27ಡಿ24 ಬೆಳಗಾವಿ. ಇಂದು ಬೆಳಗಾವಿ ಎಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದವತಿಯಿಂದ ಅಧಿವೇಶನ ಕೆ ಅಗ್ನಿತವಿರುವ ದೇಶದ ಮೂಲೆಯ ಮೂಲೆಯೆಂದ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಪಕ್ಷದ ಕಾರ್ಯಕರ್ತರು ಬರ್ತಿದಿದ್ರು ಈ ಕಾರ್ಯಕ್ರಮದ ಕೆಲವ ದೀನ್ ಮುಂದೂಡಲಗಿದೆ ಕಾರಣ.ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ (ಇಂದು)ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ ನಡೆದ ತುರ್ತು ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾವೇಶ ನಡೆಯಬೇಕಿದ್ದ ವೇದಿಕೆಯಲ್ಲಿಯೇ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ.
ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಟರ ಬಳಿ ಮಾತನಾಡಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ಆದಷ್ಟು ಬೇಗ ತಿಳಿಸಲಾಗುವುದು ಎಂದರು.
ಶುಕ್ರವಾರ ಸರ್ಕಾರದ ಹಾಗೂ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ ಒಂದು ವಾರಗಳ ಕಾಲ ಶೋಕಾಚರಣೆ ಮಾಡಲಾಗುವುದು ಎಂದು ಹೇಳಿದರು.
ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೊರಜಿಲ್ಲೆಗಳಿಂದ ಜನರು ಆಗಮಿಸುವುದು ಬೇಡ. ಬದಲಾಗಿ ಬೆಳಗಾವಿಯಲ್ಲಿ ಇರುವವರು ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಗೌರವ ಸಲ್ಲಿಸಬೇಕು. ಹೊರ ಊರುಗಳಿಂದ ಹೊರಡುವ ಅನೇಕ ಕಾರ್ಯಕರ್ತರು ಹಾಗೂ ನಾಯಕರುಗಳು ಬೆಳಗಾವಿಗೆ ಬರುವುದು ಬೇಡ. ಈಗಾಗಲೇ ಹೊರ ಊರುಗಳಿಂದ ಬಂದಿರುವವರು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಹೊರ ಊರುಗಳಿಂದ ಬಂದಿರುವ ಸಂಸದರು ಹಾಗೂ ನಾಯಕರುಗಳ ಹೊಣೆ ಹೊತ್ತಿರುವ ಉಸ್ತುವಾರಿ ಸಮಿತಿಯವರು ಅವರುಗಳು ತೆರಳುವ ತನಕ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ನಿಮ್ಮ ಜವಾಬ್ದಾರಿ ಮರೆಯಬಾರದು ಎಂದುತಿಳಿಸಿದರು
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…
ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…