ಬೀದರ|ಫೆ.19 ರಂದು ಲೋಕಾಯುಕ್ತ ಕುಂದು ಕೊರತೆ ಸಭೆ.!


ಬೀದರ.17.ಫೆಬ್ರುವರಿ.25: ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಹುಮನಾಬಾದ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಫೆಬ್ರುವರಿ.19 ರಂದು ಬೆಳಿಗ್ಗೆ 11.30 ಗಂಟೆಗೆ ಹುಮನಾಬಾದ ತಹಸೀಲ್ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಕುಂದುಕೊರತೆ/ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಭವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯ ಸಮ್ಮತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳಿದ್ದಲ್ಲಿ ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ. 1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಎಸ್‍ಪಿ ರವರ ಮೊ.ಸಂ-9364062519, ಡಿಎಸ್‍ಪಿ ರವರ ಮೊ.ಸಂ.9364062571,  ಪಿಐ-1 ರವರ ಮೊ.ಸಂ..9364062672, ಪಿಐ-2 ರವರ ಮೊ.ಸಂ.9364062673, ಪಿಐ-3 ರವರ ಮೊ.ಸಂ.9364062674 ಮತ್ತು ಪಿಐ-4 ಅವರ ಮೊ.ಸಂ.9364062675 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

4 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

6 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

6 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

6 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago