ಬಾದಲಗಾಂವದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ 134ನೇ ಜಯಂತ್ಯೋತ್ಸವ.

ಔರಾದ್.27.ಏಪ್ರಿಲ್.25:- ಔರಾದ್ ತಾಲೂಕಿನ್ ಬಾದಲಗಾಂವ ಗ್ರಾಮದಲ್ಲಿ ಇಂದು ಡಾ. ಬಾಬಾ ಸಾಹೇಬ ಅಂಬೇಡ್ಕರ ರವರ 134ನೇ ಜನ್ಮದಿನದ ಮಹಾ ಉತ್ಸವವು ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪ್ರಮುಖ ಅತಿಥಿಗಳಾಗಿ ಶಿವರಾಜ ದೇಶಮುಖ, ನೆಹರೂ ಪಾಟೀಲ, ಆನಂದ ಗಲಗಲೆ, ಪ್ರಕಾಶ ಭಂಗಾರೆ ಹಾಗೂ ಉಪನ್ಯಾಸಕರಾಗಿ ಎನ್ ಎಸ್ ವಾಯ್ ಎಫ್ ರಾಜ್ಯ ಸಂಚಾಲಕ ಶಿವಕುಮಾರ ಕಾಂಬಳೆ ಉಪಸ್ಥಿತರಿದ್ದರು.

ಅದೇ ರೀತಿ, ದಿನೇಶ ಶಿಂದೆ, ಆನಂದ ಕಾಂಬಳೆ, ಸುಂದರ ಮೇತ್ರೆ, ಪ್ರಕಾಶ ವನಮರಪಳ್ಳಿ, ಗಂಗರಾಮ ಕಾಂಬಳೆ, ಸೂರ್ಯಕಾಂತ ರಕ್ಷಾಳೆ, ಸಿದ್ಧಾರ್ಥ ಭೂಸಲೆ, ಸೂರ್ಯಕಾಂತ ಶೆರೆಕರ್, ಶಿವಾಜಿ ಶಿಂದೆ, ಚಂದು ಡಿ.ಕೆ, ಜ್ಞಾನು ಭಾಸ್ಕರೆ ಮುಂತಾದ ಗಣ್ಯರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿವಕುಮಾರ ಕಾಂಬಳೆ ಅವರು, “ಬಾಬಾ ಸಾಹೇಬರಿಗೆ ಇಂದು ಜಗತ್ತೆ ತಲೆಬಾಗುತ್ತಿದೆ. ಆದರೆ, ಸಂವಿಧಾನದ ಫಲವನ್ನು ಪಡೆದುಕೊಂಡು ಅವರಿಗೆ ಸರಿಯಾದ ಗೌರವ ನೀಡುವುದು ನಮ್ಮೆಲ್ಲರ ಹೊಣೆಗಾರಿಕೆ. ಬಾಬಾ ಸಾಹೇಬರು ದೇಶದ ಪ್ರತಿಯೊಬ್ಬ ನಾಗರಿಕರ ಉನ್ನತಿಗಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದವರಾಗಿದ್ದಾರೆ. ದಲಿತ ಸಮುದಾಯದವರು ಇಂದು ಭೌತಿಕ ಸೌಕರ್ಯಗಳಲ್ಲಿ ಮುನ್ನುಗ್ಗುತ್ತಿರುವಾಗ ಬಾಬಾ ಸಾಹೇಬರ ತ್ಯಾಗ ಮತ್ತು ತಪಸ್ಸನ್ನು ಪ್ರತಿದಿನವೂ ಸ್ಮರಿಸಬೇಕು,” ಎಂದು ಭಾವುಕವಾಗಿ ಮಾತನಾಡಿದರು.

ಕಾರ್ಯಕ್ರಮವನ್ನು ಸ್ಥಳೀಯ ನಾಗರಿಕರು ಮತ್ತು ವಿದ್ಯಾರ್ಥಿಗಳು ಕೂಡಾ ಭಕ್ತಿಯಿಂದ ಭಾಗವಹಿಸಿ ಯಶಸ್ವಿಗೊಳಿಸಿದರು.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

9 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

10 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

10 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

11 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

12 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

13 hours ago