08/06/2025 8:13 PM

Translate Language

Home » ಲೈವ್ ನ್ಯೂಸ್ » ಬಳ್ಳಾರಿ ಶ್ರೀಕೃಷ್ಣ ವಿಶ್ವವಿದ್ಯಾಲಯಲ್ಲಿ ಹಗರಣಗಳದ್ದೇ ಸದ್ದು.

ಬಳ್ಳಾರಿ ಶ್ರೀಕೃಷ್ಣ ವಿಶ್ವವಿದ್ಯಾಲಯಲ್ಲಿ ಹಗರಣಗಳದ್ದೇ ಸದ್ದು.

Facebook
X
WhatsApp
Telegram

ಬಳ್ಳಾರಿ.28.ಮಾರ್ಚ.25:-ಶ್ರೀಕೃಷ್ಣ ವಿಶ್ವವಿದ್ಯಾಲಯಲ್ಲಿ ಹಿಂದೆ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿ ಅಕ್ರಮ, ಈಗ ಘಟಿಕೋತ್ಸವ ಪ್ರಮಾಣ ಪತ್ರ ಹಗರಣ ಹೀಗೆ ಅಕ್ರಮಗಳಿಂದಲೇ ಮುಜುಗರಕ್ಕೀಡಾಗುತ್ತಿರುವ ಬಳ್ಳಾರಿ ಶ್ರೀಕೃಷ್ಣ ವಿಜಯನಗರ ವಿಶ್ವವಿದ್ಯಾಲಯ ಅಭಿವೃದ್ಧಿ?

ಹಿಂದುಳಿದ ಜಿಲ್ಲೆ ಬಳ್ಳಾರಿ ಜನರ ಉನ್ನತ ಶಿಕ್ಷಣದ ಕನಸು ನನಸಾಗಿಸುವ ಆಶಯ ಹೊತ್ತು ಆರಂಭಗೊಂಡ ವವಿಶ್ವವಿದ್ಯಾಲಯ ಹಗರಣಗಳಿಂದಲೇ ಸುದ್ದಿಯಾಗುತ್ತಿದೆ. ವಿಶ್ವವಿದ್ಯಾಲaಯಲ್ಲಿ ಖಾಲಿಯಿರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗಾಗಿ ಕಳೆದ 2019ರಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿ, ಪರೀಕ್ಷೆಗಳನ್ನೂ ನಡೆಸಲಾಗಿತ್ತು. ಆದರೆ, ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮದ ಆರೋಪಗಳು ಕೇಳಿ ಬಂದ ಹಿನ್ನೆಲೆ ಪ್ರಕ್ರಿಯೆ ಸ್ಥಗಿತಗೊಂಡಿತು.ಶಿಕ್ಷಣದ ಗುಣಮಟ್ಟದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುವಲ್ಲಿ ದೂರ ಉಳಿದ ಆರೋಪ ಎದುರಿಸುತ್ತಲೇ ಇದೆ.

ಈವರೆಗೂ ಹುದ್ದೆಗಳ ನೇಮಕಾತಿ ಪ್ರಕ್ರಿಯಿಯೆ ಚಾಲನೆ ಸಿಕ್ಕಿಲ್ಲ. ಪರಿಣಾಮ ಕನ್ನಡ ವಿಭಾಗದಲ್ಲೂ ಕಾಯಂ ಬೋಧಕರಿಲ್ಲದೆ ಅತಿಥಿ ಬೋಧಕರನ್ನೇ ಆಶ್ರಯಿಸುವಂತಾಗಿದೆ. ಇನ್ನು, ಇತ್ತೀಚೆಗೆ ಬೆಳಕಿಗೆ ಬಂದ ನಕಲಿ ಘಟಿಕೋತ್ಸವ ಪ್ರಮಾಣಪತ್ರಗಳ ವಿತರಣೆ ಪ್ರಕರಣ ತೀವ್ರ ಮುಜುಗರಕ್ಕೀಡು ಮಾಡಿದೆ.

ಸಾವಿರಾರು ನಕಲಿ ಪ್ರಮಾಣಪತ್ರ ನೀಡಲಾಗಿದ್ದು, ಒಂದೂವರೆ ಕೋಟಿಗೂ ಅಧಿಕ ಮೊತ್ತದ ಅವ್ಯವಹಾರ ನಡೆದಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಇನ್ನೂ ಪ್ರಮಾಣಪತ್ರಗಳ ಪರಿಶೀಲನೆ ಕಾರ್ಯ ಮುಂದುವರಿದಿದೆ. ಮಾ.28ರಂದು ಜರುಗುವ ಸಿಂಡಿಕೇಟ್ ಸಭೆಯಲ್ಲಿ ಅವ್ಯವಹಾರ ನಡೆಸಿರುವ ಆರೋಪಿಗಳ ವಿರುದ್ಧ ಕ್ರಮ ಜರುಗಿಸುವ ನಿರ್ಣಯಿಸುವ ಸಾಧ್ಯತೆಯಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!