ಪೊಲೀಸ ರನ್-2025 ಮ್ಯಾರಾಥನ್‍ಗೆ ಚಾಲನೆ ನೀಡಿದ ಎಸ್.ಪಿ. ಪ್ರದೀಪ ಗುಂಟಿ


ಬೀದರ.09.ಮಾರ್ಚ.25: – ಮಾದಕವಸ್ತುಗಳ ಮತ್ತು ಸಂಚಾರ ನಿಯಮಗಳ ಬಗ್ಗೆ ನಿರಂತರವಾಗಿ ಪೆÇಲೀಸ್ ಇಲಾಖೆ ಜನಜಾಗೃತಿ ಮೂಡಿಸಲಾಗುತ್ತಿದೆ. ಬೀದರ ಜಿಲ್ಲೆಯನ್ನು ಅಪರಾಧ ಮುಕ್ತವಾಗಿ ಮಾಡಲು ಪೆÇಲೀಸದೊಂದಿಗೆ ಯುವಸಮೂಹ ಕೈ ಜೋಡಿಸಬೇಕು ಮತ್ತು ಸಹಕಾರ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ ಹೇಳಿದರು.


ಅವರು ಇಂದು ಬೀದರ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸ್ಟೇಟ್ ಬ್ಯಾಂಕ್ ಆ ಇಂಡಿಯಾ ಸಹಯೋಗದಲ್ಲಿ ಆಯೋಜಿಸಿದ್ದ ಡ್ರಗ್ಸ್, ಅಪರಾಧ ಮುಕ್ತ ಬೀದರ ಜಿಲ್ಲೆ ರೂಪಿಸಲು ಹಮ್ಮಿಕೊಂಡಿದ್ದ ಪೆÇಲೀಸ್ ಹಾಗೂ ನಾಗರಿಕರಿಂದ ಕೂಡಿದ್ದ ಪೆÇಲೀಸ್ ರನ್- 2025 ಮ್ಯಾರಾಥನ್ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಇಲಾಖೆಗಳು ಹೆಚ್ಚು ಜನಪರ ಮತ್ತು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾರ್ವಜನಿಕರ ಸಹಕಾರ ಮತ್ತು ಸಕ್ರಿಯವಾಗಿ ಪಾಲ್ಗೋಳ್ಳುವಿಕೆ ಮುಖ್ಯವಾಗಿದೆ. ಡ್ರಗ್ಸ್ ನಿಯಂಯ್ರಣಕ್ಕೆ ಹಾಗೂ ರಸ್ತೆ ಅಪಘಾತಗಳನ್ನು ತಪ್ಪಿಸಿ ಸಂಚಾರ ನಿಯಮಗಳನ್ನು ಉತ್ತಮವಾಗಿ ನಿರ್ವಹಿಸಲು ಯುವಕ, ಯುವತಿಯರ ಸಹಕಾರ ಬೇಕು. ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಿ, ಸಕ್ರಿಯವಾಗಿ ಭಾಗವಹಿಸಬೇಕು. ಪೆÇಲೀಸ್ ರನ್-2025 ಗೆ ಯುವ ಸಮೂಹದಿಂದ ಉತ್ತಮ ಸ್ಪಂದನೆ ಮೂಡಿದೆ ಎಂದು ಅವರು ತಿಳಿಸಿದರು.


ನಗರದ ಸಿದ್ಧಾರೂಢ ಮಠದಿಂದ ಆರಂಭಗೊಂಡ 5 ಕಿ.ಮೀ. ಓಟ ಬಿವಿಬಿ ಕಾಲೇಜು, ಮೈಲೂರ ಕ್ರಾಸ್, ಹಾರೂರಗೇರಿ ಕಮಾನ್, ಬೋಮಗೊಂಡೇಶ್ವರ ವೃತ್ತ, ಭಗತಸಿಂಗ ವೃತ್ತ, ಶಿವಾಜಿ ವೃತ್ತ, ಮಡಿವಾಳ ವೃತ್ತದ ಮಾರ್ಗವಾಗಿ ಶಿವನಗರ ವಾಕಿಂಗ್ ಪಾಥ್ ಬಳಿ ಮುಕ್ತಾಯಗೊಂಡಿತು.


ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಚಂದ್ರಕಾಂತ ಪೂಜಾರಿ, ಎಸ್.ಬಿ.ಐ. ಪ್ರಾದೇಶಿಕ ವ್ಯವಸ್ಥಾಪಕ ನಾಗರಾಜ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಎಸ್‍ಬಿಐ ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

prajaprabhat

Recent Posts

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

54 minutes ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

3 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

3 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

3 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

3 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

3 hours ago