ಬೀದರ.13.ಜೂನ್.25:- 2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುಮೋದನೆಯನ್ನು ನೀಡಲಾಗಿದೆ. ಈ ಯೋಜನೆಯಡಿ ಬೆಳೆ ವಿಮಾ ಯೋಜನೆ ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಲ್ಲಿ ಭಾಗವಹಿಸಿ ಲಾಭ ಪಡೆಯಬಹುದಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಯೋಜನೆಯಡಿ ಬೆಳೆ ವಿಮಾ ಯೋಜನೆ ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಲ್ಲಿ ಭಾಗವಹಿಸಿ ಲಾಭ ಪಡೆಯಬಹುದಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ಪಾಲ್ಗೊಳ್ಳಲು ಕೊನೆಯ ದಿನಾಂಕ: 31-07-2025 ಹಾಗೂ ಸೂರ್ಯಕಾಂತಿ (ಮ.ಆ) ಬೆಳೆಗೆ ದಿನಾಂಕ: 16-08-2025 ಆಗಿರುತ್ತದೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಮುಖ್ಯ ಬೆಳೆಗಳಿಗೆ ಗ್ರಾಮ ಪಂಚಾಯತಿ/ನಗರ ಸ್ಥಳೀಯ ಸಂಸ್ಥೆ ಮಟ್ಟದಲ್ಲಿ ತೊಗರಿ (ಮಳೆಯಾಶ್ರಿತ(ಮ.ಆ)) ಹಾಗೂ ಸೋಯಾಅವರೆ (ಮ.ಆ) ಬೆಳೆಗಳು ಮತ್ತು ಇತರೆ ಬೆಳೆಗಳಾದ ಹೆಸರು (ಮ.ಆ), ಸೂರ್ಯಕಾಂತಿ (ಮ.ಆ), ಉದ್ದು (ಮ.ಆ), ಮುಸುಕಿನ ಜೋಳ (ಮ.ಆ), ಶೇಂಗಾ (ಮ.ಆ), ಜೋಳ (ಮ.ಆ), ಎಳ್ಳು (ಮ.ಆ), ಸಜ್ಜೆ (ಮ.ಆ), ಸೋಯಾಅವರೆ (ನೀರಾವರಿ(ನೀ)), ಭತ್ತ (ನೀ & ಮ.ಆ), ಹತ್ತಿ (ಮ.ಆ) ಬೆಳೆಗಳನ್ನು ವಿವಿಧ ತಾಲ್ಲೂಕಿಗೆ ನಿಗದಿಪಡಿಸಿ, ಹೋಬಳಿ ಮಟ್ಟಕ್ಕೆ ಅನುಷ್ಠಾನಗೊಳಿಸಲು “ಯೂನಿವರ್ಸಲ್ ಸೋಂಪೊ ಜನರಲ್ ಇನ್ಶ್ಯೂರೆನ್ಸ್ ಕಂಪನಿ ಲಿಮಿಟೆಡ್” ವಿಮಾ ಸಂಸ್ಥೆಯನ್ನು ನಿಗದಿಪಡಿಸಲಾಗಿದೆ.
ಬೆಳೆಸಾಲ ಪಡೆದ ರೈತರಿಗಾಗಿ ಆಪ್ಟಿಂಗ-ಔಟ ಮತ್ತು ಆಪ್ಟಿಂಗ-ಇನ್ ಎಂಬ ಅವಕಾಶವನ್ನು ರೈತರಿಗೆ ನೀಡಲಾಗಿದೆ. ಇದರಲ್ಲಿ ಬೆಳೆಸಾಲ ಪಡೆದ ರೈತರು ಬೆಳೆವಿಮೆ ಮಾಡಿಸುವುದು ಕಡ್ಡಾಯವಾಗಿರುವುದಿಲ್ಲ.
ಬೆಳೆವಿಮೆ ಮಾಡಲು ಇಚ್ಛಿಸದ ಸಾಲ ಪಡೆದಂತಹ ರೈತರು ಬೆಳೆವಿಮೆ ಮಾಡಿಸಲು ನಿಗಧಿಪಡಿಸಿರುವ ಅಂತಿಮ ದಿನಾಂಕಕ್ಕಿoತ 7 ದಿನದ ಮುಂಚಿತವಾಗಿ ಸಂಬAಧಪಟ್ಟ ಬ್ಯಾಂಕಿಗೆ ಆಪ್ಟಿಂಗ-ಔಟ ಎಂಬ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಸದರಿ ಅರ್ಜಿ ನೀಡಿದ ರೈತರನ್ನು ವಿಮೆ ಯೋಜನೆಯಿಂದ ಬ್ಯಾಂಕ್ನವರು ಹೊರಗಿಡಬೇಕಾಗುತ್ತದೆ. ಸಾಲ ಪಡೆದಿರುವ ರೈತರ ಪೈಕಿ ಆಪ್ಟಿಂಗ-ಔಟ ನಮೂನೆ ನೀಡದ ಉಳಿದ ಎಲ್ಲಾ ರೈತರನ್ನು ವಿಮಾ ಯೋಜನೆಯಡಿ ತರುವುದು ಕಡ್ಡಾಯವಾಗಿರುತ್ತದೆ.
ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಆಧಾರ ಸಂಖ್ಯೆ ಜೊಡಿಸಿದ ಬ್ಯಾಂಕ್ ಖಾತೆ ವಿವರ ಮತ್ತು ಆಧಾರ ಕಾರ್ಡ್ನ ಪ್ರತಿಯನ್ನು ಸಂಬAಧಿಸಿದ ಬ್ಯಾಂಕ ಅಥವಾ ಸಿ.ಎಸ್.ಸಿ ಕೇಂದ್ರಗಳಿಗೆ ಒದಗಿಸಿ ನೋಂದಣಿ ಮಾಡಿಸಬಹುದು. ರೈತರು ನೋಂದಣಿಗಾಗಿ ಕಡ್ಡಾಯವಾಗಿ ಈಖUIಖಿS Iಆ (ಈIಆ) ಹೊಂದಿರಬೇಕು.
ಹೆಚ್ಚಿನ ವಿವರಗಳಿಗೆ ಸ್ಥಳೀಯ ವಾಣಿಜ್ಯ/ ಗ್ರಾಮೀಣ/ ಸಹಕಾರಿ/ ಬ್ಯಾಂಕುಗಳನ್ನು/s ಸಾರ್ವಜನಿಕ ಸೇವಾ ಕೇಂದ್ರ ಅಥವಾ ಸಂಬoಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಂಬAಧಪಟ್ಟ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಯಾದಗಿರಿ.14.ಜೂನ್.25:- ನಾವು ಬಸವಣ್ಣನವರ ಆಶಯದ ಪ್ರಕಾರ ನುಡಿದಂತೆ ನಡೆಯುತ್ತೇವೆ. ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಐದು ಗ್ಯಾರಂಟಿಗಳು . ಬಿಜೆಪಿಯ…
ಯಾದಗಿರಿ.14.ಜೂನ್.25:- ಕೊಕಲ್ಯಾಣ ಕರ್ಣಾಟಕ ಆಭಿವೃದ್ಧಿ ಹೇಗೆ ಸಾಧ್ಯ ಅಧಿಕಾರಿಗಳು ಹಣವನ್ನು ಖರ್ಚು ಮಾಡುವುದಿಲ್ಲ ಎನ್ನುವ ಸಿದ್ದರಾಮಯ್ಯನವರ ಮಾತನ್ನು ಮುರಿದು, ಕಪ್ಪು…
ಯಾದಗಿರಿ.14.ಜೂನ್.25:- ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ. ಕಲ್ಯಾಣ ಕರ್ನಾಟಕದ…
ಬೆಂಗಳೂರು.14.ಜೂನ್.25:- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.…
ಬೆಂಗಳೂರು.14.ಜೂನ್.25:- ಗೃಹ ಆರೋಗ್ಯ ಯೋಜನೆ' ರಾಜ್ಯಾದ್ಯಂತ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.2025-26ನೇ ಸಾಲಿನ ಆಯವ್ಯಯ ಖಂಡಿಕೆ 143 ರಲ್ಲಿ ಘೋಷಿಸಿರುವಂತೆ…
* ರಾಜ್ಯದಲ್ಲಿ ಸರಿಸುಮಾರು 3000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು, ಬೆಂಗಳೂರು.14.ಜೂನ್.25:-ವಿಶ್ವ ವಿದ್ಯಾಲಯಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ…