ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.24.ಏಪ್ರಿಲ್.25:- 2025-26ನೇ ಸಾಲಿಗೆ ಜಿಲ್ಲೆಯಲ್ಲಿನ ಪ್ರತಿಷ್ಠಿತ ಶಾಲೆಯ (ಕನ್ನಡ ಮಾಧ್ಯಮ) ವಸತಿ ಶಾಲೆಯಲ್ಲಿ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ 

https://swdservices.karnataka.gov.in/EducationPrestigious/authentication/login?redirectUrl=%2Fprofile

ಮೂಲಕ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹತೆಗಳು: ವಿದ್ಯಾರ್ಥಿಗಳು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.

ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯ ಮಿತಿ ರೂ. 2.50 ಲಕ್ಷಗಳೊಳಗಿರಬೇಕು. ಬಡತನ ರೇಖೆಗಿಂತ ಕೆಳಗಿನ ಮಟ್ಟದ ಹಾಗೂ ಈ ಯೋಜನೆಯ ಸೌಲಭ್ಯವನ್ನು ಪಡೆಯಲು ವಿಫಲರಾಗಿರುವ ಅತಿ ಹಿಂದುಳಿದ ವರ್ಗದವರಿಗೆ ಈ ಸೌಲಭ್ಯವನ್ನು ನೀಡಲು ಉದ್ದೇಶಿಸಲಾಗಿರುತ್ತದೆ. ಪೌರ ಕಾರ್ಮಿಕರ ಮಕ್ಕಳು. ಸಫಾಯಿ ಕರ್ಮಚಾರಿಗಳ ಮಕ್ಕಳು. ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರ ಮಕ್ಕಳು. ದೇವದಾಸಿ ರವರ ಮಕ್ಕಳು, ಅಂಗವಿಕಲತೆಯನ್ನು ಹೊಂದಿರುವವರು. ಕೋವೀಡ್ ಮುಂತಾದ ಪ್ರಕೃತಿ ವಿಕೋಪದಿಂದ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳು. ಏಕ ಪೋಷಕ ಮಕ್ಕಳು. ಯೋಜನಾ ನಿರಾಶ್ರಿತರ ಮಕ್ಕಳು. ಕೊಳಗೇರಿಗಳಲ್ಲಿ ವಾಸಿಸುತ್ತಿರುವವರ ಮಕ್ಕಳು. ಸಾಲ ಬಾಧೆಯಿಂದ ಆತ್ಮಹತ್ಯೆಗೆ ಗುರಿಯಾದವರ ಮಕ್ಕಳು. ದೌರ್ಜನ್ಯದಲ್ಲಿ ನೊಂದವರ ಮಕ್ಕಳು. ಮಾಜಿ ಸೈನಿಕರ ಮಕ್ಕಳು. ಕೃಷಿ ಕಾರ್ಮಿಕರ ಮಕ್ಕಳು. ಜೀತ ವಿಮುಕ್ತ ಮಕ್ಕಳು.


ಪ್ರಮುಖವಾಗಿ ಈ ಮೇಲಿನ ಹಿಂದುಳಿದ ವರ್ಗದವರಿಗೆ ಹಾಗೂ 5ನೇ ತರಗತಿಯಲ್ಲಿ ತೇರ್ಗಡೆಯಾಗಿ ಶೇಕಡಾ 60% ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಮುಖ್ಯತೆ ನೀಡಲಾಗುವುದು.


ಸದರಿ ವಿದ್ಯಾರ್ಥಿಗಳು ಪ್ರತಿಷ್ಠಿತ ಶಾಲೆಗಳ ಆಯ್ಕೆ ಕೋರಿ ಮಾದ್ಯಮಗಳನ್ನು ಕಡ್ಡಾಯವಾಗಿ ಸ್ಪಷ್ಟವಾಗಿ ಅರ್ಜಿಗಳಲ್ಲಿ ನಮೂದಿಸತಕ್ಕದ್ದು. ಒಂದು ಕುಟುಂಬದಲ್ಲಿ ಇಬ್ಬರಿಗೆ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿ, ಬಾಲಕ ಇಲ್ಲದಿದ್ದಲ್ಲಿ ಇಬ್ಬರು ಬಾಲಕಿಯರಿಗೂ ಅಥವಾ ಬಾಲಕಿ ಇಲ್ಲದಿದ್ದಲ್ಲಿ ಇಬ್ಬರು ಬಾಲಕರಿಗೆ ಪ್ರವೇಶಾವಕಾಶ ಕಲ್ಪಿಸತಕ್ಕದ್ದು. ಪ್ರವೇಶ ಕೋರಿ ಬರುವ ಅರ್ಜಿಗಳಲ್ಲಿ ಶೇಕಡಾ 50% ರಷ್ಟು ಬಾಲಕರಿಗೆ ಮತ್ತು ಶೇಕಡಾ 50% ಬಾಲಕಿಯರಿಗೆ ಮೀಸಲಾತಿಯನ್ನು ಕಲ್ಪಿಸುವುದು.ಆಯ್ಕೆ ಮಾಡಲಾದ ವಿದ್ಯಾರ್ಥಿಗಳನ್ನು ಯಾವ ವಿದ್ಯಾ ಸಂಸ್ಥೆಗಳಲ್ಲಿ ದಾಖಲಾತಿ ಕೋರುತ್ತಾರೆ ಅದೇ ಶಾಲೆಯಲ್ಲಿ ಕಲ್ಪಿಸಲಾಗುವುದು. ಪರಿಶಿಷ್ಟ ಜಾತಿಯ 50 ವಿದ್ಯಾರ್ಥಿಗಳ ಗುರಿ ನಿಗದಿಪಡಿಸಲಾಗಿದೆ.


ಕಾರಣ 6ನೇ ತರಗತಿ ಪ್ರವೇಶಕ್ಕಾಗಿ ದಿನಾಂಕ: 19-04-2025 ರಿಂದ ದಿನಾಂಕ: 03-05-2025 ರ ಸಾಯಂಕಾಲ 5:00 ಗಂಟೆಯೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

https://swdservices.karnataka.gov.in/EducationPrestigious/authentication/login?redirectUrl=%2Fprofile

prajaprabhat

Recent Posts

ಇಂದಿನಿಂದ 3 ದಿನ ಭಾರೀ ಮಳೆ! ಈ 7 ಜಿಲ್ಲೆಗಳಿಗೆ ರೆಡ್ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಎಚ್ಚರಿಕೆ ನೀಡಿದ್ದಾರೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಸೇರಿದಂತೆ ಬೆಂಗಳೂರು,…

3 minutes ago

ಬೇಡಿಕೆಯಂತೆ ಸೋಯಾಬೀನ್ ಬಿತ್ತನೆ ಬೀಜ, ಆತಂಕ ಬೇಡ-ಈಶ್ವರ ಖಂಡ್ರೆ

ಬೀದರ.15.ಜೂನ್.25:- ಬೀದರ್ ಜಿಲ್ಲೆಯ ರೈತರ ಬೇಡಿಕೆಗೆ ಅನುಗುಣವಾಗಿ ಸೋಯಾಬೀನ್ ಬಿತ್ತನೆ ಬೀಜ ಪೂರೈಕೆ ಮಾಡಲು ಕ್ರಮ ವಹಿಸಲಾಗಿದ್ದು, ರೈತರು ಆತಂಕ…

18 minutes ago

ಉತ್ತರಾಖಂಡ್: ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಅದರಲ್ಲಿದ್ದ ಏಳು ಮಂದಿ ಸಾವು

ಉತ್ತರಾಖಂಡದ ಕೇದಾರನಾಥ ಪ್ರದೇಶದ ಗೌರಿಕುಂಡ್ ಖಾರ್ಕ್ ಬೆಟ್ಟ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಆರು ಯಾತ್ರಿಕರು ಮತ್ತು ಪೈಲಟ್…

23 minutes ago

ಪ್ರಜಾ ಪ್ರಭಾತ ಕನ್ನಡ ನ್ಯೂಸ್’ಗೆ ಜಿಲ್ಲಾ, ತಾಲ್ಲೂಕು ವರದಿಗಾರರ ಬರ್ಕಾಗಿದರೆ. | Wanted News Reporter’s

ಪ್ರಜಾ ಪ್ರಭಾತ ಡಿಜಿಟಲ್ ಡೆಸ್ಕ್: ಪ್ರಜಾ ಪ್ರಭಾತ ಕನ್ನಡ ಡಿಜಿಟಲ್ ನ್ಯೂಸ್ 24X4 ವೆಬ್ ಸೈಟ್ ಗೆ ಜಿಲ್ಲಾ ಹಾಗೂ…

3 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ : 2025-26ನೇ ಸಾಲಿನ ‘NMMSS’ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26 ನೇ ಶೈಕ್ಷಣಿಕ ಸಾಲಿಗೆ NMMS ವಿದ್ಯಾರ್ಥಿ ವೇತನಕ್ಕಾಗಿ, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP)…

6 hours ago

ಸರಕಾರಿ ಪದವಿ ಕಾಲೇಜುಗು ಈಗ ಖಾಸಗಿ ಕಾಲೇಜುಗಳಂತೆ : ಡಾ.ಎಂ.ಸಿ.ಸುಧಾಕರ್

ಚಿಕ್ಕಮಗಳೂರು.15.ಜೂನ್.25:- ರಾಜ್ಯ ಸರಕಾರ ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿದ್ದು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಖಾಸಗಿ ಕಾಲೇಜುಗಳಂತೆ…

7 hours ago