ಪ್ರೌಢಶಾಲಾ ಶಿಕ್ಷಕರಿಗೆ ಪಿಯು (P U) ಉಪನ್ಯಾಸಕರ ಹುದ್ದೆಗೆ ಬಡ್ತಿ ಆದೇಶ

ಬೆಂಗಳೂರು.28.ಜೂನ್.25:- ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿ ಸಿದ್ಧಪಡಿಸುವ ಸಂಬಂಧ online module ಸಿದ್ಧಪಡಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಪ್ರೌಢಶಾಲಾ ಸಹಶಿಕ್ಷಕರ ರಾಜ್ಯ ಮಟ್ಟದ ಒಂದೇ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ದಿನಾಂಕ : 25.04.2025 ರಂದು ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿರುತ್ತದೆ.

ಮೇಲ್ಕಂಡಂತೆ ಪ್ರಕಟಿಸಿದ್ದ ಪಟ್ಟಿಗೆ ಆಕ್ಷೇಪಣೆಗಳನ್ನು ವಿಭಾಗೀಯ ಕಛೇರಿಯ ಹಂತದಲ್ಲಿ ಸ್ವೀಕರಿಸಿ ತಿದ್ದುಪಡಿಗಳನ್ನು (inconsistence data ಒಳಗೊಂಡಂತೆ) ತಂತ್ರಾಂಶದಲ್ಲಿ ಅಳವಡಿಸಲು ಉಲ್ಲೇಖ (2) ರ ಸಭಾ ನಡಾವಳಿಯಲ್ಲಿ ಸೂಚಿಸಲಾಗಿರುತ್ತದೆ.

ಮೇಲ್ಕಂಡ ಅಂಶಗಳ ಹಿನ್ನಲೆಯಲ್ಲಿ ಈಗಾಗಲೇ ತಿದ್ದುಪಡಿಗಳನ್ನು ತಂತ್ರಾಂಶದಲ್ಲಿ ಇಂದೀಕರಿಸುವ ಕಾರ್ಯವು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಈ ಜ್ಞಾಪನದೊಂದಿಗೆ ಲಗತ್ತಿಸಿರುವ ನಮೂನೆಯಲ್ಲಿ ದೃಢೀಕರಣ ಪತ್ರವನ್ನು ಸಿದ್ಧಪಡಿಸಿ ದಿನಾಂಕ : 27.06.2025 ರೊಳಗೆ ಈ ಕಛೇರಿಗೆ ಸಲ್ಲಿಸಲು ತಿಳಿಸಿದೆ.

ದೃಢೀಕರಣ ಪತ್ರ

ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿ ಸಿದ್ಧಪಡಿಸುವ ಸಂಬಂಧ ಶಿಕ್ಷಕರ ವಿವರಗಳನ್ನು ತಂತ್ರಾಂಶದಲ್ಲಿ ನಮೂದಿಸಿರುವ ಬಗ್ಗೆ ಸೂಚನೆ ನೀಡಲಾಗಿದೆ.

ಮೇಲ್ಕಂಡ ವಿಷಯ ಮತ್ತು ಉಲ್ಲೇಖಗಳಿಗೆ ಸಂಬಂಧಿಸಿದಂತೆ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿ ಸಿದ್ಧಪಡಿಸುವ ಸಂಬಂಧ ಉಲ್ಲೇಖ(1) ಮತ್ತು ಉಲ್ಲೇಖ(2)ರಲ್ಲಿನ ಸೂಚನೆಗಳನ್ನಯ ವಿಭಾಗಕ್ಕೆ ಸಂಬಂಧಿಸಿದಂತೆ ಸ್ನಾತಕೋತ್ತರ ಪದವಿ ಪಡೆದಿರುವ ಎಲ್ಲಾ ಶಿಕ್ಷಕರ ಸೇವಾ ವಿವರಗಳನ್ನು ಯಾವುದೇ ಲೋಪದೋಷವಿಲ್ಲದೇ ಮತ್ತು ಯಾವುದೇ ಶಿಕ್ಷಕರ ಹೆಸರನ್ನು ಕೈಬಿಡದೇ ತಂತ್ರಾಂಶದಲ್ಲಿ ಇಂದೀಕರಿಸಲಾಗಿದೆ ಎಂದು ಈ ಮೂಲಕ ದೃಢೀಕರಿಸಿದೆ.

prajaprabhat

Recent Posts

ದೃಷ್ಟಿ ಹೀನ ಕೆಂಪಮ್ಮನಿಗೆ ಗ್ಯಾರಂಟಿ ಯೋಜನೆ ಗೃಹಲಕ್ಷ್ಮೀ ಹಣ ಇಲ್ಲ

ಯಳಂದೂರು.28.ಜೂನ್.25:-ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಅಂಬೇಡ್ಕರ್ ಬಡಾವಣೆಯ ವೃದ್ದೆ ಕೆಂಪಮ್ಮ( 75)  ಎಂಬುವರಿಗೆ  ಎರಡು ಕಣ್ಣುಗಳು ದೃಷಿಯನ್ನು…

3 hours ago

1850 ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

HVF Avadi. ಜೂನಿಯರ್ ಟೆಕ್ನಿಷಿಯನ್ ನೇಮಕಾತಿ 2025: - ಚೆನ್ನೈನ ಅವಡಿಯಲ್ಲಿರುವ ಹೆವಿ ವೆಹಿಕಲ್ಸ್ ಫ್ಯಾಕ್ಟರಿ, ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ…

4 hours ago

New Update: ಕರ್ನಾಟಕ ಹೈಕೋರ್ಟ್, ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ನೇಮಕಾತಿಗೆ ಮಾರ್ಗಸೂಚಿಗಳು

ಕರ್ನಾಟಕ ಹೈಕೋರ್ಟ್, ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನಿಗದಿಪಡಿಸಿದ ಕನಿಷ್ಠ ಶೈಕ್ಷಣಿಕ ಅರ್ಹತೆಗಳನ್ನು ಪೂರೈಸಬೇಕು…

5 hours ago

ರಾಜ್ಯದಲ್ಲಿ ಅಪರಾಧ ಪ್ರಮಾಣ ಭಾರಿ ಇಳಿಕೆ ಸಿಎಂ ಸಿದ್ದರಾಮಯ್ಯ.

ಬೆಂಗಳೂರು.28.ಜೂನ್.25:- ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಹಿರಿಯ ಪೊಲೀಸ್‌ ಅಧಿಕಾರಿಗಳ ಸಮ್ಮೇಳನದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು…

5 hours ago

ಜುಲೈ.2 ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳ ಬೀದರ ಜಿಲ್ಲಾ ಪ್ರವಾಸ

ಬೀದರ.28.ಜೂನ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳಾದ ಶಶಿಧರ್ ಕೋಸಂಬೆ, ಶೇಖರ್‌ಗೌಡ ಜಿ.ರಾಮತ್ನಾಳ್ ಹಾಗೂ ಡಾ.ತಿಪ್ಪೇಸ್ವಾಮಿ ಕೆ.ಟಿ.…

12 hours ago

ಕಾಣೆಯಾದ ವ್ಯಕ್ತಿ ಪತ್ತೆಗಾಗಿ ಮನವಿ

ಬೀದರ.28.ಜೂನ್.25:- ಬೀದರನ ಮುಲ್ತಾನಿ ಕಾಲೋನಿಯ ನಿವಾಸಿಯಾದ ಶೇಖ ಅಜಿರೋದ್ದಿನ್ ತಂದೆ ಶೇಖ ಬೂಲಬುಲ (25) ಇತನು ದಿನಾಂಕ:27-05-2025 ರಂದು ಮನೆಯಿಂದ…

12 hours ago