SC/ST ಮೇಲಿನ ದಾಖಲಾಗುವ ಪ್ರಕರಣಗಳನ್ನು DCRE ಪೊಲೀಸ್ ಠಾಣೆಗಳಿಗೆ ವರ್ಗಾಯಿಸಲು ಸೂಚಿಸಲಾಗಿದೆ.

ಬೆಂಗಳೂರು.13.ಜೂನ್.25:- ರಾಜ್ಯದ ಡಿಸಿಆರ್‌ಇ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸುವ ಮತ್ತು ತನಿಖೆ ನಡೆಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ (1)ರ ಅಧಿಸೂಚನೆಯಲ್ಲಿ ರಾಜ್ಯಾದ್ಯಂತ ಒಟ್ಟು 33 ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ.

ಸದರಿ ಅಧಸೂಚನೆಯಲ್ಲಿ ನಮೂದಿಸಿರುವ ಕಾಯಿದೆಗಳಡಿ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ಮುಂದಿನ ತನಿಖೆಗಾಗಿ ಡಿ.ಸಿ.ಆರ್.ಇ ಪೊಲೀಸ್ ಠಾಣೆಗಳಿಗೆ ಉಲ್ಲೇಖಿತ (2)ರ ಸರ್ಕಾರದ ಆದೇಶದಲ್ಲಿ ನೀಡಿರುವ ಮಾರ್ಗಸೂಚಿಗಳನ್ವಯ ವರ್ಗಾಯಿಸಲು ಸೂಚಿಸಲಾಗಿದೆ.

ಉಲ್ಲೇಖಿತ (2)ರ ಸರ್ಕಾರಿ ಆದೇಶದನ್ವಯ. ದಿನಾಂಕ:14.04.2025 ರಿಂದ ಅನ್ವಯವಾಗುವಂತೆ 33 ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯಾಗತಗೊಳಿಸಲಾಗಿರುತ್ತದೆ. ಆದರೆ, ಸದರಿ ಡಿಸಿಆರ್‌ಇ ಪೊಲೀಸ್ ಠಾಣೆಗಳಿಗೆ ಠಾಣಾಧಿಕಾರಿಗಳ, ಇತರೆ ಅಧಿಕಾರಿ/ಸಿಬ್ಬಂದಿಗಳ ನಿಯೋಜನ ಮತ್ತು ಪೊಲೀಸ್ ಐಟಿ ತಂತ್ರಾಂಶ ಅಳವಡಿಕೆಯು ಪೂರ್ಣಗೊಂಡಿರುವುದಿಲ್ಲ. ಆದುದರಿಂದ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳನ್ನು ಡಿಸಿಆರ್‌ಇ ಪೊಲೀಸ್ ಠಾಣೆಗಳಿಗೆ ವರ್ಗಾವಣೆ ಪಡೆದುಕೊಳ್ಳಲು ಸಾಧ್ಯವಾಗಿರುವುದಿಲ್ಲ.

ಪ್ರಸ್ತುತ 33 ಡಿಸಿಆರ್‌ಇ ಪೊಲೀಸ್ ಠಾಣೆಗಳ ಪೈಕಿ ಅನುಬಂಧ-1 ರಲ್ಲಿ ನಮೂದಿಸಿರುವ 15 ಡಿಸಿಆರ್‌ಇ ಠಾಣೆಗಳಲ್ಲಿ ಮೂಲಭೂತ ಸಿದ್ಧತೆಗಳು ಪೂರ್ಣಗೊಂಡಿರುತ್ತದೆ. ಆದ್ದರಿಂದ ದಿನಾಂಕ:12.06.2025 ರಿಂದ ಅನ್ವಯವಾಗುವಂತೆ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಅಧಿಸೂಚಿತ ಕಾಯಿದೆಗಳಡಿ ದಾಖಲಾಗುವ ಪ್ರಕರಣಗಳನ್ನು ಡಿಸಿಆರ್‌ಇ ಪೊಲೀಸ್ ಠಾಣೆಗಳಿಗೆ ವರ್ಗಾಯಿಸಲು ಸೂಚಿಸಲಾಗಿದೆ.

ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಉಲ್ಲೇಖಿತ (1)ರ ಅಧಿಸೂಚನೆಯನ್ವಯ ದಾಖಲಾಗುವ ಪ್ರಕರಣಗಳಲ್ಲಿ ಈ ಕೆಳಕಂಡ ಪರಿಶೀಲನಾ ಪಟ್ಟಿಯಲ್ಲಿ ನಮೂದಿಸಿರುವ ಅಂಶಗಳನ್ನು ತನಿಖಾಧಿಕಾರಿಯವರು ಭರ್ತಿ ಮಾಡಿ ತಮ್ಮ ವರದಿಯೊಂದಿಗೆ ಸಂಬಂಧಪಟ್ಟ ಡಿಸಿಆರ್‌ಇ ಪೊಲೀಸ್ ಠಾಣೆಗೆ ಮುಂದಿನ ತನಿಖೆಗಾಗಿ ವರ್ಗಾಯಿಸತಕ್ಕದ್ದು ಮತ್ತು ಈ ಮಾಹಿತಿಯನ್ನು ತಮ್ಮ ಘಟಕಾಧಿಕಾರಿಯವರಿಗೆ ಸಮುಚಿತ ಮಾರ್ಗದಲ್ಲಿ ಸಲ್ಲಿಸತಕ್ಕದ್ದು.

prajaprabhat

Recent Posts

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಅಹ್ವಾನ

ಶಿವಮೊಗ್ಗ.14.ಜೂನ್.25:-  ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ…

16 minutes ago

ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಸಿಬ್ಬಂದಿಗಳಿಗೆ ‘ನಿವೃತ್ತಿ ವೇತನ ಹೆಚ್ಚಳ ಸರ್ಕಾರ ಆದೇಶ.!

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎಂಬಂತೆ ನಿವೃತ್ತಿ ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ…

27 minutes ago

ಭಾಗ್ಯಲಕ್ಷ್ಮೀ ಯೋಜನೆಗೆ 18 ವರ್ಷ ಪೂರ್ಣ: ಮೊದಲ ಫಲಾನುಭವಿಗಳಿಗೆ ಹಣ ರವಾನೆ ಆರಂಭ

ಬೀದರ.14.ಜೂನ್.25:- ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ  ಬರುವ ಭಾಗ್ಯಲಕ್ಷ್ಮೀ ಯೋಜನೆಯಡಿ ದಿನಾಂಕ:01-06-2006 ರಿಂದ 31-07-2008ರ…

6 hours ago

ಐಟಿಐ ಪ್ರವೇಶಾತಿಗಾಗಿ ಆಫ್‌ಲೈನ್ ಅರ್ಜಿ ಆಹ್ವಾನ

ಬೀದರ.14.ಜೂನ್.25:- ಜಿಲ್ಲೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹುಮನಾಬಾದನಲ್ಲಿ ಅಗಸ್ಟ್-2025 ನೇ ಶೈಕ್ಷಣಿಕ ಸಾಲಿನ ಮೊದಲ ಸುತ್ತಿನ ಆನ್‌ಲೈನ್ ಪ್ರವೇಶಾತಿ…

6 hours ago

ಧರ್ತಿ ಆಬಾ ಅಭಿಯಾನ-ಜಾಗೃತಿ ಮತ್ತು ಪ್ರಯೋಜನ ಸ್ಯಾಚುರೇಶನ್ ಶಿಬಿರಗಳು ಆಯೋಜನೆಗೆ ಅಗತ್ಯ ಕ್ರಮಕ್ಕೆ ಸೂಚನೆ

ಬೀದರ.14.ಜೂನ್.25:- ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ನವದೆಹಲಿ ಅವರು ಉಡಿಚಿತ್…

6 hours ago

ವಿದ್ಯುತ್ ವ್ಯತ್ಯಯ ಜೂ.15ಕ್ಕೆ

ಬೀದರ.14.ಜೂನ್.25:- 110/33-11ಕೆವಿ ಉಪ ವಿತರಣ ಕೇಂದ್ರ, ಕವಿಪ್ರನಿನಿ ಕೋಳಾರ್ (ಕೆ) ವ್ಯಾಪ್ತಿಯಲ್ಲಿ ಬರುವ 110 ಕೆವಿ ಕೋಳಾರ್ (ಕೆ) ವಿದ್ಯುತ್…

6 hours ago