11/06/2025 7:36 AM

Translate Language

Home » ಲೈವ್ ನ್ಯೂಸ್ » ಬೀದರ|ಮಾರ್ಚ.18 ರಂದು ಲೋಕಾಯುಕ್ತ ಅಹವಾಲು ಸಭೆ.!

ಬೀದರ|ಮಾರ್ಚ.18 ರಂದು ಲೋಕಾಯುಕ್ತ ಅಹವಾಲು ಸಭೆ.!

Facebook
X
WhatsApp
Telegram

ಬೀದರ.15.ಮಾರ್ಚ.25:-ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಬೀದರ ತಾಲ್ಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮಾರ್ಚ.18 ರಂದು ಬೆಳಿಗ್ಗೆ 11.30 ಗಂಟೆಗೆ ಕಮಲನಗರ ಗ್ರಾಮ ಪಂಚಾಯತ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಕುಂದು ಕೊರತೆ/ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಲ ಲೋಕಾಯುಕ್ತ ಪೊಲೀಸ್ ಠಾಣೆ ಬೀದರ ಪೆಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯ ಸಮ್ಮತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಭ್ರಷ್ಟಾಚಾರಕ್ಕೆ ಸಂಬoಧಿಸಿದ ದೂರುಗಳಿದ್ದಲ್ಲಿ ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ

ಎಸ್‌ಪಿ ಮೊ.ಸಂ-9364062519,

ಡಿಎಸ್‌ಪಿ ಮೊಬೈಲ ಸಂ-9364062571,

ಪಿಐ-1  ಮೊಬೈಲ ಸಂ-9364062672,

ಪಿಐ-2 ಅವರ ಮೊ.ಸಂ-9364062673,

ಪಿಐ-3 ಅವರ ಮೊ.ಸಂ-9364062674,

ಪಿಐ-4 ಅವರ ಮೊ.ಸಂ-9364062675, ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!