ಬೀದರನಲ್ಲಿ ರಾಜ್ಯಮಟ್ಟದ ಜಾನಪದ ಜಾತ್ರೆ.!

ಬೀದರ.11.ಮಾರ್ಚ.25: – ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಬೀದರ ನಗರದಲ್ಲಿ ರಾಜ್ಯ ಮಟ್ಟದ ಜಾನಪದ ಜಾತ್ರೆಯನ್ನು ಮಾರ್ಚ ಕೊನೆಯ ವಾರದಲ್ಲಿ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ತಿಳಿಸಿದರು.


ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ರಾಜ್ಯದ ಗ್ರಾಮೀಣ ಜಾನಪದ ಕಲೆ, ಸಂಸ್ಕøತಿ, ಪರಂಪರೆ ಪ್ರತಿಬಿಂಭಿಸುವ ಜಾನಪದ ಜಾತ್ರೆಯನ್ನು ಬೀದರ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದೆಂದರು. ಸ್ಥಳೀಯ ಹಾಗೂ ಹೊರ ಜಿಲ್ಲೆಯ ಕಲಾವಿದರು ಈ ಜಾನಪದ ಜಾತ್ರೆಯಲ್ಲಿ ಪಾಲ್ಗೊಂಡು ವಿವಿಧ ಸಾಂಸ್ಕøತಿಕ ರಸದೌತಣವನ್ನು ಉಣಬಡಿಸಲಿದ್ದಾರೆ.


ಜಾತ್ರೆಯ ಒಂದು ದಿನ ಮುಂಚೆ ಕಾರ್ಯಕ್ರಮದ ಜಾಗೃತಿಗಾಗಿ ಸಾವಿರಾರು ವಿದ್ಯಾರ್ಥಿಗಳಿಂದ, ಸಂಘ-ಸಂಸ್ಥೆಗಳಿಂದ ವಾಕಾಥಾನ್ ಹಮ್ಮಿಕೊಳ್ಳಲಾಗುವುದು. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ನಗರದ ಮುಖ್ಯ ವೃತ್ತಗಳಲ್ಲಿ ಪ್ರಚಾರ ಹಮ್ಮಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ವಿವಿಧ ಸಮಿತಿ ಹಾಗೂ ಉಪ ಸಮಿತಿಗಳನ್ನು ರಚಿಸುವುದು. ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಇನ್ನೊಂದು ಸಭೆ ನಡೆಸಲಾಗುವುದೆಂದರು.


ಬೇರೆ ಜಿಲ್ಲೆಗಳಿಂದ ಬರುವ ಕಲಾವಿದರಿಗೆ ಸೂಕ್ತ ವಾಸ್ತವ್ಯ ಹಾಗೂ ಊಟದ ವ್ಯವಸ್ಥೆ ಮಾಡಲಾಗುವುದು. ನಿಯಮಾನುಸಾರ ಸಂಭಾವನೆ ಹಾಗೂ ಪ್ರಯಾಣ ವೆಚ್ಚ ನೀಡಲಾಗುವುದೆಂದು ಕನ್ನಡ ಹಾಗೂ ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕರಾದ ಬಸವರಾಜ ಹೂಗಾರ ಸಭೆಯಲ್ಲಿ ತಿಳಿಸಿದರು.


ಜಾನಪದ ಜಾತ್ರೆಯಲ್ಲಿ ಬೆಳಿಗ್ಗೆ ನಗರದಾದ್ಯಂತ ಸಾವಿರಾರು ಕಲಾವಿದರಿಂದ ಮೆರವಣಿಗೆ ಜರುಗಲಿದ್ದು, ಕವಿಗೋಷ್ಠಿ, ಸಂಗೀತ ಕಾರ್ಯಕ್ರಮಗಳು, ನಾಟಕ ಹಾಗೂ ವಿವಿಧ ರೀತಿಯ ಕಲಾ ಪ್ರಕಾರಗಳು, ನೃತ್ಯ ಪ್ರದರ್ಶನಗೊಳ್ಳಲಿವೆಯೆಂದರು.
ವಿವಿಧ ಇಲಾಖೆಗಳಿಂದ ಮಳಿಗೆಗಳನ್ನು ಹಾಕುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಸ್ಥಳೀಯವಾಗಿ ಲಭ್ಯವಿರುವ ಕಲಾ ಪರಿಕರಗಳನ್ನು ಕಾಸ್ಟ ಕಲಾಕೃತಿ, ಬಿದರಿ ಕಲೆ, ಲಂಬಾಣಿ ಉಡುಪು, ಚಿತ್ರಸಂತೆ, ಪುಸ್ತಕ ಮಳಿಗೆ ಮುಂತಾದವುಗಳನ್ನು ಸಹ ಹಮ್ಮಿಕೊಳ್ಳಲಾಗುವುದೆಂದರು.


ಈ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಸಕರಾದ ಸಿದ್ರಾಮ ಶಿಂಧೆ, ಜಾನಪದ ಅಕಾಡೆಮಿ ಸದಸ್ಯರಾದ ವಿಜಯಕುಮಾರ ಸೋನಾರೆ, ಪ್ರೊ.ಜಗನ್ನಾಥ ಹೆಬ್ಬಾಳೆ, ಎಂ.ಎಸ್.ಮನೋಹರ ಭಾರತಿ ವಸ್ತ್ರದ, ಪಾರ್ವತಿ ಸೋನಾರೆ, ದಿಲೀಪ ಕಾಡಲಾದ, ದೇವಿದಾಸ ಚಿಮಕೋಡ, ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ಇನ್ನಿತರರು ಸಭೆಗೆ ಜಾನಪದ ಜಾತ್ರೆ ಯಶಸ್ವಿ ಆಗುವ ನಿಟ್ಟಿನಲ್ಲಿ ಸಲಹೆ ಸೂಚನೆ ನೀಡಿದರು.

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

2 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

3 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

3 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

3 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

3 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

3 hours ago