ಬಳ್ಳಾರಿ ವಿಶ್ವವಿದ್ಯಾಲಯ ನಕಲಿ ಘಟಿಕೋತ್ಸವ ಪ್ರಮಾಣ ಪತ್ರ ಬಹಿರಂಗವಾಗಿದೆ.!

ಬಳ್ಳಾರಿ.23.ಫೆ.25:- ರಾಜ್ಯದಲ್ಲಿ ನಕಲಿ ಪ್ರಮಾಣಪತ್ರದ ಹಾವಳಿ ಈಗ ಮಾತೊಂದ ಅಕ್ರಮ ಕಂಡುಬಂದಿದೆ. ಈ ಕಾರಣಕ್ಕೆ ಈಗ 10 ವರ್ಷಗಳಲ್ಲಿ ಏನಾಗಿದೆ ಎಂಬುದನ್ನು ಪರಿಶೀಲಿಸಲು ನಾವು ತೀರ್ಮಾನಿಸಿದ್ದೇವೆ. ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕುಲಪತಿ ಸಹಿ ನಕಲು ಮಾಡಿ, ನೂರಾರು ಮಂದಿಗೆ ಘಟಿಕೋತ್ಸವದ ನಕಲಿ ಪ್ರಮಾಣ ಪತ್ರ ನೀಡಿರುವುದು ಬಹಿರಂಗವಾಗಿದೆ. ಹೀಗಾಗಿ, ಈ 10 ವರ್ಷಗಳಲ್ಲಿ ಪ್ರಮಾಣ ಪತ್ರಕ್ಕೆಂದು ನೀಡಲಾದ ರಶೀದಿಗಳನ್ನು ಪರಿಶೀಲಿಸಲು ವಿಶ್ವವಿದ್ಯಾಲಯ ಮುಂದಾಗಿದೆ.

ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಗುತ್ತಿಗೆ ನೌಕರರು ಈ ಕೃತ್ಯದಲ್ಲಿ ಭಾಗಿ ಆಗಿದ್ದಾರೆ. ವಿಶ್ವವಿದ್ಯಾಲಯಕ್ಕೆ ಸಂದಾಯ ಆಗಬೇಕಿದ್ದ ಹಣ ನಷ್ಟವಾಗಿದೆ. ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ವಿಶ್ವವಿದ್ಯಾಲಯದಲ್ಲಿ ಅಕ್ರಮ ವಾಗಿ ವಲಸೆ ಪ್ರಮಾಣ ಪತ್ರ ನೀಡಿದ್ದ ಪ್ರಕರಣ ಇತ್ತೀಚೆಗೆ ಬಯಲಾಗಿತ್ತು. ಈ ಪ್ರಕರಣದಲ್ಲಿ ವಿಶ್ವವಿದ್ಯಾಲಯ ಸಿಬ್ಬಂದಿಯೂ ಆಗಿದ್ದ ವೈ.ಕೃಷ್ಣಮೂರ್ತಿ ಎಂಬಾತನನ್ನು ಇತ್ತೀಚೆಗೆ ಅಮಾನತು ಮಾಡಲಾಗಿತ್ತು. ಈ ಪ್ರಕರಣದ ತನಿಖೆ ವೇಳೆ ಘಟಿಕೋತ್ಸವ ಪ್ರಮಾಣ ಪತ್ರದ ಅಕ್ರಮವೂ ಬಯ ಲಾಗಿದೆ. ಇದಕ್ಕಾಗಿ ಕುಲಪತಿಯ ಸಹಿಯ ಸೀಲ್‌ ಅನ್ನೇ ಗುಪ್ತವಾಗಿ ತಯಾರಿಸಿಟ್ಟುಕೊಳ್ಳಲಾಗಿತ್ತು’ ಎಂದು ಗೊತ್ತಾಗಿದೆ.

ಹೊರಗುತ್ತಿಗೆ ನೌರರು ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. 10 ವರ್ಷಗಳಲ್ಲಿ ಏನಾಗಿದೆ ಎಂಬುದನ್ನು ಪರಿಶೀಲಿಸಲು ನಾವು ತೀರ್ಮಾನಿಸಿದ್ದೇವೆ ಎಂದು ಆಡಳಿತ ವಿಭಾಗದ ಕುಲಸಚಿವ ರುದ್ರೇಶ ಅವರು ತಿಳಿಸಿದರು.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

1 hour ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

9 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

10 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

10 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

10 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

10 hours ago