ಪ್ರಾಥಮಿಕ ಶಾಲೆಗಳಲ್ಲಿ 40,000 ಅತಿಥಿ ಶಿಕ್ಷಕ’ರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.29.ಮೇ.25:- ರಾಜ್ಯ ಸರ್ಕಾರು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ನೀಡಿದ್ದು, 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ 40 ಸಾವಿರ ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೊಳ್ಳಲು ಆದೇಶ ಹೊರಡಿಸಿದೆ.

ಮೇಲ್ಮಂಡ ವಿಷಯಕ್ಕೆ ಸಂಬಂಧಿಸಿದಂತೆ, 2025-26 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ (ಮಾರ್ಚ್-2026) ವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ) ಒಟ್ಟು-40000. ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಉಲ್ಲೇಖ-03ರ ಸರ್ಕಾರದ ಪತ್ರದಲ್ಲಿ ಅನುಮತಿ ನೀಡಲಾಗಿದೆ.

ಉಲ್ಲೇಖ-03 ರಲ್ಲಿ ಒಟ್ಟು-40000. ಹುದ್ದೆಗಳಿಗೆ ಅಥಿತಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಸಹಮತಿಸಿದ್ದು, ಪ್ರಸ್ತುತ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ (ಪಿ.ಎಸ್.ಟಿ ಮತ್ತು ಜಿ.ಪಿ.ಟಿ) ವೃಂದದ ಒಟ್ಟು 38867 ಹುದ್ದೆಗಳಿಗೆ ಎದುರಾಗಿ ಪ್ರಥಮ ಹಂತದಲ್ಲಿ ಸದರಿ 34027 ಖಾಲಿ ಹುದ್ದೆಗಳಿಗೆ ಜಿಲ್ಲಾವಾರು/ತಾಲ್ಲೂಕುವಾರು ಅತಿಥಿ ಶಿಕ್ಷಕರನ್ನು ಉಲ್ಲೇಖ-01 & 03 ರ ಪತ್ರದಲ್ಲಿ ವಿಧಿಸಿರುವ ಷರತ್ತುಗಳಿಗೊಳಪಟ್ಟು ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದೆ.

ಅದರಂತೆ, ಕೆಳಕಂಡ ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಲು ಸೂಚಿಸಿ ತಾಲ್ಲೂಕುವಾರು & ಜಿಲ್ಲಾವಾರು ಹಂಚಿಕೆ ಮಾಡಿದ ಅತಿಥಿ ಶಿಕ್ಷಕರ ವಿವರಗಳನ್ನು ಅನುಬಂಧದಲ್ಲಿ ಅಡಕಗೊಳಿಸಿದೆ.

ಷರತ್ತುಗಳು:-

ಮಂಜೂರಾದ ಖಾಲಿ ಇರುವ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದು.

ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿ ಸಂಬಂಧಪಟ್ಟ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ಮಾಡುವುದು.

ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಪ್ರಮುಖವಾಗಿ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿ ಹುದ್ದೆಗಳಿಗೆ ಹಾಗೂ ಶಿಕ್ಷಕ ರಹಿತ ಶಾಲೆಗಳಿಗೆ/ಹೆಚ್ಚು ವಿದ್ಯಾರ್ಥಿಗಳಿರುವ ಖಾಲಿ ಹುದ್ದೆಗಳಿಗೆ ಮೊದಲ ಆದ್ಯತೆ ನೀಡುವುದು.

ರಾಜ್ಯದಲ್ಲಿ ಶಾಲಾ ಶಿಕ್ಷಣ ಇಲಾಖೆಯಡಿ ವಿಶೇಷವಾಗಿ ಪ್ರಾರಂಭಿಸಿರುವ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು/ಬೆಂಗಳೂರು ಪಬ್ಲಿಕ ಶಾಲೆಗಳು/ ದ್ವಿಭಾಷಾ (Bilingual) (ಆಂಗ್ಲಭಾಷಾ) ಮಾಧ್ಯಮದ ತರಗತಿಗಳಿರುವ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಶೇಕಡ 100 ರಷ್ಟು ಅತಿಥಿ ಶಿಕ್ಷಕರನ್ನು ಆದ್ಯತೆ ಮೇರೆಗೆ ನೇಮಕಾತಿ ಮಾಡುವುದು.

ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡತಕ್ಕದ್ದು.

ಅತಿಥಿ ಶಿಕ್ಷಕರ ಹಾಜರಾತಿ ವಹಿಯನ್ನು ಪ್ರತ್ಯೇಕವಾಗಿ ನಿರ್ವಹಣೆ ಮಾಡುವುದು.

ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ ದರ ಮಾಹೆಯಾನ ರೂ 12000/- ಆಗಿರುತ್ತದೆ.

ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗಳಿಗೆ ವರ್ಗಾವಣೆ/ ನೇಮಕಾತಿ ಮುಖಾಂತರ ಖಾಯಂ ಶಿಕ್ಷಕರು ಸ್ಥಳನಿಯುಕ್ತಿಗೊಂಡಲ್ಲಿ ಸದರಿ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ತದನಂತರ ತಾಲ್ಲೂಕಿನಲ್ಲಿ ಅಗತ್ಯಾನುಸಾರ ವರ್ಗಾವಣೆಯಿಂದ ಅಥವಾ ಇತರೆ ಕಾರಣಗಳಿಂದ ತೆರವಾದ ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು/ಹುದ್ದೆಯನ್ನು ಸ್ಥಳೀಯವಾಗಿ ಹಂಚಿಕೆ ಮಾಡಿ ಕ್ರಮವಹಿಸುವುದು.

ಪ್ರಸ್ತುತ ವರ್ಗಾವಣೆ ತಂತ್ರಾಂಶದಲ್ಲಿದ್ದಂತೆ ಖಾಲಿಹುದ್ದೆಗಳನ್ನಾಧರಿಸಿ ತಾಲ್ಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು ಸದರಿ ಅತಿಥಿ ಶಿಕ್ಷಕರ ಹುದ್ದೆಗಳನ್ನು ತಾಲ್ಲೂಕು ಪಂಚಾಯಿತಿವಾರು ಮರುಹಂಚಿಕೆ ಮಾಡಿ ಅನುದಾನದ ವಿರವ ಈ ಕಛೇರಿಗೆ ಸಲ್ಲಿಸಿದ ನಂತರ ತಾಲ್ಲೂಕಿನಿಂದ ತಾಲ್ಲೂಕಿಗೆ (ಜಿಲ್ಲೆಯ ಒಳಗೆ) ಅತಿಥಿ ಶಿಕ್ಷಕರ ಮರುಹಂಚಿಕೆ ಮಾಡುವಂತಿಲ್ಲ.

ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವಾಗ ತೀವ ನಿಗಾವಹಿಸಿ ಉತ್ತಮ ಗುಣ ಮತ್ತು ನಡತೆ ಹೊಂದಿರುವ ಅಭ್ಯರ್ಥಿಗಳನ್ನು ಮಾತ್ರ ನೇಮಕಾತಿ ಮಾಡಿಕೊಳ್ಳುವುದು.

ಮೇಲ್ಕಂಡ ಎಲ್ಲಾ ಷರತ್ತುಗಳನ್ನು ಪಾರದರ್ಶಕವಾಗಿ ಚಾಚು ತಪ್ಪದೇ ಪಾಲಿಸಲು ಸಂಬಂಧಪಟ್ಟ ಮುಖ್ಯ ಶಿಕ್ಷಕರುಗಳಿಗೆ ಕಡ್ಡಾಯವಾಗಿ ಸೂಕ್ತ ಸೂಚನೆಗಳನ್ನು ಜಿಲ್ಲಾ ಉಪನಿರ್ದೇಶಕರು/ಕ್ಷೇತ್ರ ಶಿಕ್ಷಣಾಧಿಕಾರಿಗಳು ನೀಡುವುದು. ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಯಾವುದೇ ಲೋಪದೋಷಗಳಾದಲ್ಲಿ ಸಂಬಂಧಪಟ್ಟ ತಾಲ್ಲೂಕು/ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿಸಿ ಶಿಸ್ತು ಕ್ರಮಕ್ಕೆ ಒಳಪಡಿಸಲಾಗುವುದು.

ಈ ಕೂಡಲೇ ನೇಮಕ ಮಾಡಿಕೊಳ್ಳಲು ಸಹಾಯವಾಗುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅಗತ್ಯತೆ/ಅವಶ್ಯಕತೆ ಇರುವ ಶಾಲೆಗಳ ಖಾಲಿ ಹುದ್ದೆಗಳಿಗೆ ನಿಯಮಾನುಸಾರ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತಾಲ್ಲೂಕು ಹಂತದಲ್ಲಿ ಶಾಲಾವಾರು ಹುದ್ದೆ ಹಂಚಿಕೆ ಆದೇಶವನ್ನು ಕಡ್ಡಾಯವಾಗಿ ದಿನಾಂಕ 28.05.2025 ರಂದೇ ಹೊರಡಿಸುವುದು.

ನೇಮಕಗೊಂಡ ತಾಲ್ಲೂಕು ಅತಿಥಿ ಶಿಕ್ಷಕರ ವಿವರಗಳನ್ನು ಕೆಳಕಂಡ ನಿಗದಿತ ನಮೂನೆಯಲ್ಲಿ ಜಿಲ್ಲಾವಾರು ಕ್ರೂಢೀಕರಿಸಿ ಈ ಕಛೇರಿಗೆ ಜಿಲ್ಲಾ ಉಪನಿರ್ದೇಶಕರು ವಿಳಂಬಕ್ಕೆ ಅವಕಾಶ ನೀಡದೇ ದಿನಾಂಕ: 28-05-2025 ರೊಳಗೆ ಅಧಿತಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ವಿವರವನ್ನು ತಾಲ್ಲೂಕು ಪಂಚಾಯಿತಿವಾರು ಹುದ್ದೆಗಳ ವಿವರವನ್ನು ಕೆಳಗಿನ ನಮೂನೆಯಲ್ಲಿ ಕ್ರೋಡೀಕರಿಸಿ ದೃಡೀಕೃತ (ಪಿ.ಡಿ.ಎಫ್ ಮಾದರಿಯಲ್ಲಿ) ಸಾವ್ ಪ್ರತಿಯನ್ನು ಈ ಕಛೇರಿ ಇ-ಮೇಲ್ ವಿಳಾಸ. primarydpi@gmail.com ಮುಖಾಂತರ ಸಲ್ಲಿಸುವುದು. ತಪ್ಪಿದಲ್ಲಿ ಸೂಕ್ತ ಶಿಸ್ತ್ರಕ್ರಮ ಜರುಗಿಸಲಾಗುವುದು.

prajaprabhat

Recent Posts

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

10 minutes ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

15 minutes ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

20 minutes ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

26 minutes ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

29 minutes ago

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

6 hours ago