ಬೆಂಗಳೂರು.05.ಪ.25:- ರಾಜ್ಯ ಸರ್ಕಾರ ಪೌರಾಡಳಿತ ಸಂಸ್ಥೆಗಳಲ್ಲಿ ಸುಧಾರಣೆ ತರಲು ಹಾಗೂ ಪುರಸಭೆ ಅಭಿವೃದ್ಧಿ ಯೋಜನೆಯ ಮಿಷನ್ 2025-26ರ ವೇಳೆಗೆ ರಾಜ್ಯಾದ್ಯಂತ ಪುರಸಭೆಯ ಆಡಳಿತ ಮತ್ತು ಮೂಲಸೌಕರ್ಯಗಳ ಬಗ್ಗೆ ಕೈಗೊಳ್ಳಬೇಕಾದ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿವರಿಸಿ ಕೆಪಿಸಿಸಿ ಸದಸ್ಯ ಮೋಹನದಾಸ್ ಹೆಗ್ಗಡೆ, ಪೌರಾಡಳಿತ ಸಚಿವ ರಹೀಂ ಖಾನ್ಗೆ ಪತ್ರ ಬರೆದಿದ್ದಾರೆ.
ಬಡತನ ನಿರ್ಮೂಲನೆ, ಕಲಿಕೆ ಮತ್ತು ಗಳಿಕೆಗೆ ಪ್ರೋತ್ಸಾಹ, ಮಕ್ಕಳು ಹಾಗೂ ಕುಟುಂಬ ಆರೋಗ್ಯಕ್ಕೆ ನೆರವು, ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಸಶಕ್ತೀಕರಣಕ್ಕೆ ಒತ್ತು, ಕೃಷಿ ವಲಯವನ್ನು ಬಲವರ್ಧನೆಗೊಳಿಸುವುದು, ಪರಿಸರ ಸಂರಕ್ಷಣೆ, ಸರಕಾರದ ಆಡಳಿತ ಮಾದರಿಯನ್ನು ಡಿಜಿಟಲ್ ವೇದಿಕೆ ಮೂಲಕ ಉತ್ತರದಾಯಿ ಮಾಡುವುದರ ಜೊತೆಗೆ, ನಾಗರಿಕರ ಪಾಲ್ಗೊಳ್ಳುವಿಕೆಗೆ ಪ್ರೋತ್ಸಾಹ ನೀಡಬೇಕು ಎಂದು ಮೋಹನ್ ದಾಸ್ ಹೆಗ್ಗಡೆ ವಿವರಿಸಿದ್ದಾರೆ.
ಖಾಸಗಿ ಸಹಭಾಗಿತ್ವ ಹಾಗೂ ವ್ಯವಸ್ಥೆಯನ್ನು ವಿಕೇಂದ್ರೀಕರಣಗೊಳಿಸುವುದರಿಂದ, ಸ್ಥಳೀಯ ಆಡಳಿತವನ್ನು ಹೆಚ್ಚು ಬಲವರ್ಧನೆಗೊಳಿಸುವುದರ ಜೊತೆಗೆ ನಗರ ಪ್ರದೇಶಗಳಲ್ಲಿನ ಸೇವೆಗಳ ಗುಣಮಟ್ಟವನ್ನು ಸುಧಾರಿಸಬಹುದಾಗಿದೆ.
ರಾಜ್ಯ ಸರಕಾರಕ್ಕೆ ತಾವು ನೀಡಿರುವ ಸಲಹೆಗಳ ಅನುಷ್ಠಾನದಿಂದ ಭವಿಷ್ಯದ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಈ ಪ್ರಯತ್ನಗಳು ನಗರ ಅಭಿವೃದ್ಧಿಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಬಹುದಾಗಿದೆ. ನಾಗರಿಕರ ಜೀವನ ಮಟ್ಟವು ಸುಧಾರಣೆಯಾಗಲಿದೆ. ಅಲ್ಲದೇ, ರಾಜ್ಯದ ನಗರಗಳು ಆವಿಷ್ಕಾರ ಹಾಗೂ ಸ್ಥಿರತೆಯಲ್ಲಿ ಇತರರಿಗೆ ಮಾದರಿಯಾಗಲಿವೆ ಎಂದು ಮೋಹನದಾಸ್ ಹೆಗ್ಗಡೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಪೌರಾಡಳಿತ ಸಂಸ್ಥೆಗಳಲ್ಲಿ ಸುಧಾರಣೆ ತರಲು ಹಾಗೂ ಪುರಸಭೆ ಅಭಿವೃದ್ಧಿ ಯೋಜನೆಯ ಬಡದವರಿಗೆ ಪಾಲಗುದಿಲ ಬಹಳಷ್ಟು ಬಡವರಿಗೆ ಮನೆ ಇಲ್ಲಾ ಅವರು ಗುಡಿಸಿಲಿನಲ್ಲಿ ಅವರು ಜೀವನ ನಡೆಸುತ್ತಿದ್ದಾರೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…