23/08/2025 1:32 AM

Translate Language

Home » ಲೈವ್ ನ್ಯೂಸ್ » ಪ್ರಧಾನಮಂತ್ರಿ ಆವಾಸ್ ಯೋಜನೆಯ ಮನೆಗಾಗಿ ಫಲಾನುಭವಿಗಳ ಆಯ್ಕೆ ಸಂಬಂಧ ಆಗಸ್ಟ್ 20ರಂದು ಸಭೆ

ಪ್ರಧಾನಮಂತ್ರಿ ಆವಾಸ್ ಯೋಜನೆಯ ಮನೆಗಾಗಿ  ಫಲಾನುಭವಿಗಳ ಆಯ್ಕೆ ಸಂಬಂಧ ಆಗಸ್ಟ್ 20ರಂದು ಸಭೆ

Facebook
X
WhatsApp
Telegram

ರಾಯಚೂರು.18.ಆಗಸ್ಟ್.25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯಿಂದ ಜಾರಿಯಲ್ಲಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯ ಉಪ ಘಟಕ ಎ.ಹೆಚ್.ಪಿಆರ್ಡಿ 2,419 ಮನೆಗಳಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ ಪಂಗಡ ವರ್ಗದ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಲುವಾಗಿ ಆಗಸ್ಟ್ 20ರ ಬೆಳಿಗ್ಗೆ 11.30ಕ್ಕೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ಹಮ್ಮಿಕೊಳ್ಳಲಾಗಿದ್ದು, ಸಭೆಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ
ಪಂಗಡಗಳ ಅಭಿವೃದ್ಧಿ ಪರ ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಭಾಗವಹಿಸಿ ಯಶಸ್ವಿಗೊಳಿಸಿಬೇಕೆಂದು ಕೋರಲಾಗಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆಯ ಉಪಘಟಕ ಎ.ಹೆಚ್.ಪಿ ರಡಿ ಒಟ್ಟು 2,419 ಮನೆಗಳ ನಿರ್ಮಾಣ ಜಾರಿಯಲ್ಲಿ ಇರುತ್ತದೆ. ಇದರಲ್ಲಿ ನಗರದ ಬಡ ವಸತಿ ರಹಿತರಿಗೆ ಸೌಲಭ್ಯ ಕಲ್ಪಿಸುವ ಅತಿ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಪ.ಜಾತಿ ವರ್ಗದವರಿಗೆ 951 ಹಾಗೂ ಪ.ಪಂಗಡ ವರ್ಗದವರಿಗೆ 1,053 ಮನೆಗಳು ಒಟ್ಟು 2,400 ಗುರಿ ನಿಗದಿಯಾಗಿದೆ. ಆದರೆ ಈ ವರ್ಗದಿಂದ ಇದುವರೆಗೂ ನೀರಿಕ್ಷತ ಮಟ್ಟದಲ್ಲಿ ಅರ್ಜಿಗಳು ಬಂದಿರುವುದಿಲ್ಲ.

ಈ ಇಂತಹ ಮಹತ್ವಪೂರ್ಣ ಯೋಜನೆಯಡಿ ಬಡ ವಸತಿ ರಹಿತ ಪ.ಜಾತಿ ಪ.ಪಂಗಡದ ವರ್ಗದವರಿಗೆ ವಸತಿ ಸೌಲಭ್ಯ ಕಲ್ಪಿಸುವುದು ಅಗತ್ಯವಾಗಿದೆ. ಈ ವರ್ಗದವರಿಂದ ಅರ್ಜಿ ಪಡೆದು ಯೋಜನೆ ಯಶಸ್ವಿಗೊಳಿಸುವುದು ಅಗತ್ಯವಾಗಿದ್ದು, ಈ ಕುರಿತು ಚರ್ಚಿಸಲು ಪಾಲಿಕೆಯ ಆಯಕ್ತರ ಅಧ್ಯಕ್ಷತೆಯಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ.

ಈ ಸಭೆಗೆ ನಗರದ ಪರಿಶಿಷ್ಟ
ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಪರ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸಭೆಯಲ್ಲಿ ಹಾಜರಾಗುವಂತೆ ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD