ಬಿಜೆಪಿಯ ಶಾಸಕರ ಕ್ಷೇತ್ರಗಳಿಗೆ ಅನ್ಯಾಯವಾಗ್ತಿದೆ.ಶಾಸಕ ಪ್ರಭು ಚವ್ಹಾಣ.!

ಔರಾದ್.12.ಜನವರಿ.25:-ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ ಬಿಜೆಪಿಯ ಶಾಸಕನಾಗಿರುವ ನನ್ನ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಅಡ್ಡಗಾಲು ಹಾಕ್ತಿದೆ.  ಅಭಿವೃದ್ದಿ ಕಾಮಗಾರಿ ಆಗುತ್ತಿಲ್ಲ. ಬಿಜೆಪಿ ಸರಕಾರ ರೋಪಿಸಿದ್ ಯೋಜನೇ ಕಾಮಗಾರಿ ಕಾರಂಜಾ ಡ್ಯಾಂ ದಿಂದ ಔರಾದ್‌ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆಯ 84 ಕೋಟಿ ರು. ಯೋಜನೆ ಟೆಂಡರ್‌ ಆಗಿ ಎರಡು ವರ್ಷವಾದರೂ ಕಾಮಗಾರಿ ಆರಂಭವಾಗಿಲ್ಲ.

ಹಾಗೋ ಕೆರೆ ತುಂಬಿಸುವ 560 ಕೋಟಿ ರು. ಕಾಮಗಾರಿ ಮರು ಟೆಂಡರ್‌ ಮಾಡಲಾಗಿದೆ ಅನಗತ್ಯ ವಿಳಂಬವನ್ನು ಇನ್ಮುಂದೆ ಸಹಿಸಲ್ಲ ಎಂದು ಶಾಸಕ ಪ್ರಭು ಚವ್ಹಾಣ್‌ ಆಕ್ರೋಶ ವ್ಯಕ್ತಪಡಿಸಿದರು. ಅವರು ಕಾರಂಜಾ ಜಲಾಶಯದಿಂದ ಔರಾದ್‌ ಪಟ್ಟಣ ಹಾಗೂ ಮತ್ತಿತರ ಗ್ರಾಮಗಳಿಗೆ ನೀರು ಪೂರೈಸುವ ಕಾಮಗಾರಿಯ ಕುರಿತಂತೆ ಭಾಲ್ಕಿ ತಾಲೂಕಿನ ಹಲಬರ್ಗಾ ಸಮೀಪದ ತೇಗಂಪೂರ ಗ್ರಾಮದ ಸ್ಥಳ ಪರಿಶೀಲನೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅಸಮಧಾನ ಹೊರಹಾಕಿದರು.

ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಕಾರಂಜಾ ಜಲಾಶಯದಿಂದ ಪೈಪ್‌ ಲೈನ್‌ ಮೂಲಕ ಔರಾದ್‌ ಹಾಗೂ ಕಮಲನಗರ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವುದು ಅಲ್ಲದೆ ಈ ನಡುವೆ ಬರುವ 6 ಗ್ರಾಮಗಳಿಗೂ ಕುಡಿಯುವ ನೀರು ಪೋರೈಸಲು ಅಮೃತ ಯೋಜನೆಯ 2.0 ಅಡಿಯಲ್ಲಿ ಸರ್ಕಾರ ಒಟ್ಟು 84.82 ಕೋಟಿ ರು.

ವೆಚ್ಚದ ಯೋಜನೆಯನ್ನು 2022 ರಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಮಂಜೂರಾತಿ ಪಡೆದು ಟೆಂಡರ್ ಪ್ರಕ್ರಿಯೆ ಕೂಡ ಮುಗಿದಿದೆ. ಆದರೆ ಗುತ್ತಿಗೆದಾರ ಇಲ್ಲಿಯವರೆಗೆ ಕಾಮಗಾರಿ ಆರಂಭಿಸುವುದನ್ನು ಬಿಟ್ಟು ಅನಗತ್ಯ ವಿಳಂಬ ಮಾಡ್ತಿರುವುದು ಕಾಂಗ್ರೆಸ್ಸಿಗರ ಹಸ್ತಕ್ಷೇಪದ ಅನುಮಾನ ಹುಟ್ಟಿಸುತ್ತಿದೆ ಎಂದು ಶಾಸಕ ಪ್ರಭು ಚವ್ಹಾಣ್‌ ಆಕ್ರೋಶ ವ್ಯಕ್ತಪಡಿಸಿದರು.

ಬೇಸಿಗೆಯಲ್ಲಿ ಜನರಿಗೆ ನೀರಿನ ಸಮಸ್ಯೆ ಆಗ್ತದೆ. ತಕ್ಷಣ ಭೂ ಸ್ವಾಧೀನ ಕಾರ್ಯ ಮಾಡುವುದು, ಅಲ್ಲಲ್ಲಿ ಬರುವ ಅರಣ್ಯ ಇಲಾಖೆಯ ಅನುಮತಿಗಾಗಿ ಅನಗತ್ಯ ವಿಳಂಬ ಮಾಡಲಾಗ್ತಿದೆ. ಇದೇ ರೀತಿ ವಿಳಂಬ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ್ರೆ ಮುಂಬರುವ ದಿನಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಶಾಸಕ ಪ್ರಭು ಚವ್ಹಾಣ್‌ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಗಮನಕ್ಕೂ ಸಾಕಷ್ಟು ಬಾರಿ ತರಲಾಗಿದೆ ಆದರೆ ಅದಕ್ಕೆ ಯಾವುದೇ ಪ್ರತಿಫಲ ಸಿಕ್ಕಿಲ್ಲ.

ಬಿಜೆಪಿಯ ಶಾಸಕರ ಕ್ಷೇತ್ರಗಳಿಗೆ ಅನ್ಯಾಯವಾಗ್ತಿದೆ. ಇನ್ನು ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು ಕಾಮಗಾರಿ ಆರಂಭಕ್ಕೆ ಬಿಡುತ್ತಿಲ್ಲವೇ ಎಂಬ ಅನುಮಾನ ಮೂಡುತ್ತಿದೆ ಎಂದು ಪ್ರಭು ಚವ್ಹಾಣ್‌ ಆರೋಪಿಸಿದರು.

ಮದ್ಯ ಮಾರಾಟ ನಿಲ್ಲಿಸಲು ಆಗ್ರಹ: ಅಕ್ರಮ ಮದ್ಯದಂಗಡಿಗಳು ತಲೆ ಎತ್ತಿದ್ದು, ಇದರಿಂದ ಪತಿ, ಮಕ್ಕಳು ಸೇರಿದಂತೆ ಬಹುತೇಕರು ಕುಡಿತಕ್ಕೆ ದಾಸರಾಗುತ್ತಿದ್ದು, ತಕ್ಷಣವೇ ಮದ್ಯದಂಗಡಿಗಳನ್ನು ಬಂದ್‌ ಮಾಡಿಸುವಂತೆ ಶಾಸಕ ಪ್ರಭು ಚವ್ಹಾಣ್‌ ಎದುರು ಮಹಿಳೆಯರ ಗುಂಪು ಅಂಗಲಾಚಿತು.

ತಾಲೂಕಿನ ಹಕ್ಯಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಪ್ರಭು ಚವ್ಹಾಣ್‌ ಅವರು ಸೋಮವಾರ ಗ್ರಾಮ ಸಂಚಾರ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 15ಕ್ಕೂ ಅಧಿಕ ಮಹಿಳೆಯರು ಗ್ರಾಮದಲ್ಲಿ ಮದ್ಯದ ಹಾವಳಿ ತಡೆಯುವಂತೆ ಮನವಿ ಮಾಡಿದರು.

ರಾಜ್ಯ ಸರ್ಕಾರ ಮೇಲೆ ಅಭಿವೃದ್ದಿ ಅಧ್ತಿಲ್ಲ ಎಂದು ಆರೋಪಿಸಿದರು.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

4 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

12 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

13 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

13 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

13 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

13 hours ago