ಪಾರಂಪರಿಕ ವೈದ್ಯರು ಸದಾ ಶೋಧನೆ ಮಾಡುತ್ತಿರಬೇಕು: ಡಾ.ವಿ.ಪಿ.ಸಿಂಗ್

ಬೀದರ.03.ಮಾರ್ಚ.25:-ಪಾರಂಪರಿಕ ವೈದ್ಯ ಪದ್ಧತಿಗೆ ಭಾರತದಲ್ಲಿ ತನ್ನದೇ ಆದ ಶ್ರೀಮಂತ ಇತಿಹಾಸವಿದೆ. ವೈದ್ಯರು ಸದಾ ಶೋಧನೆ ಮಾಡುತ್ತ ಜನತೆಗೆ ಉತ್ತಮ ಚಿಕಿತ್ಸೆ ನೀಡಬೇಕೆಂದು ತೋಟಗಾರಿಕಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ವಿ.ಪಿ.ಸಿಂಗ್ ತಿಳಿಸಿದರು.

ಅವರು ಇಂದು ಜಿಲ್ಲಾಡಳಿತ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಬೆಂಗಳೂರು, ಪಾರಂಪರಿಕ ವೈದ್ಯ ಪರಿಷತ್ತು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ತು ಲಿಂಗಸುಗೂರು ಇವರ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ನಡೆಯುತ್ತಿರುವ 15ನೇ ಪಾರಂಪರಿಕ ವೈದ್ಯ ಸಮ್ಮೇಳನದ ಮೂರನೇ ಗೋಷ್ಠಿ “ಔಷಧಿ ಸಸ್ಯಗಳನ್ನು ಬೆಳೆಸುವುದು ಮತ್ತು ಮಾರಾಟ ಮಾಡುವುದು ಹಾಗೂ ಔಷಧಿ ಸಸ್ಯಗಳ ಸಂರಕ್ಷಣೆ” ಗೋಷ್ಠಿ ಉದ್ದೇಶಿಸಿ ಮಾತನಾಡಿದರು.


ಔಷಧೀಯ ಸಸ್ಯಗಳನ್ನು ಬೆಳೆಸುವುದು ಮತ್ತು ಮಾರಾಟ ಮಾಡುವುದರ ಜೊತೆಗೆ ಅವುಗಳನ್ನು ಸಂರಕ್ಷಣೆ ಮಾಡಬೇಕಾದ ಅವಶ್ಯಕತೆ ಇದೆ. ಸದ್ಯ ಪಾರಂಪರಿಕ ಔಷಧ ಕ್ಷೇತ್ರ ಒಟ್ಟು 55 ಬಿಲಿಯನ್ ಡಾಲರ್ ವ್ಯವಹಾರ ಮಾಡುತ್ತಿದೆ. ನಾಟಿ ವೈದ್ಯರು ಹೊಸ ಹೊಸ ಸಸ್ಯಗಳಾದ ಅಶ್ವಗಂಧ, ಮುಸ್ಲಿಗಿಡ, ನಾಗದಾಲಿ ಗಿಡ, ಭೋಮಿ ಆವ್ಲಾ ಇವುಗಳ ಉಪಯೋಗ ಅರಿತು ಜನತೆಗೆ ಚಿಕಿತ್ಸೆ ನೀಡಬೇಕು. ಸದಾ ಸಂಶೋಧನಾ ಶೀಲರಾಗಿ ರಾಜ್ಯದ ಪಾರಂಪರಿಕ ವೈದ್ಯರೊಂದಿಗೆ ಸಂಪರ್ಕ ಸಾಧಿಸಿ ಉತ್ತಮ ವೈದ್ಯರಾಗಿ ಹೊರಹೊಮ್ಮಬೇಕೆಂದು ತಿಳಿಸಿದರು. ಹಲವು ದೀರ್ಘಕಾಲಿಕ ಕಾಯಿಲೆಗಳನ್ನು ಹೊಡೆದೋಡಿಸುವ ಶಕ್ತಿ ಆಯುರ್ವೇದಕ್ಕಿದೆ ಎಂದು ಡಬ್ಲೂ.ಎಚ್.ಓ. ಹೇಳಿದೆ ಎಂದರು.


ಅಧ್ಯಕ್ಷತೆ ವಹಿಸಿದ್ದ ಎನ್.ಕೆ.ಜಾಬಶೆಟ್ಟಿ ಆಯುರ್ವೇದ ಮೆಡಿಕಲ್ ಕಾಲೇಜಿನ ಉಪನ್ಯಾಸಕ ಡಾ. ಧೂಳಪ್ಪ ಮಾತನಾಡಿ ಔಷಧ ಇಲ್ಲದ ಸಸ್ಯಗಳೇ ಇಲ್ಲ. ಅದನ್ನು ಯುಕ್ತಿಯಿಂದ ಬಳಸಿಕೊಳ್ಳುವ ಜಾಣ್ಮೆ ಪಾರಂಪರಿಕ ವೈದ್ಯರಲ್ಲಿ ಇರಬೇಕು. ತನ್ಮೂಲಕ ಆಯುರ್ವೇದಕ್ಕೆ ವೈಜ್ಞಾನಿಕ ಪರಿವರ್ತನೆ ಕೊಡಬಹುದು. ಜೀವ ಸಂರಕ್ಷಕ ಔಷಧಿಗಳನ್ನು ತಯಾರಿಸುವ ಚಾಕಚಕ್ಯತೆ ವೈದ್ಯರಲ್ಲಿ ಇರಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಉಪನಿರ್ದೇಶಕಿ ಡಾ. ಪವಿತ್ರಾ ಪ್ರಾಸ್ತಾವಿಕವಾಗಿ ಮಾತನಾಡಿದರು.


ಈ ಸಂದರ್ಭದಲ್ಲಿ ಪಾರಂಪರಿಕ ವೈದ್ಯ ಪರಿಷತ್ತು ಬೆಂಗಳೂರಿನ ಕಾರ್ಯದರ್ಶಿ ಅನುಗನಾಳು ಕೃಷ್ಣಮೂರ್ತಿ, ದಿನಕರರಾವ ಕುಲಕರ್ಣಿ ಕಲಬುರಗಿ, ವಿಶ್ವನಾಥ ವೈದ್ಯ ಉಡುಪಿ, ರಮೇಶ ಮಹೇಂದ್ರಕರ್ ಕಲಬುರಗಿ, ಪ್ರಕಾಶ ಬೀಳೂರ, ವಿರೂಪಾಕ್ಷ ಕೋಡಿಹಾಳ ಸೇರಿದಂತೆ ಹಲವರಿದ್ದರು. ಸುಭಾಷ ನೇಳಗೆ ನಿರೂಪಿಸಿದರು. ವೈಜಿನಾಥ ಪಾಟೀಲ ಸ್ವಾಗತಿಸಿದರು. ಡಾ. ರಾಜಕುಮಾರ ಹೆಬ್ಬಾಳೆ ವಂದಿಸಿದರು.

ಸರ್ಕಾರ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಆಯುರ್ವೇದ ಕ್ಯಾನ್ಸರ್
ಚಿಕಿತ್ಸಾ ಕೇಂದ್ರ ಆರಂಭಿಸಲಿ-ಡಾ. ಡಿ.ಪಿ.ರಮೇಶ

prajaprabhat

Recent Posts

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

4 hours ago

ರಾಜ್ಯ ‘ಸರ್ಕಾರಿ ನೌಕರರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಲಾಭ ಪಡೆಯಲು ಈ ದಾಖಲೆಗಳು ಕಡ್ಡಾಯ |

ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ'ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ…

5 hours ago

ಕರ್ಣಾಟಕ ರಾಜ್ಯದ ಈ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ! ಕೇಂದ್ರದಿಂದ ಆತಂಕಕಾರಿ ವರದಿ!

ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…

9 hours ago

ತೋಟಗಾರಿಕೆ ವಿಶ್ವವಿದ್ಯಾಲಯ ಘಟಿಕೋತ್ಸವ ಜೂನ್ 10ರಂದು ನಡೆಯಲಿದೆ.

ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ  ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…

17 hours ago

ಫ್ರೆಂಚ್ ಓಪನ್ ಟೆನಿಸ್: ಮಹಿಳಾ ಸಿಂಗಲ್ಸ್ ಪ್ರಶಸ್ತಿ ಪಂದ್ಯದಲ್ಲಿ ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ವಿಶ್ವದ ನಂ. 2 ಆಟಗಾರ್ತಿ ಕೊಕೊ ಗೌಫ್ ಅವರನ್ನು ಎದುರಿಸಲಿದ್ದಾರೆ.

ಫ್ರೆಂಚ್ ಓಪನ್ ಟೆನಿಸ್‌ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…

19 hours ago

ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಬ್ರಿಕ್ಸ್ ರಾಷ್ಟ್ರಗಳು, ಭಯೋತ್ಪಾದನೆ ಕುರಿತು ಶೂನ್ಯ ಸಹಿಷ್ಣುತೆ ನೀತಿಯನ್ನು ಬೆಂಬಲಿಸಿವೆ.

"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…

19 hours ago