ಬಳ್ಳಾರಿ ಶ್ರೀಕೃಷ್ಣ ವಿಶ್ವವಿದ್ಯಾಲಯಲ್ಲಿ ಹಗರಣಗಳದ್ದೇ ಸದ್ದು.

ಬಳ್ಳಾರಿ.28.ಮಾರ್ಚ.25:-ಶ್ರೀಕೃಷ್ಣ ವಿಶ್ವವಿದ್ಯಾಲಯಲ್ಲಿ ಹಿಂದೆ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿ ಅಕ್ರಮ, ಈಗ ಘಟಿಕೋತ್ಸವ ಪ್ರಮಾಣ ಪತ್ರ ಹಗರಣ ಹೀಗೆ ಅಕ್ರಮಗಳಿಂದಲೇ ಮುಜುಗರಕ್ಕೀಡಾಗುತ್ತಿರುವ ಬಳ್ಳಾರಿ ಶ್ರೀಕೃಷ್ಣ ವಿಜಯನಗರ ವಿಶ್ವವಿದ್ಯಾಲಯ ಅಭಿವೃದ್ಧಿ?

ಹಿಂದುಳಿದ ಜಿಲ್ಲೆ ಬಳ್ಳಾರಿ ಜನರ ಉನ್ನತ ಶಿಕ್ಷಣದ ಕನಸು ನನಸಾಗಿಸುವ ಆಶಯ ಹೊತ್ತು ಆರಂಭಗೊಂಡ ವವಿಶ್ವವಿದ್ಯಾಲಯ ಹಗರಣಗಳಿಂದಲೇ ಸುದ್ದಿಯಾಗುತ್ತಿದೆ. ವಿಶ್ವವಿದ್ಯಾಲaಯಲ್ಲಿ ಖಾಲಿಯಿರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗಾಗಿ ಕಳೆದ 2019ರಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿ, ಪರೀಕ್ಷೆಗಳನ್ನೂ ನಡೆಸಲಾಗಿತ್ತು. ಆದರೆ, ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮದ ಆರೋಪಗಳು ಕೇಳಿ ಬಂದ ಹಿನ್ನೆಲೆ ಪ್ರಕ್ರಿಯೆ ಸ್ಥಗಿತಗೊಂಡಿತು.ಶಿಕ್ಷಣದ ಗುಣಮಟ್ಟದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುವಲ್ಲಿ ದೂರ ಉಳಿದ ಆರೋಪ ಎದುರಿಸುತ್ತಲೇ ಇದೆ.

ಈವರೆಗೂ ಹುದ್ದೆಗಳ ನೇಮಕಾತಿ ಪ್ರಕ್ರಿಯಿಯೆ ಚಾಲನೆ ಸಿಕ್ಕಿಲ್ಲ. ಪರಿಣಾಮ ಕನ್ನಡ ವಿಭಾಗದಲ್ಲೂ ಕಾಯಂ ಬೋಧಕರಿಲ್ಲದೆ ಅತಿಥಿ ಬೋಧಕರನ್ನೇ ಆಶ್ರಯಿಸುವಂತಾಗಿದೆ. ಇನ್ನು, ಇತ್ತೀಚೆಗೆ ಬೆಳಕಿಗೆ ಬಂದ ನಕಲಿ ಘಟಿಕೋತ್ಸವ ಪ್ರಮಾಣಪತ್ರಗಳ ವಿತರಣೆ ಪ್ರಕರಣ ತೀವ್ರ ಮುಜುಗರಕ್ಕೀಡು ಮಾಡಿದೆ.

ಸಾವಿರಾರು ನಕಲಿ ಪ್ರಮಾಣಪತ್ರ ನೀಡಲಾಗಿದ್ದು, ಒಂದೂವರೆ ಕೋಟಿಗೂ ಅಧಿಕ ಮೊತ್ತದ ಅವ್ಯವಹಾರ ನಡೆದಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಇನ್ನೂ ಪ್ರಮಾಣಪತ್ರಗಳ ಪರಿಶೀಲನೆ ಕಾರ್ಯ ಮುಂದುವರಿದಿದೆ. ಮಾ.28ರಂದು ಜರುಗುವ ಸಿಂಡಿಕೇಟ್ ಸಭೆಯಲ್ಲಿ ಅವ್ಯವಹಾರ ನಡೆಸಿರುವ ಆರೋಪಿಗಳ ವಿರುದ್ಧ ಕ್ರಮ ಜರುಗಿಸುವ ನಿರ್ಣಯಿಸುವ ಸಾಧ್ಯತೆಯಿದೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

2 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

3 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

5 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

5 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

5 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

6 hours ago