ಪ್ರಧಾನಿ, ಸಿಎಂ ಜತೆ ನಮ್ಮ ಪೋಟೋ ಹಾಕಿ: ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರ ಆಗ್ರಹ

ಕೂಪ್ಪಳ.23.ಜುಲೈ.25:- ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು, ಅನುಷ್ಠಾನ ಸಮಿತಿ ಸದಸ್ಯರು ‘ನ್ಯಾಯಬೆಲೆ ಅಂಗಡಿಗಳ ವ್ಯಾಪ್ತಿಯಲ್ಲಿ ಪ್ರಧಾನಿ ಹಾಗೂ ಮುಖ್ಯಮಂತ್ರಿ ಭಾವಚಿತ್ರದ ಜತೆ ನಮ್ಮ ಭಾವಚಿತ್ರವನ್ನೂ ಹಾಕಬೇಕು’ ಎಂದು ಆಗ್ರಹಿಸಿದ್ದಾರೆ. ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು, ಅನುಷ್ಠಾನ ಸಮಿತಿ ಸದಸ್ಯರು ‘ನ್ಯಾಯಬೆಲೆ ಅಂಗಡಿಗಳ ವ್ಯಾಪ್ತಿಯಲ್ಲಿ ಪ್ರಧಾನಿ ಹಾಗೂ ಮುಖ್ಯಮಂತ್ರಿ ಭಾವಚಿತ್ರದ ಜತೆ ನಮ್ಮ ಭಾವಚಿತ್ರವನ್ನೂ ಹಾಕಬೇಕು’ ಎಂದು ಆಗ್ರಹಿಸಿದ್ದಾರೆ.

‘ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ಪ್ರಧಾನಿ ಹಾಗೂ ಮುಖ್ಯಮಂತ್ರಿಯ ಭಾವಚಿತ್ರ ಅಳವಡಿಸುವದರ ಜತೆ ಗ್ಯಾರಂಟಿ ಸಮಿತಿ ಸದಸ್ಯರ ಬ್ಯಾನರ್‌ ಕೂಡ ಅಳವಡಿಸಬೇಕು’ ಎಂದು ಸದಸ್ಯರಾದ ದೇವರಾಜ ನಡುವಿನಮನಿ, ಜ್ಯೋತಿ ಗೊಂಡಬಾಳ ಒತ್ತಾಯಿಸಿದರು. ಆಹಾರ ನಿರೀಕ್ಷಕರು ಪಡಿತರ ಹಂಚುವಾಗ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಆಹಾರ ಧಾನ್ಯ ಪರಿವೀಕ್ಷಿಸಿ ಜಿಪಿಎಸ್‌ ಫೋಟೊ ವ್ಯಾಟ್ಸ್‌ ಆಯಪ್‌ ಗ್ರೂಪ್‌ಗೆ ಹಾಕಬೇಕು.

ಆಹಾರ ಧಾನ್ಯ ನೀಡುವಾಗ ಸ್ಥಳೀಯರಿಗೆ ಆದ್ಯತೆ ಕೊಡಬೇಕು ಎನ್ನುವುದನ್ನು ಪಾಲಿಸಲು ಸೂಚಿಸಬೇಕು ಎಂದರು.

ಸದಸ್ಯ ಮಾನ್ವಿ ಪಾಷಾ ‘ಫೆಬ್ರುವರಿ ಹಾಗೂ ಮಾರ್ಚ್‌ನಲ್ಲಿ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ’ ಎಂದರು. ಆಗ ಅಧಿಕಾರಿಗಳು ಮೇ ತಿಂಗಳ ಹಣ ಜಮೆಯಾಗಿದೆ ಎಂದು ಹೇಳಿದಾಗ, ಇದರ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು ಎಂದು ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಬಾಲಚಂದ್ರನ್‌ ಎಸ್‌. ಸೂಚಿಸಿದರು.

ಕುಷ್ಟಗಿ-ಕೊಪ್ಪಳ ತಡೆ ರಹಿತ ಬಸ್‌ ವಾಹನಗಳಿದ್ದು ಇರಕಲ್ಲಗಡ ಗ್ರಾಮದಲ್ಲಿ ನಿಲುಗಡೆ ಮಾಡಲು ಕ್ರಮ ವಹಿಸಬೇಕು ಎನ್ನುವ ಬೇಡಿಕೆ ಬಗ್ಗೆ ಹಿಂದಿನ ಸಭೆಯಲ್ಲಿ ಚರ್ಚೆಯಾಗಿತ್ತು. ಈ ಕುರಿತು ಮನವಿ ಸಲ್ಲಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿ ಹೇಳಿದರು.

ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ, ತಹಶೀಲ್ದಾರ್ ವಿಠ್ಠಲ್‌ ಚೌಗುಲಾ, ಸಮಿತಿ ಸದಸ್ಯರಾದ ರಾಮಣ್ಣ ಚೌಡ್ಕಿ, ಸವಿತಾ ಗೊರಂಟ್ಲಿ, ಅನ್ನದಾನಯ್ಯಸ್ವಾಮಿ, ಮೆಹಬೂಬಪಾಷಾ ಮಾನ್ವಿ, ಅನ್ವರ್ ಹುಸೇನ್ ಗಡಾದ, ಪರಶುರಾಮ ಕೊರವರ, ಆನಂದ ಕಿನ್ನಾಳ, ಲಕ್ಷ್ಮಣ ಡೊಳ್ಳಿನ ಪಾಲ್ಗೊಂಡಿದ್ದರು.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

2 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

8 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

8 hours ago

ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ಸ   ಸನ್ಮಾನಿಸಿದರು

ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…

8 hours ago

ಕೇಂದ್ರ ಸಚಿವ ಗಡ್ಕರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…

9 hours ago

ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…

14 hours ago