ಪೌರಾಡಳಿತ ಸಂಸ್ಥೆಗಳಲ್ಲಿ ಸುಧಾರಣೆ: ಸಚಿವರಿಗೆ.ಕೆಪಿಸಿಸಿ ಸದಸ್ಯ ಮೋಹನದಾಸ್ ಹೆಗ್ಗಡೆ ಪತ್ರ

ಬೆಂಗಳೂರು.05.ಪ.25:- ರಾಜ್ಯ ಸರ್ಕಾರ ಪೌರಾಡಳಿತ ಸಂಸ್ಥೆಗಳಲ್ಲಿ ಸುಧಾರಣೆ ತರಲು ಹಾಗೂ ಪುರಸಭೆ ಅಭಿವೃದ್ಧಿ ಯೋಜನೆಯ ಮಿಷನ್ 2025-26ರ ವೇಳೆಗೆ ರಾಜ್ಯಾದ್ಯಂತ ಪುರಸಭೆಯ ಆಡಳಿತ ಮತ್ತು ಮೂಲಸೌಕರ್ಯಗಳ ಬಗ್ಗೆ ಕೈಗೊಳ್ಳಬೇಕಾದ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿವರಿಸಿ ಕೆಪಿಸಿಸಿ ಸದಸ್ಯ ಮೋಹನದಾಸ್ ಹೆಗ್ಗಡೆ, ಪೌರಾಡಳಿತ ಸಚಿವ ರಹೀಂ ಖಾನ್‍ಗೆ ಪತ್ರ ಬರೆದಿದ್ದಾರೆ.

ಬಡತನ ನಿರ್ಮೂಲನೆ, ಕಲಿಕೆ ಮತ್ತು ಗಳಿಕೆಗೆ ಪ್ರೋತ್ಸಾಹ, ಮಕ್ಕಳು ಹಾಗೂ ಕುಟುಂಬ ಆರೋಗ್ಯಕ್ಕೆ ನೆರವು, ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಸಶಕ್ತೀಕರಣಕ್ಕೆ ಒತ್ತು, ಕೃಷಿ ವಲಯವನ್ನು ಬಲವರ್ಧನೆಗೊಳಿಸುವುದು, ಪರಿಸರ ಸಂರಕ್ಷಣೆ, ಸರಕಾರದ ಆಡಳಿತ ಮಾದರಿಯನ್ನು ಡಿಜಿಟಲ್ ವೇದಿಕೆ ಮೂಲಕ ಉತ್ತರದಾಯಿ ಮಾಡುವುದರ ಜೊತೆಗೆ, ನಾಗರಿಕರ ಪಾಲ್ಗೊಳ್ಳುವಿಕೆಗೆ ಪ್ರೋತ್ಸಾಹ ನೀಡಬೇಕು ಎಂದು ಮೋಹನ್ ದಾಸ್ ಹೆಗ್ಗಡೆ ವಿವರಿಸಿದ್ದಾರೆ.

ಖಾಸಗಿ ಸಹಭಾಗಿತ್ವ ಹಾಗೂ ವ್ಯವಸ್ಥೆಯನ್ನು ವಿಕೇಂದ್ರೀಕರಣಗೊಳಿಸುವುದರಿಂದ, ಸ್ಥಳೀಯ ಆಡಳಿತವನ್ನು ಹೆಚ್ಚು ಬಲವರ್ಧನೆಗೊಳಿಸುವುದರ ಜೊತೆಗೆ ನಗರ ಪ್ರದೇಶಗಳಲ್ಲಿನ ಸೇವೆಗಳ ಗುಣಮಟ್ಟವನ್ನು ಸುಧಾರಿಸಬಹುದಾಗಿದೆ.

ರಾಜ್ಯ ಸರಕಾರಕ್ಕೆ ತಾವು ನೀಡಿರುವ ಸಲಹೆಗಳ ಅನುಷ್ಠಾನದಿಂದ ಭವಿಷ್ಯದ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಪ್ರಯತ್ನಗಳು ನಗರ ಅಭಿವೃದ್ಧಿಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಬಹುದಾಗಿದೆ. ನಾಗರಿಕರ ಜೀವನ ಮಟ್ಟವು ಸುಧಾರಣೆಯಾಗಲಿದೆ. ಅಲ್ಲದೇ, ರಾಜ್ಯದ ನಗರಗಳು ಆವಿಷ್ಕಾರ ಹಾಗೂ ಸ್ಥಿರತೆಯಲ್ಲಿ ಇತರರಿಗೆ ಮಾದರಿಯಾಗಲಿವೆ ಎಂದು ಮೋಹನದಾಸ್ ಹೆಗ್ಗಡೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಪೌರಾಡಳಿತ ಸಂಸ್ಥೆಗಳಲ್ಲಿ ಸುಧಾರಣೆ ತರಲು ಹಾಗೂ ಪುರಸಭೆ ಅಭಿವೃದ್ಧಿ ಯೋಜನೆಯ ಬಡದವರಿಗೆ ಪಾಲಗುದಿಲ ಬಹಳಷ್ಟು ಬಡವರಿಗೆ ಮನೆ ಇಲ್ಲಾ ಅವರು ಗುಡಿಸಿಲಿನಲ್ಲಿ ಅವರು ಜೀವನ ನಡೆಸುತ್ತಿದ್ದಾರೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

2 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

3 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

5 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

5 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

6 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

6 hours ago