕ್ಷಣಿಕ ಸಾಲಿಗೆ ತಾಲೂಕುಗಳಲ್ಲಿ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗ ತಲಾ 02 ರಂತೆ ವಿಶೇಷ ಸಂಪನ್ಮೂಲ…

48 minutes ago