ಬೆಂಗಳೂರು.16.ಮೇ.25:- ದೇಶಾದ್ಯಂತ 2.5 ಲಕ್ಷ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವುದಾಗಿ ಅಜೀಂ ಪ್ರೇಮ್ಜಿ ಫೌಂಡೇಷನ್ ಘೋಷಿಸಿದೆ.
2025-26ನೇ ಶೈಕ್ಷಣಿಕ ಸಾಲಿನಲ್ಲಿ ಈ ಮಹತ್ವದ ಯೋಜನೆಯಡಿ ಕರ್ನಾಟಕ ಸೇರಿದಂತೆ 18 ರಾಜ್ಯಗಳ ವಿದ್ಯಾರ್ಥಿನಿಯರು ಪ್ರಯೋಜನ ಪಡೆಯಲಿದ್ದಾರೆ.
ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಫೌಂಡೇಷನ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನುರಾಗ್ ಬೆಹರ್, 2024-25ನೇ ಸಾಲಿನಲ್ಲಿ ಮಧ್ಯಪ್ರದೇಶ, ಉತ್ತರಪ್ರದೇಶ, ರಾಜಸ್ಥಾನ ಮತ್ತು ಜಾರ್ಖಂಡ್ನ 25 ಸಾವಿರಕ್ಕೂ ಹೆಚ್ಚು ಹೆಣ್ಣುಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗಿತ್ತು ಎಂದು ಸ್ಮರಿಸಿದರು.
ಈ ಬಾರಿ ಯೋಜನೆಯನ್ನು ವಿಸ್ತರಿಸಲಾಗಿದ್ದು, 10 ಮತ್ತು 12ನೇ ತರಗತಿ ಉತ್ತೀರ್ಣರಾಗಿ ಮುಂದಿನ ಹಂತದ ಉನ್ನತ ಶಿಕ್ಷಣವನ್ನು ಮುಂದುವರಿಸುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ಲಭ್ಯವಾಗಲಿದೆ ಎಂದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳು, ಕಾಲೇಜುಗಳು ಹಾಗೂ ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳು ನಡೆಸುವ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿನಿಯರು ಈ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಬಹುದು.
ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ಡಿಪ್ಲೊಮಾ ಅಥವಾ ಪದವಿ ಕೋರ್ಸ್ಗಳನ್ನು ಓದುತ್ತಿರುವ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ದೊರೆಯಲಿದೆ. ಉನ್ನತ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿರುವ ಕೆಲವು ಆಯ್ದ ಖಾಸಗಿ ಸಂಸ್ಥೆಗಳ ವಿದ್ಯಾರ್ಥಿನಿಯರನ್ನೂ ಪರಿಗಣಿಸಲಾಗುವುದು ಎಂದು ತಿಳಿಸಿದರು.
ಈ ವಿದ್ಯಾರ್ಥಿವೇತನ ಯೋಜನೆಗಾಗಿ ಮೂರು ವರ್ಷಗಳ ಅವಧಿಗೆ ಒಟ್ಟು ₹2,250 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಇದು ವಾರ್ಷಿಕವಾಗಿ ಸುಮಾರು ₹750 ಕೋಟಿ ರೂಪಾಯಿಗಳಾಗುತ್ತದೆ. ಪ್ರತಿ ವಿದ್ಯಾರ್ಥಿನಿಗೂ ಅವರ ಕೋರ್ಸ್ ಪೂರ್ಣಗೊಳ್ಳುವವರೆಗೆ ಪ್ರತಿ ವರ್ಷ ₹30,000 ನೀಡಲಾಗುವುದು. ಈ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಷಕ್ಕೆ ಎರಡು ಬಾರಿ ನೇರವಾಗಿ ಜಮೆ ಮಾಡಲಾಗುವುದು ಎಂದು ಅವರು ವಿವರಿಸಿದರು.
“ಉತ್ತಮ ಶಾಲಾ ಶಿಕ್ಷಣವು ಜೀವನಕ್ಕೆ ಭದ್ರ ಬುನಾದಿಯಾಗಿದೆ, ಆದರೆ ಉನ್ನತ ಶಿಕ್ಷಣವು ಜೀವನದ ಸಾಮಾಜಿಕ ಮತ್ತು ಆರ್ಥಿಕ ನಿರೀಕ್ಷೆಗಳನ್ನು ಗಮನಾರ್ಹವಾಗಿ ಬದಲಾಯಿಸುವ ಸಾಮರ್ಥ್ಯ ಹೊಂದಿದೆ. ಭಾರತವು ಹಲವು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದ್ದರೂ, ಹುಡುಗಿಯರು ಶಿಕ್ಷಣದ ಪ್ರತಿ ಹಂತದಲ್ಲೂ ವಿವಿಧ ಸಾಮಾಜಿಕ ಮತ್ತು ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದ್ದಾರೆ.
ಹುಡುಗಿಯರು ಉನ್ನತ ಶಿಕ್ಷಣವನ್ನು ಪಡೆಯಲು ಬೆಂಬಲ ನೀಡಲು ನಾವು ಗಣನೀಯ ಬದ್ಧತೆಯನ್ನು ಹೊಂದಿದ್ದೇವೆ. ಇದು ಅವರ ಜೀವನದ ಪಥದ ಮೇಲೆ ಹೆಚ್ಚಿನ ನಿಯಂತ್ರಣ ಸಾಧಿಸಲು ಸಹಾಯ ಮಾಡುತ್ತದೆ,” ಎಂದು ಅಜೀಂ ಪ್ರೇಮ್ಜಿ ಫೌಂಡೇಷನ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನುರಾಗ್ ಬೆಹರ್ ತಿಳಿಸಿದರು.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…