ಬೀದರ.18.ಫೆಬ್ರುವರಿ.25:- ಬೀದರ್ ಜಿಲ್ಲೆಯ ಬಸವಕಲ್ಯಾಣ ಮತ್ತು ಹಲಸೂರು ತಾಲೂಕಾ ಕೇಂದ್ರಗಳಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಉದಂಡಪ್ಪ ಅವರ ನೇತೃತ್ವದಲ್ಲಿ ಸಭೆಯ್ ನಡೆಯಲಿದೆ.
ಉಮೇಶ ಬಿ.ಕೆ. ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಬೀದರ ಅವರ ಆದೇಶದ ಮೇರೆಗೆ ಬೀದರ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಉದಂಡಪ್ಪ ಅವರ ನೇತೃತ್ವದಲ್ಲಿ ಫೆಬ್ರುವರಿ.24 ರಂದು ಬಸವಕಲ್ಯಾಣ ಮತ್ತು ಹುಲಸೂರ ತಾಲ್ಲೂಕು ಕೇಂದ್ರದ ಸರಕಾರಿ ಕಛೇರಿಯಲ್ಲಿ ಭ್ರಷ್ಟಾಚಾರ ಮತ್ತು ಕುಂದು ಕೊರತೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಬೀದರ ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಹವಾಲು ಸಭೆಗಳ ವಿವರ: ಫೆಬ್ರುವರಿ.24 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಸವಕಲ್ಯಾಣ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 3 ರಿಂದ 5.30 ರವರಗೆ ಹುಲಸೂರ ಪ್ರವಾಸಿ ಮಂದಿರದಲ್ಲಿ ಸಭೆಗಳು ಜರುಗಲಿವೆ.
ಸಾರ್ವಜನಿಕರಿಗೆ ಸರ್ಕಾರಿ ಕಛೇರಿಗಳಲ್ಲಿ ಕೆಲಸಗಳನ್ನು ವಿಳಂಭ ಮಾಡುತ್ತಿದ್ದರೆ ಕಾರಣ ಇಲ್ಲದೆ ಅರ್ಜಿ ತಿರಸ್ಕರಿಸುತ್ತಿದ್ದರೆ ಅಥವಾ ಕಛೇರಿಗೆ ಅಲೆದಾಡಿಸುತ್ತಿದ್ದರೆ ಅಲ್ಲದೆ, ಸರ್ಕಾರಿ ಕಛೇರಿಗಳಲ್ಲಿ ಕೆಲಸ ಮಾಡಿಕೊಡಲು ಯಾರಾದರೂ ಲಂಚ ಕೇಳಿದರೆ ನಮ್ಮ ಗಮನಕ್ಕೆ ತರಬಹುದಾಗಿದೆ, ಕಾರಣ ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಉಪಾಧೀಕ್ಷಕರು,
ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ, ಎಮ್.ಐ.ಜಿ. ನಂ. 29 ಕೆ.ಎಚ್.ಬಿ.ಕಾಲೋನಿ ಬೀದರ
ದೂರವಾಣಿ ಸಂಖ್ಯೆ: 08482-295445 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.