13/06/2025 9:09 PM

Translate Language

Home » ಲೈವ್ ನ್ಯೂಸ್ » ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡರೆ
ಕಾನೂನು ಕ್ರಮ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡರೆ
ಕಾನೂನು ಕ್ರಮ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Facebook
X
WhatsApp
Telegram


ಬೀದರ.12.ಜೂನ್.25:- ಜಿಲ್ಲೆಯಲ್ಲಿ ಯಾವುದೇ ಅಂಗಡಿಗಳಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವಂತಿಲ್ಲ. ಒಂದುವೇಳೆ ನೇಮಿಸಿಕೊಂಡಿರುವುದು ಕಂಡುಬoದತೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಹೇಳಿದರು.


ಅವರು ಗುರುವಾರದಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ರಂಗಮAದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕುರಿತು ಮಾತನಾಡಿದರು.


ಬಾಲಕಾರ್ಮಿಕ ಪದ್ಧತಿಯು ಮಕ್ಕಳ ಬಾಲ್ಯವನ್ನು ಕಸಿದಿಕೊಳ್ಳುತ್ತದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ನಾಗರಿಕರು ಎಲ್ಲೆ ಬಾಲಕಾರ್ಮಿಕರು ಕಂಡು ಬಂದಲ್ಲಿ ತಕ್ಷಣ ಸಂಬAಧಪಟ್ಟ ಅಧಿಕಾರಿಗಳಿಗೆ ಅಥವಾ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕರೆ ಮಾಡಿ ತಿಳಿಸಬೇಕೆಂದರು.

14 ವರ್ಷದೊಳಗಿನ ಮಕ್ಕಳು ಬಾಲ ಕಾರ್ಮಿಕರು ಮತ್ತು 14 ರಿಂದ 18 ವರ್ಷದೊಳಗಿನ ಮಕ್ಕಳು ಕಿಶೋರ ಕಾರ್ಮಿಕರೆಂದು ಪರಿಗಣಿಸಲಾಗುತ್ತದೆ ಹಾಗೂ 1986 ರ ಬಾಲಕಾರ್ಮಿಕ ನಿಷೇಧ ಕಾಯ್ದೆ ಅನ್ವಯ ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿಷೇಧ ಮತ್ತು ಕಿಶೋರ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕೆಲಸಗಳಲ್ಲಿ ನೇಮಿಸಿಕೊಳ್ಳುವುದು ಕಾನೂನಾತ್ಮಕ ಅಪರಾಧ ಎಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು.


ಸಂವಿಧಾನದ 21ಎ ವಿಧಿಯ ಶಿಕ್ಷಣ ಒಂದು ಮೂಲಭೂತ ಹಕ್ಕು ಎಂದು ತಿಳಿಸುತ್ತದೆ, ಆದ್ದರಿಂದ 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡಲಾಗುತ್ತದೆ. ಬಾಲಕಾರ್ಮಿಕರು ಕಂಡು ಬಂದಲ್ಲಿ ಅಂತಹವರನ್ನು ನೇರವಾಗಿ ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿಸಿ ಮಕ್ಕಳಿಗೆ ಉನ್ನತ ಮಟ್ಟದ ಶಿಕ್ಷಣ ನೀಡಲಾಗುವುದು ಎಂದರು.


ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ಮಾತನಾಡಿ, 14 ವರ್ಷದೊಳಗಿನ ಮಕ್ಕಳು ಹೆಚ್ಚಾಗಿ ಹೊಟೇಲ್, ಗ್ಯಾರೇಜ್, ಧಾಭಾ ಮತ್ತು ಸಣ್ಣ ಗುಡಿ ಕೈಗಾರಿಕೆಗಳಲ್ಲಿ ಕಂಡು ಬರುತ್ತಾರೆ ಅದಕ್ಕೆ ಅನೇಕ ಕಾರಣಗಳಿವೆ ಬಡತನ, ಕೌಟುಂಬಿಕ ಕಲಹ, ಮಕ್ಕಳಿಗೆ ಪೋಷಕರು ಇಲ್ಲದೆ ಇರುವುದು ಇತ್ಯಾದಿ, ಆದರೆ ನಾವು ಅವರಿಗೆ ಬಾಲಕಾರ್ಮಿಕ ಪದ್ಧತಿಯಿಂದ ಆಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಬೇಕೆಂದರು.

ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಕಾನೂನಾತ್ಮಕ ಅಪರಾಧವಾಗಿದೆ ಆದರೂ ಬಾಲಕಾರ್ಮಿಕ ಪದ್ಧತಿ ಕಂಡು ಬರುವುದು ವಿಷಾದದ ವಿಷಯವಾಗಿದೆ ಎಂದರು.
ಬೀದರ ಜಿಲ್ಲೆಯನ್ನು ಬಾಲಕಾರ್ಮಿಕ ಪದ್ಧತಿ ಮುಕ್ತ ಜಿಲ್ಲೆಯನ್ನಾಗಿ ಮಾಡುವುದು ಮತ್ತು ಮಕ್ಕಳಿಗೆ ಬಾಲ್ಯವನ್ನು ಆಟ-ಪಾಠಗಳ ಜೊತೆಗೆ ಕಳೆಯಲು ಬಿಡಬೇಕು.

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ, ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಮತ್ತು ಕೇವಲ ಅಧಿಕಾರಿಗಳು ಅಷ್ಟೇ ಅಲ್ಲ ಪೋಷಕರು, ನಾಗರಿಕರು ಇವುಗಳನ್ನು ತಡೆಯುವ ಕೆಲಸ ಮಾಡಬೇಕೆಂದು ತಿಳಿಸಿದರು.


ನ್ಯಾಯವಾದಿ ಅಂಜನಾ ಕುಲಕರ್ಣಿ ಅವರು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಬಗ್ಗೆ ಉಪನ್ಯಾಸ ಮಾಡಿದರು. ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಂದ ಭಾಷಣ, ಕಿರು ನಾಟಕ ಪ್ರದರ್ಶನ ಮಾಡಲಾಯಿತು.
ಕಾರ್ಯಕ್ರಮ ಮುಂಚಿತವಾಗಿ ಜಿಲ್ಲಾಧಿಕಾರಿ ಕಚೇರಿಯಿಂದ ರಂಗ ಮಂದಿರದವರೆಗೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಜಾಗೃತಿ ಜಾಥಾ ಕೈಗೊಳ್ಳಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸನ್ಮುಖಯ್ಯಾ ಬಿ. ಸ್ವಾಮಿ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಧನರಾಜ ಬಿರಾದಾರ, ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಲಕ್ಷ್ಮಣ ಕುಳಲಿ, ಜಿಲ್ಲಾ ಮಕ್ಕಳ ಸಮಿತಿ ಅಧ್ಯಕ್ಷ ಸೀಮಪ್ಪಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ, ಬೀದರ ಗ್ಯಾರೇಜ್ ಮಾಲೀಕರ ಸಂಘದ ಅಧ್ಯಕ್ಷ ಅನಿಲ ಪಸರ್ಗೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!