08/06/2025 8:30 PM

Translate Language

Home » ಲೈವ್ ನ್ಯೂಸ್ » ಪ್ರಜಾಪ್ರಭುತ್ವದ ಆಧಾರ ಸ್ತಂಭವೇ ಸಂವಿಧಾನ-ಪ್ರೊ.ಬಿ.ಎಸ್.ಬಿರಾದಾರ

ಪ್ರಜಾಪ್ರಭುತ್ವದ ಆಧಾರ ಸ್ತಂಭವೇ ಸಂವಿಧಾನ-ಪ್ರೊ.ಬಿ.ಎಸ್.ಬಿರಾದಾರ

Facebook
X
WhatsApp
Telegram


ಬೀದರ.26.ಜನವರಿ.25:- ಭವ್ಯ ಭಾರತ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಸಂವಿಧಾನವೇ ಜೀವಾಳ ಹಾಗೂ ಆಧಾರ ಸ್ತಂಭವಾಗಿದೆ. ಹೀಗಾಗಿ ಭಾರತದಂತಹ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಜಗತ್ತಿನಲ್ಲಿ ಸದೃಢವಾಗಿ ಆಡಳಿತ ನಡೆಸುತ್ತಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರರವರು ಹೇಳಿದರು.


ಅವರು ಇಂದು ಬೀದರ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ 76ನೆಯ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತಾನಾಡುತ್ತಾ ಸರ್ವರೂ ಸಂವಿಧಾನದ ಆಶಯಗಳನ್ನು ಗೌರವಿಸಬೇಕಾದ ಅಗತ್ಯವಿದೆ. ಯುವಕರು ತಮ್ಮ ಹಕ್ಕುಗಳೊಂದಿಗೆ ತಮ್ಮ ಕರ್ತವ್ಯವನ್ನೂ ಸಹ ಮರೆಯಬಾರದು.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಭವಿಷ್ಯ ನಿರ್ಮಿಸಿಕೊಳ್ಳಬೇಕೆಂದರು. ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ವಿಶ್ವವಿದ್ಯಾಲಯದಲ್ಲಿಯೂ ಸಹ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ತಮ್ಮ ಹಕ್ಕುಗಳಂತೆ ಕರ್ತವ್ಯಗಳನ್ನೂ ಸಹ ಪಾಲಿಸಬೇಕಾಗಿದೆ ಎಂದರು.


ಬೀದರ ವಿಶ್ವವಿದ್ಯಾಲಯದ ಕುಲಸಚಿವರು ಆಡಳಿತ ಸುರೇಖಾ ಕೆ.ಎ.ಎಸ್. ಅವರು ಮಾತನಾಡಿ, ಸದೃಢ ಭಾರತದ ನಿರ್ಮಾಣದಲ್ಲಿ ದೇಶದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಿ ಆದರ್ಶ ಭಾರತವನ್ನು ನಿರ್ಮಿಸೋಣವೆಂದರು.


ಇದೇ ಸಂದರ್ಭದಲ್ಲಿ 76ನೆಯ ಗಣರಾಜ್ಯೋತ್ಸವ ಸಮಾರಂಭದ ಪ್ರಯುಕ್ತ ಬೀದರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪ್ರಬಂಧ, ಆಶುಭಾಷಣ, ರಸಪ್ರಶ್ನೆ ಹಾಗೂ ರಂಗೋಲಿ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ಹಾಗೂ ಪ್ರಶಸ್ತಿಪತ್ರಗಳನ್ನು ವಿತರಿಸಿದರು.


ಈ ಕಾರ್ಯಕ್ರಮದಲ್ಲಿ ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ನಾಗಭೂಷಣ ಕಮಠಾಣೆ, ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಪರಮೇಶ್ವರ ನಾಯ್ಕ.ಟಿ, ಬೀದರ ವಿಶ್ವವಿದ್ಯಾಲಯದ ವಿಶೇಷಾಧಿಕಾರಿಗಳಾದ ಡಾ.ರವೀಂದ್ರನಾಥ ವಿ.ಗಬಾಡಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಡಾ.ಶಾಂತಕುಮಾರ ಚಿದ್ರಿಯವರು ವಚನಗಾಯನ ಮಾಡಿದರು. ಡಾ.ಶ್ರೀಕೃಷ್ಣ ಚಕ್ರವರ್ತಿಯವರು ಸ್ಪರ್ಧಾ ವಿಜೇತರ ಪಟ್ಟಿ ವಾಚಿಸಿದರು, ಡಾ.ಮುಸ್ತಾಕೀಮ್‍ರವರು ದೇಶಭಕ್ತಿ ಗೀತೆಗಳನ್ನು ಹಾಡಿದರು. ಡಾ.ಅಂಬರೀಶ ವೀರನಾಯಕರವರು ವಂದಿಸಿದರು, ಡಾ.ರಾಮಚಂದ್ರ ಗಣಾಪೂರರವರು ಕಾರ್ಯಕ್ರಮವನ್ನು ನಿರೂಪಿಸಿದರು

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!