ಬೀದರ.19.ಏಪ್ರಿಲ್.25:- ಬೀದರದ APMC ಯಾರ್ಡ್, ಎಲ್ಲರಿಗೂ ಗೊತ್ತಿರುವಂತೆ, ನಾವು “ಗಾಂಧಿ ಗಂಜ” ಎಂದು ಕರೆಯುತ್ತೇವೆ. ಇದು ಬೀದರದ ಪ್ರಮುಖ ಕೃಷಿ ಮಾರುಕಟ್ಟೆ ಹಾಗೂ ಬೀದರನ ವಾಣಿಜ್ಯ ಚಟುವಟಿಕೆಗಳಿಗೆ ಬೆನ್ನೆಲುಬಾಗಿದ್ದು, ಸುಮಾರು 30 ಎಕರೆ ಭೂಮಿಯಲ್ಲಿ ಸ್ಥಾಪಿತವಾಗಿದೆ. ಈ ಮಾರುಕಟ್ಟೆಗೆ ಇಂದಿಗೆ ಸುಮಾರು 70 ವರ್ಷಗಳ ಇತಿಹಾಸವಿದೆ.
ಆದಾಗಿನ ಅವಧಿಯಲ್ಲಿ ಇದ್ದ ಕೃಷಿ ಉತ್ಪನ್ನಗಳ ಆವಕ ಮತ್ತು ವ್ಯಾಪಾರಸ್ಥರ ಸಂಖ್ಯೆಯು, ಇಂದಿನ ಹೆಚ್ಚಿನ ವ್ಯಾಪಾರ ಚಟುವಟಿಕೆಗಳಿಗೆ ಹೋಲಿಕೆಯಾಗುವಂತಿಲ್ಲ. ಈ ದಿನಗಳಲ್ಲಿ ಮಾರುಕಟ್ಟೆಯ ವ್ಯಾಪ್ತಿ ಹೆಚ್ಚಾಗಿರುವುದರಿಂದ, ಸುಗ್ಗಿ ಕಾಲದಲ್ಲಿ ದೈನಂದಿನ ವ್ಯವಹಾರ ಸಮಯದಲ್ಲಿ ಇಡೀ ಪ್ರದೇಶ ತುಂಬಾ ಇಕ್ಕಟ್ಟಾದ ಸ್ಥಳವಾಗಿ ಮಾರ್ಪಡುತ್ತದೆ. ಕೆಲವೊಮ್ಮೆ ನಡೆಯಲು ಕೂಡ ಜಾಗವಿಲ್ಲದಂತಹ ಪರಿಸ್ಥಿತಿ ಎದುರಾಗುತ್ತಿದೆ.
ಈ ಹಿನ್ನೆಲೆಯಲ್ಲಿ, ಹೊಸ ಮಾದರಿಯ ಮಾರುಕಟ್ಟೆ ಅಭಿವೃದ್ಧಿಪಡಿಸುವ ಅಗತ್ಯತೆ ನಿಸ್ಸಂದೇಹವಾಗಿ ಬಹಳ ತೀವ್ರವಾಗಿದೆ. ಕಳೆದ ಒಂದು ದಶಕದಿಂದ ಈ ನಿಟ್ಟಿನಲ್ಲಿ ನಾವು ನಿರಂತರವಾಗಿ ಪ್ರಯತ್ನಿಸುತ್ತ, ಅವಶ್ಯಕ ಕ್ರಮಗಳು ಕೈಗೊಳ್ಳಬೇಕೆಂದು ಅನೇಕ ಬಾರಿ ಮನವಿ ಮಾಡಿಕೊಂಡಿದ್ದೇವೆ.
ನೆನ್ನೆ, ಈ ವಿಷಯವನ್ನು ನಾನು ಮತ್ತೊಮ್ಮೆ ಬೀದರ ಉಸ್ತುವಾರಿ ಮಂತ್ರಿಗಳಾದ ಶ್ರೀ ಈಶ್ವರ ಖಂಡ್ರೆಯವರ ಸಮ್ಮುಖದಲ್ಲಿ ಬೀದರಗೆ ಭೇಟಿಕೊಟ್ಟ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಿಗೆ ಹಾಗು ಗೌರವಾನ್ವಿತ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ ಅವರ ಗಮನಕ್ಕೆ ತಂದು, ಬೀದರಕ್ಕೆ ಹೊಸ ಮಾರುಕಟ್ಟೆಯ ಅಗತ್ಯತೆ ಹಾಗೂ ಅವಶ್ಯಕತೆಯ ಕುರಿತು ವಿವರವಾಗಿ ಪ್ರಸ್ತಾವನೆ ಸಲ್ಲಿಸಿದ್ದೇನೆ.
ಇನ್ನಾದರೂ ನೂತನ ಮತ್ತು ಸುಸಜ್ಜಿತ ಮಾರುಕಟ್ಟೆ ಸ್ಥಾಪನೆಯ ನಮ್ಮ ಬಹುಕಾಲದ ಕನಸು ನನಸಾಗಿ, ಈ ವರ್ಷ ಬೀದರನ ರೈತರಿಗೆ ಹಾಗು ವ್ಯಾಪಾರಸ್ಥರಿಗೆ ಅನುಕೂಲವಾಗಲಿ ಎಂಬ ಆಶಯ ಹೊಂದಿದ್ದೇವೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…